AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಕಿರುತೆರೆ ಕಲಾವಿದೆಗೆ ಹೃದಯಾಘಾತ; ನಟಿ, ನಿರ್ದೇಶಕಿ ಕವಿತಾ ಚೌಧರಿ ನಿಧನ

ಕೇವಲ ನಟಿಯಾಗಿ ಮಾತ್ರವಲ್ಲದೇ ನಿರ್ದೇಶಕಿ ಆಗಿಯೂ ಕವಿತಾ ಚೌಧರಿ ಪ್ರಸಿದ್ಧಿ ಪಡೆದಿದ್ದರು. ಕಿರುತೆರೆ ಕ್ಷೇತ್ರದಲ್ಲಿ ಅವರು ಗುರುತಿಸಿಕೊಂಡಿದ್ದರು. ‘ಉಡಾನ್​’ ಸೀರಿಯಲ್​ನಿಂದ ಅವರು ಮನೆಮಾತಾಗಿದ್ದರು. ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಕವಿತಾ ಚೌಧರಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಖ್ಯಾತ ಕಿರುತೆರೆ ಕಲಾವಿದೆಗೆ ಹೃದಯಾಘಾತ; ನಟಿ, ನಿರ್ದೇಶಕಿ ಕವಿತಾ ಚೌಧರಿ ನಿಧನ
ಕವಿತಾ ಚೌಧರಿ
ಮದನ್​ ಕುಮಾರ್​
|

Updated on: Feb 17, 2024 | 7:04 AM

Share

‘ದೂರದರ್ಶನ’ ವಾಹಿನಿಯಲ್ಲಿ ಜನಪ್ರಿಯವಾಗಿದ್ದ ‘ಉಡಾನ್‌’ ಧಾರಾವಾಹಿಯಲ್ಲಿ (Udaan Serial) ಐಪಿಎಸ್ ಅಧಿಕಾರಿ ಕಲ್ಯಾಣಿ ಸಿಂಗ್ ಎಂಬ ಪಾತ್ರ ಮಾಡಿ ಫೇಮಸ್​ ಆಗಿದ್ದ ನಟಿ ಕವಿತಾ ಚೌಧರಿ (Kavita Chaudhary) ಅವರು ಕೊನೆಯುಸಿರು ಎಳೆದಿದ್ದಾರೆ. ಬಣ್ಣದ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಗುರುವಾರ (ಫೆಬ್ರವರಿ 15) ರಾತ್ರಿ ಹೃದಯಾಘಾತದಿಂದ (Heart Attack) ಮೃತರಾದರು. ಆರೋಗ್ಯದಲ್ಲಿ ಏರುಪೇರು ಆದ ಬಳಿಕ ಅಮೃತಸರದ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿತ್ತು. ಕೂಡಲೇ ಚಿಕಿತ್ಸೆ ನೀಡಲಾಯಿತಾದರೂ ಅವರು ಬದುಕಿ ಉಳಿಯಲಿಲ್ಲ. ಕವಿತಾ ಚೌಧರಿ ಅವರಿಗೆ 67 ವರ್ಷ ವಯಸ್ಸಾಗಿತ್ತು. ಸೀರಿಯಲ್​ ಮಾತ್ರವಲ್ಲದೇ ಜಾಹೀರಾತುಗಳ ಮೂಲಕವೂ ಅವರು ಪ್ರಸಿದ್ಧಿ ಪಡೆದಿದ್ದರು. 80ರ ದಶಕದಲ್ಲಿ ‘ಸರ್ಫ್ ಡಿಟರ್ಜೆಂಟ್’ ಜಾಹೀರಾತುಗಳಲ್ಲಿ ಲಲಿತಾಜಿ ಎಂಬ ಪಾತ್ರ ಮಾಡಿ ಅವರು ಮನೆಮಾತಾಗಿದ್ದರು.

ಕೆಲವೇ ದಿನಗಳ ಹಿಂದೆ ಕವಿತಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರ ನಿಧನದ ಸುದ್ದಿಯನ್ನು ಸೋದರಳಿಯ ಅಜಯ್ ಸಾಯಲ್ ಖಚಿತಪಡಿಸಿದ್ದಾರೆ. ‘ಪಿಟಿಐ’ ಸುದ್ದಿ ಸಂಸ್ಥೆಗೆ ಅವರು ಮಾಹಿತಿ ನೀಡಿದ್ದಾರೆ. ‘ಗುರುವಾರ ರಾತ್ರಿ 8.30ರ ವೇಳೆಗೆ ಅಮೃತಸರದ ಆಸ್ಪತ್ರೆಯಲ್ಲಿ ಅವರು ಹೃದಯ ಸ್ತಂಭನದಿಂದ ಮೃತರಾದರು. ಕೆಲವೇ ದಿನಗಳ ಹಿಂದೆ ಅವರಿಗೆ ರಕ್ತದೊತ್ತಡ ಕಡಿಮೆಯಾಗಿತ್ತು. ಹಾಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರ ಸ್ಥಿತಿ ಗಂಭೀರವಾಗುತ್ತಾ ಹೋಯಿತು. ಶುಕ್ರವಾರ ಬೆಳಿಗ್ಗೆ ಕವಿತಾ ಚೌಧರಿ ಅವರ ಅಂತ್ಯಕ್ರಿಯೆ ನಡೆಸಲಾಯಿತು’ ಎಂದು ಅವರು ಅಜಯ್ ಸಾಯಲ್​ ಹೇಳಿದ್ದಾರೆ.

ಇದನ್ನೂ ಓದಿ: 8 ತಿಂಗಳ ಗರ್ಭಿಣಿ, ಕಿರುತೆರೆ ನಟಿ ಹೃದಯಾಘಾತದಿಂದ ನಿಧನ; ಮಗು ಪರಿಸ್ಥಿತಿ ಏನು?

ನಟಿಯಾಗಿ ಮಾತ್ರವಲ್ಲದೇ ನಿರ್ದೇಶಕಿಯಾಗಿಯೂ ಕವಿತಾ ಚೌಧರಿ ಅವರು ಗುರುತಿಸಿಕೊಂಡಿದ್ದರು. 1989ರಿಂದ 1991ರ ತನಕ ‘ದೂರದರ್ಶನ’ ವಾಹಿನಿಯಲ್ಲಿ ಪ್ರಸಾರವಾದ ‘ಉಡಾನ್​’ ಧಾರಾವಾಹಿಗೆ ಕವಿತಾ ಚೌಧರಿ ಅವರು ನಿರ್ದೇಶನ ಮಾಡಿದ್ದರು. ಮುಖ್ಯ ಪಾತ್ರದಲ್ಲೂ ಅವರೇ ನಟಿಸಿದ್ದರು. ಮಹಿಳೆಯರ ಸಬಲೀಕರಣದ ಕುರಿತಾದ ಕಥೆಯನ್ನು ಆ ಧಾರಾವಾಹಿ ಹೊಂದಿತ್ತು.

ಇದನ್ನೂ ಓದಿ: ಮೆದುಳಿನಲ್ಲಿ ರಕ್ತಸ್ರಾವದಿಂದ ರಂಗಭೂಮಿ ಕಲಾವಿದೆ, ಹಿರಿಯ ನಟಿ ಮಮತಾ ಗೂಡೂರ ನಿಧನ

ವೀಕ್ಷಕರ ಮೇಲೆ ‘ಉಡಾನ್​’ ಧಾರಾವಾಹಿ ಸಾಕಷ್ಟು ಪರಿಣಾಮ ಬೀರಿತ್ತು. ಆ ಕಾಲದಲ್ಲಿ ಅನೇಕ ಮಹಿಳೆಯರು ಪೊಲೀಸ್​ ಇಲಾಖೆಗೆ ಸೇರಲು ಸ್ಫೂರ್ತಿ ನೀಡಿದ ಸೀರಿಯಲ್​ ಅದಾಗಿತ್ತು. ಆ ಕಾರಣದಿಂದ ‘ಉಡಾನ್​’ ಮೆಚ್ಚುಗೆ ಗಳಿಸಿತ್ತು. ಕೊವಿಡ್​ ಸಂದರ್ಭದಲ್ಲಿ ಅನೇಕ ಸೀರಿಯಲ್​ಗಳನ್ನು ದೂರದರ್ಶನ ಮಾಹಿನಿಯಲ್ಲಿ ಮರುಪ್ರಸಾರ ಮಾಡಲಾಗಿತ್ತು. ‘ಉಡಾನ್’ ಕೂಡ ಮತ್ತೊಮ್ಮೆ ಪ್ರಸಾರವಾಗಿ ವೀಕ್ಷಕರನ್ನು ರಂಜಿಸಿತ್ತು. ಕವಿತಾ ಚೌಧರಿ ಅವರ ನಿಧನಕ್ಕೆ ಅಭಿಮಾನಿಗಳು, ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ