AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಳ್ಳಿ ಪವರ್​​’ನಲ್ಲಿ ಮೊದಲ ವಾರವೇ ಇಬ್ಬರು ಎಲಿಮಿನೇಟ್; ಸ್ಟ್ರಾಂಗ್ ಸ್ಪರ್ಧಿಯೂ ಔಟ್

Halli Power Elimination: ಹಳ್ಳಿ ಪವರ್ ರಿಯಾಲಿಟಿ ಶೋನಲ್ಲಿ ಎರಡು ಎಲಿಮಿನೇಷನ್ ನಡೆದಿದೆ. ಈ ಶೋನಲ್ಲಿ ಭಿನ್ನವಾಗಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಸಾಮಾನ್ಯವಾಗಿ ರಿಯಾಲಿಟಿ ಶೋಗಳಲ್ಲಿ ಜನರಿಗೆ ವೋಟ್ ಮಾಡುವ ಅವಕಾಶ ಇರುತ್ತದೆ. ಆದರೆ, ‘ಹಳ್ಳಿ ಪವರ್’ನಲ್ಲಿ ಆ ರೀತಿಯ ಆಯ್ಕೆ ಇಲ್ಲ.

‘ಹಳ್ಳಿ ಪವರ್​​’ನಲ್ಲಿ ಮೊದಲ ವಾರವೇ ಇಬ್ಬರು ಎಲಿಮಿನೇಟ್; ಸ್ಟ್ರಾಂಗ್ ಸ್ಪರ್ಧಿಯೂ ಔಟ್
ಹಳ್ಳಿ ಪವರ್
ರಾಜೇಶ್ ದುಗ್ಗುಮನೆ
|

Updated on: Sep 08, 2025 | 7:27 AM

Share

‘ಹಳ್ಳಿ ಪವರ್’ (Halli Power) ರಿಯಾಲಿಟಿ ಶೋ ಜೀ ಪವರ್​ನಲ್ಲಿ ಪ್ರಸಾರ ಕಾಣುತ್ತಿದೆ. ಈ ಶೋಗೆ ಒಟ್ಟು 12 ಸ್ಪರ್ಧಿಗಳು ಆಗಮಿಸಿದ್ದರು. ಅಚ್ಚರಿ ಎಂಬಂತೆ ಮೊದಲ ವಾರವೇ ಇಬ್ಬರು ಎಲಿಮಿನೇಟ್ ಆಗಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಇಬ್ಬರ ಪೈಕಿ ಒಬ್ಬರು ಸ್ಟ್ರಾಂಗ್ ಎನಿಸಿಕೊಂಡಿದ್ದರು. ಆದಾಗ್ಯೂ ಅವರು ಹೊರ ಹೋಗಿರೋದು ಬೇಸರದ ವಿಚಾರ. ಈ ಶೋನಲ್ಲಿ ಭಿನ್ನವಾಗಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಸಾಮಾನ್ಯವಾಗಿ ರಿಯಾಲಿಟಿ ಶೋಗಳಲ್ಲಿ ಜನರಿಗೆ ವೋಟ್ ಮಾಡುವ ಅವಕಾಶ ಇರುತ್ತದೆ. ಆದರೆ, ‘ಹಳ್ಳಿ ಪವರ್’ನಲ್ಲಿ ಆ ರೀತಿಯ ಆಯ್ಕೆ ಇಲ್ಲ. ಆಟ ಆಡಿ ಉತ್ತಮ ಅಂಕ ಗಳಿಸಬೇಕು, ಜೊತೆಗೆ ಸ್ಪರ್ಧಿಗಳೇ ವೋಟ್ ಮಾಡಬೇಕು. ಇವೆರಡನ್ನು ಆಧರಿಸಿ ಎಲಿಮಿನೇಷನ್ ನಡೆಸಲಾಗುತ್ತದೆ. ಈ ವೇಳೆ ಯುಕ್ತಾ ಎಲಿಮಿನೇಟ್ ಆಗಿದ್ದಾರೆ.

ಈ ವಾರ ಡೇಂಜರ್ ಜೋನ್​ನಲ್ಲಿ ಯುಕ್ತಾ, ಚಿನ್ಮಯಿ ಹಾಗೂ ಆ್ಯಶ್ ಮೆಲೋಸ್ ಸ್ಕೈಲರ್ ಇದ್ದರು. ಈ ಪೈಕಿ ಆ್ಯಶ್ ಮೊದಲು ಸೇವ್ ಆದರು. ಆ ಬಳಿಕ ಬಹುತೇಕ ಸ್ಪರ್ಧಿಗಳು ಯುಕ್ತಾ ಅವರ ಹೆಸರನ್ನು ತೆಗೆದುಕೊಂಡು ಹೊರ ಹೋಗಬೇಕು ಎಂದರು. ‘ಅವರು ಡಲ್​ ಆಗಿದ್ದಾರೆ. ತಮ್ಮ ಸಾಮರ್ಥ್ಯವನ್ನು ಸರಿಯಾಗಿ ತೋರಿಸುತ್ತಿಲ್ಲ’ ಎಂದು ಅನೇಕ ಸ್ಪರ್ಧಿಗಳು ಹೇಳಿದರು. ಇದರ ಆಧಾರದ ಮೇಲೆ ಯುಕ್ತಾ ಎಲಿಮಿನೇಟ್ ಆದರು.

ಇದನ್ನೂ ಓದಿ
Image
‘ಸು ಫ್ರಮ್ ಸೋ’ ಒಟಿಟಿ ದಿನಾಂಕ ರಿವೀಲ್; 45ನೇ ದಿನವೂ ಅಬ್ಬರದ ಕಲೆಕ್ಷನ್
Image
ಸೂರ್ಯವಂಶಿ ನಟ ನಿಧನ; ವಾಯು ಪಡೆಯಲ್ಲಿ ಸೇವೆ ಸಲ್ಲಿಸಿ ಚಿತ್ರರಂಗಕ್ಕೆ ಎಂಟ್ರಿ
Image
SIIMA 2025 Telugu: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣಗೆ ಅವಾರ್ಡ್
Image
ಸೈಮಾ 2025: ಸುದೀಪ್ ಅತ್ಯುತ್ತಮ ನಟ, ಸಂಪೂರ್ಣ ವಿನ್ನರ್ ಪಟ್ಟಿ

ಇದನ್ನೂ ಓದಿ: ‘ವಿಜಯಣ್ಣನ ಹೆಸರು ಉಳಿಸಿದೆ’; ‘ಹಳ್ಳಿ ಪವರ್​​’ನಲ್ಲಿ ಮಿಂಚುತ್ತಿರುವ ‘ಭೀಮ’ ಕಲಾವಿದೆ ಆ್ಯಶ್

ಇನ್ನು, ಕುಸ್ತಿ ಸ್ಪರ್ಧೆ ವೇಳೆ ಪ್ರ್ಯಾಕ್ಟಿಸ್ ಮಾಡುವಾಗ ಕಾವ್ಯಾ ಅವರ ಕಾಲಿಗೆ ಪೆಟ್ಟಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೊಗಲಾಯಿತು. ಅವರು ಒಂದು ದಿನ ಬಿಟ್ಟು ಮರಳಿ ಬಂದರು. ಈ ವೇಳೆ ಅವರ ಕಾಲಿಗೆ ದೊಡ್ಡದಾದ ಪ್ಲಾಸ್ಟರ್ ಇತ್ತು. ವೈದ್ಯರು ಈಗಾಗಲೇ ಅವರಿಗೆ ಐದು ವಾರ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಹೀಗಾಗಿ, ಅವರು ಕೂಡ ಔಟ್ ಆಗಿದ್ದಾರೆ. ಕಾವ್ಯಾ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದರು. ಮುಂದಿನ ದಿನಗಳಲ್ಲಿ ಅವರನ್ನು ಮತ್ತೆ ಕರೆಸಿಕೊಳ್ಳೋದಾಗಿ ನಿರೂಪಕ ಅಕುಲ್ ಬಾಲಾಜಿ ಭರವಸೆ ನೀಡಿದರು. ಆದರೆ, ಅದು ಎಷ್ಟರ ಮಟ್ಟಿಗೆ ನಿಜ ಆಗುತ್ತದೆ ಅನ್ನೋದು ಗೊತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!