AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಎಲಿಮಿನೇಷನ್​ನಲ್ಲಿ ಇರಲಿದೆ ಟ್ವಿಸ್ಟ್; ಯಾವಾಗ ಹೊರ ಹೋಗಲಿದ್ದಾರೆ ಇಬ್ಬರು ಸ್ಪರ್ಧಿಗಳು?

ಸಂಗೀತಾ ಶೃಂಗೇರಿ ಈಗಾಗಲೇ ಫಿನಾಲೆ ಟಿಕೆಟ್ ಪಡೆದಿದ್ದಾರೆ. ಉಳಿದ ಆರು ಮಂದಿಯಲ್ಲಿ ನಾಲ್ಕು ಮಂದಿ ಫೈನಲ್ ತಲುಪಲು ಸೆಣೆಸಾಡುತ್ತಿದ್ದಾರೆ. ಈ ಮಧ್ಯೆ ಇಬ್ಬರು ಎಲಿಮಿನೇಟ್​ ಆಗಲೇಬೇಕಿದೆ.

ಬಿಗ್ ಬಾಸ್ ಎಲಿಮಿನೇಷನ್​ನಲ್ಲಿ ಇರಲಿದೆ ಟ್ವಿಸ್ಟ್; ಯಾವಾಗ ಹೊರ ಹೋಗಲಿದ್ದಾರೆ ಇಬ್ಬರು ಸ್ಪರ್ಧಿಗಳು?
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jan 20, 2024 | 2:39 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಕೊನೆಯ ಹಂತ ತಲುಪಿದೆ. ಯಾರು ಔಟ್ ಆಗುತ್ತಾರೆ, ಯಾರು ಉಳಿದುಕೊಳ್ಳುತ್ತಾರೆ ಎನ್ನುವ ಲೆಕ್ಕಾಚಾರ ಆರಂಭ ಆಗಿದೆ. ಈಗ ಸದ್ಯ ಸಂಗೀತಾ ಶೃಂಗೇರಿ, ಕಾರ್ತಿಕ್ ಮಹೇಶ್, ನಮ್ರತಾ ಗೌಡ, ವಿನಯ್ ಗೌಡ, ವರ್ತೂರು ಸಂತೋಷ್, ತುಕಾಲಿ ಸಂತೋಷ್, ಡ್ರೋನ್ ಪ್ರತಾಪ್ ಮಧ್ಯೆ ಸ್ಪರ್ಧೆ ಜೋರಾಗಿದೆ. ಈ ಪೈಕಿ ಒಬ್ಬರು ಕಪ್ ಎತ್ತಲಿದ್ದಾರೆ. ಅದಕ್ಕೂ ಮೊದಲು ಇಬ್ಬರ ಎಲಿಮಿನೇಷನ್ ನಡೆಯಲಿದೆ.

ಫಿನಾಲೆ ಜನವರಿ 27 ಹಾಗೂ 28ರಂದು ನಡೆಯಲಿದೆ. ಕಾರ್ಯಕ್ರಮ ಅದ್ದೂರಿಯಾಗಿ ಮಾಡಲು ಪ್ಲ್ಯಾನ್ ರೂಪಿಸಲಾಗಿದೆ. ಸಂಗೀತಾ ಶೃಂಗೇರಿ ಈಗಾಗಲೇ ಫಿನಾಲೆ ಟಿಕೆಟ್ ಪಡೆದಿದ್ದಾರೆ. ಉಳಿದ ಆರು ಮಂದಿಯಲ್ಲಿ ನಾಲ್ಕು ಮಂದಿ ಫೈನಲ್ ತಲುಪಲು ಸೆಣೆಸಾಡುತ್ತಿದ್ದಾರೆ. ಈ ಮಧ್ಯೆ ಇಬ್ಬರು ಎಲಿಮಿನೇಟ್​ ಆಗಲೇಬೇಕಿದೆ.

ಈ ವಾರ ಐವರು ನಾಮಿನೇಟ್ ಆಗಿದ್ದಾರೆ. ತುಕಾಲಿ ಸಂತೋಷ್ ಹಾಗೂ ಸಂಗೀತಾ ಶೃಂಗೇರಿ ಮಾತ್ರ ಸೇಫ್ ಜೋನ್​ನಲ್ಲಿದ್ದು, ಉಳಿದವರೆಲ್ಲರೂ ಡೇಂಜರ್ ಜೋನ್​ನಲ್ಲಿದ್ದಾರೆ. ಈ ವಾರ ಒಂದು ಎಲಿಮಿನೇಷನ್ ನಡೆಯಲಿದೆ. ಕೆಲವು ಮೂಲಗಳ ಪ್ರಕಾರ ಮುಂದಿನ ವಾರ ಮಧ್ಯದಲ್ಲಿ ಮತ್ತೊಂದು ಎಲಿಮಿನೇಷನ್ ಆಗಲಿದೆ. ಇದಕ್ಕೆ ಮುಂದಿನ ವಾರದ ಆರಂಭದಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಬಿಗ್ ಬಾಸ್ ಮುಗಿದ ಬಳಿಕ ಆ ಜಾಗ ತುಂಬಲು ಬರುತ್ತಿವೆ ಹೊಸ ಧಾರಾವಾಹಿ ಹಾಗೂ ರಿಯಾಲಿಟಿ ಶೋ

ಸಾಮಾನ್ಯವಾಗಿ ಕೊನೆಯ ವಾರದಲ್ಲಿ ಬಿಗ್ ಬಾಸ್ ಎಲ್ಲರನ್ನೂ ನಾಮಿನೇಟ್ ಮಾಡುತ್ತಾರೆ. ಈ ವಾರ ವರ್ತೂರು ಸಂತೋಷ್ ಅಥವಾ ನಮ್ರತಾ ಹೊರ ಹೋಗಬಹುದು ಎಂಬುದು ಕೆಲವರ ಊಹೆ. ಮುಂದಿನ ವಾರ ಎಲ್ಲರೂ (ಫಿನಾಲೆ ಟಿಕೆಟ್ ಪಡೆದ ಸಂಗೀತಾ ಹೊರತುಪಡಿಸಿ) ನಾಮಿನೇಟ್ ಆದರೆ ಅವರಲ್ಲಿ ಒಬ್ಬರು ವಾರದ ಮಧ್ಯದಲ್ಲಿ ಹೊರ ಹೋಗಲಿದ್ದಾರೆ. ಈ ಮೂಲಕ ಐವರು ಫಿನಾಲೆ ತಲುಪಲಿದ್ದಾರೆ. ಈ ಬಾರಿ ಮಹಿಳಾ ಸ್ಪರ್ಧಿ ವಿಜೇತರಾಗಬಹುದು ಎಂಬುದು ಅನೇಕರ ಅಭಿಪ್ರಾಯ. ಸಂಗೀತಾ ಶೃಂಗೇರಿ ಅವರು ಗೆಲುವು ಕಾಣಲಿ ಎಂದು ಅನೇಕರು ಬಯಸುತ್ತಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:39 pm, Sat, 20 January 24

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ