AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಎಲಿಮಿನೇಷನ್​ನಲ್ಲಿ ಇರಲಿದೆ ಟ್ವಿಸ್ಟ್; ಯಾವಾಗ ಹೊರ ಹೋಗಲಿದ್ದಾರೆ ಇಬ್ಬರು ಸ್ಪರ್ಧಿಗಳು?

ಸಂಗೀತಾ ಶೃಂಗೇರಿ ಈಗಾಗಲೇ ಫಿನಾಲೆ ಟಿಕೆಟ್ ಪಡೆದಿದ್ದಾರೆ. ಉಳಿದ ಆರು ಮಂದಿಯಲ್ಲಿ ನಾಲ್ಕು ಮಂದಿ ಫೈನಲ್ ತಲುಪಲು ಸೆಣೆಸಾಡುತ್ತಿದ್ದಾರೆ. ಈ ಮಧ್ಯೆ ಇಬ್ಬರು ಎಲಿಮಿನೇಟ್​ ಆಗಲೇಬೇಕಿದೆ.

ಬಿಗ್ ಬಾಸ್ ಎಲಿಮಿನೇಷನ್​ನಲ್ಲಿ ಇರಲಿದೆ ಟ್ವಿಸ್ಟ್; ಯಾವಾಗ ಹೊರ ಹೋಗಲಿದ್ದಾರೆ ಇಬ್ಬರು ಸ್ಪರ್ಧಿಗಳು?
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jan 20, 2024 | 2:39 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಕೊನೆಯ ಹಂತ ತಲುಪಿದೆ. ಯಾರು ಔಟ್ ಆಗುತ್ತಾರೆ, ಯಾರು ಉಳಿದುಕೊಳ್ಳುತ್ತಾರೆ ಎನ್ನುವ ಲೆಕ್ಕಾಚಾರ ಆರಂಭ ಆಗಿದೆ. ಈಗ ಸದ್ಯ ಸಂಗೀತಾ ಶೃಂಗೇರಿ, ಕಾರ್ತಿಕ್ ಮಹೇಶ್, ನಮ್ರತಾ ಗೌಡ, ವಿನಯ್ ಗೌಡ, ವರ್ತೂರು ಸಂತೋಷ್, ತುಕಾಲಿ ಸಂತೋಷ್, ಡ್ರೋನ್ ಪ್ರತಾಪ್ ಮಧ್ಯೆ ಸ್ಪರ್ಧೆ ಜೋರಾಗಿದೆ. ಈ ಪೈಕಿ ಒಬ್ಬರು ಕಪ್ ಎತ್ತಲಿದ್ದಾರೆ. ಅದಕ್ಕೂ ಮೊದಲು ಇಬ್ಬರ ಎಲಿಮಿನೇಷನ್ ನಡೆಯಲಿದೆ.

ಫಿನಾಲೆ ಜನವರಿ 27 ಹಾಗೂ 28ರಂದು ನಡೆಯಲಿದೆ. ಕಾರ್ಯಕ್ರಮ ಅದ್ದೂರಿಯಾಗಿ ಮಾಡಲು ಪ್ಲ್ಯಾನ್ ರೂಪಿಸಲಾಗಿದೆ. ಸಂಗೀತಾ ಶೃಂಗೇರಿ ಈಗಾಗಲೇ ಫಿನಾಲೆ ಟಿಕೆಟ್ ಪಡೆದಿದ್ದಾರೆ. ಉಳಿದ ಆರು ಮಂದಿಯಲ್ಲಿ ನಾಲ್ಕು ಮಂದಿ ಫೈನಲ್ ತಲುಪಲು ಸೆಣೆಸಾಡುತ್ತಿದ್ದಾರೆ. ಈ ಮಧ್ಯೆ ಇಬ್ಬರು ಎಲಿಮಿನೇಟ್​ ಆಗಲೇಬೇಕಿದೆ.

ಈ ವಾರ ಐವರು ನಾಮಿನೇಟ್ ಆಗಿದ್ದಾರೆ. ತುಕಾಲಿ ಸಂತೋಷ್ ಹಾಗೂ ಸಂಗೀತಾ ಶೃಂಗೇರಿ ಮಾತ್ರ ಸೇಫ್ ಜೋನ್​ನಲ್ಲಿದ್ದು, ಉಳಿದವರೆಲ್ಲರೂ ಡೇಂಜರ್ ಜೋನ್​ನಲ್ಲಿದ್ದಾರೆ. ಈ ವಾರ ಒಂದು ಎಲಿಮಿನೇಷನ್ ನಡೆಯಲಿದೆ. ಕೆಲವು ಮೂಲಗಳ ಪ್ರಕಾರ ಮುಂದಿನ ವಾರ ಮಧ್ಯದಲ್ಲಿ ಮತ್ತೊಂದು ಎಲಿಮಿನೇಷನ್ ಆಗಲಿದೆ. ಇದಕ್ಕೆ ಮುಂದಿನ ವಾರದ ಆರಂಭದಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಬಿಗ್ ಬಾಸ್ ಮುಗಿದ ಬಳಿಕ ಆ ಜಾಗ ತುಂಬಲು ಬರುತ್ತಿವೆ ಹೊಸ ಧಾರಾವಾಹಿ ಹಾಗೂ ರಿಯಾಲಿಟಿ ಶೋ

ಸಾಮಾನ್ಯವಾಗಿ ಕೊನೆಯ ವಾರದಲ್ಲಿ ಬಿಗ್ ಬಾಸ್ ಎಲ್ಲರನ್ನೂ ನಾಮಿನೇಟ್ ಮಾಡುತ್ತಾರೆ. ಈ ವಾರ ವರ್ತೂರು ಸಂತೋಷ್ ಅಥವಾ ನಮ್ರತಾ ಹೊರ ಹೋಗಬಹುದು ಎಂಬುದು ಕೆಲವರ ಊಹೆ. ಮುಂದಿನ ವಾರ ಎಲ್ಲರೂ (ಫಿನಾಲೆ ಟಿಕೆಟ್ ಪಡೆದ ಸಂಗೀತಾ ಹೊರತುಪಡಿಸಿ) ನಾಮಿನೇಟ್ ಆದರೆ ಅವರಲ್ಲಿ ಒಬ್ಬರು ವಾರದ ಮಧ್ಯದಲ್ಲಿ ಹೊರ ಹೋಗಲಿದ್ದಾರೆ. ಈ ಮೂಲಕ ಐವರು ಫಿನಾಲೆ ತಲುಪಲಿದ್ದಾರೆ. ಈ ಬಾರಿ ಮಹಿಳಾ ಸ್ಪರ್ಧಿ ವಿಜೇತರಾಗಬಹುದು ಎಂಬುದು ಅನೇಕರ ಅಭಿಪ್ರಾಯ. ಸಂಗೀತಾ ಶೃಂಗೇರಿ ಅವರು ಗೆಲುವು ಕಾಣಲಿ ಎಂದು ಅನೇಕರು ಬಯಸುತ್ತಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:39 pm, Sat, 20 January 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ