ಕನ್ನಡದ ಖಡಕ್​ ವಿಲನ್​ ಉಗ್ರಂ ಮಂಜು ಈಗ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಸ್ಪರ್ಧಿ

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಗ್ರ್ಯಾಂಡ್​ ಓಪನಿಂಗ್​ ಆಗಿದೆ. ಕಿಚ್ಚ ಸುದೀಪ್​ ಅವರು ಸ್ಪರ್ಧಿಗಳನ್ನು ಬರಮಾಡಿಕೊಂಡಿದ್ದಾರೆ. ಕನ್ನಡದ ಖ್ಯಾತ ನಟ ಉಗ್ರಂ ಮಂಜು ಅವರು ಕೂಡ ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದಾರೆ. ಆ ಮೂಲಕ ಅವರು ಪ್ರೇಕ್ಷಕರಿಗೆ ತಮ್ಮ ಇನ್ನೊಂದು ಮುಖ ತೋರಿಸಲು ಬಂದಿದ್ದಾರೆ. ಸ್ವರ್ಗ-ನರಕದ ಕಾನ್ಸೆಪ್ಟ್​ನಲ್ಲಿ ಶೋ ಆರಂಭ ಆಗಿದೆ.

ಕನ್ನಡದ ಖಡಕ್​ ವಿಲನ್​ ಉಗ್ರಂ ಮಂಜು ಈಗ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಸ್ಪರ್ಧಿ
ಉಗ್ರಂ ಮಂಜು
Follow us
|

Updated on: Sep 29, 2024 | 10:58 PM

ಪ್ರಶಾಂತ್​ ನೀಲ್​ ನಿರ್ದೇಶನದ ‘ಉಗ್ರಂ’ ಸಿನಿಮಾದಿಂದ ಅನೇಕರಿಗೆ ಖ್ಯಾತಿ ಸಿಕ್ಕಿತು. ಅಂಥವರ ಪೈಕಿ ಮಂಜು ಕೂಡ ಇದ್ದಾರೆ. ‘ಉಗ್ರಂ’ ಸಿನಿಮಾದಲ್ಲಿ ನೆಗೆಟಿವ್​ ಪಾತ್ರವನ್ನು ಮಂಜು ಮಾಡಿದರು. ಆ ಬಳಿಕ ಅವರ ಹೆಸರಿನ ಜೊತೆ ‘ಉಗ್ರಂ’ ಎಂಬುದು ಕೂಡ ಸೇರಿಕೊಂಡಿತು. ನಂತರ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. ಬಹುತೇಕ ಎಲ್ಲದರಲ್ಲೂ ವಿಲನ್​ ಪಾತ್ರಗಳನ್ನೇ ಮಾಡಿ ಸೈ ಎನಿಸಿಕೊಂಡರು. ಗಮನಾರ್ಹ ಪಾತ್ರಗಳ ಮೂಲಕ ಮಂಜು ಅವರು ಪ್ರೇಕ್ಷಕರಿಗೆ ಹತ್ತಿರ ಆಗಿದ್ದಾರೆ. ಈಗ ಅವರಿಗೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಎಂಬುದು ಹೊಸ ಜರ್ನಿ.

‘ಕಿಡಿ’, ‘ಮಂಜರಿ’, ‘ರುಸ್ತುಂ’, ‘ಭರಾಟೆ’, ‘ಹೀರೋ’, ‘ಎಲ್ಲೋ ಬೋರ್ಡ್​’, ‘ತೂತು ಮಡಿಕೆ’, ‘ಬೈಪಾಸ್​ ರೋಡ್​’, ‘ಕಬ್ಜಾ’, ‘ಅಗ್ರಸೇನಾ’, ‘ಮಾರಕಾಸ್ತ್ರ’, ‘ಕೈವ’, ‘ಮೂರನೇ ಕೃಷ್ಣಪ್ಪ’ ಮುಂತಾದ ಸಿನಿಮಾಗಳಲ್ಲಿ ಉಗ್ರಂ ಮಂಜು ಅವರು ನಟಿಸಿದ್ದಾರೆ. ತಮ್ಮದ ಆದ ಮ್ಯಾನರಿಸಂ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ.

ಉಗ್ರಂ ಮಂಜು ಅವರು ಸಿನಿಮಾದಲ್ಲಿ ಹೇಗೆ ಇರುತ್ತಾರೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ರಿಯಲ್ ಲೈಫ್​ನಲ್ಲಿ ಅವರು ಯಾವ ರೀತಿ ಇದ್ದಾರೆ ಎಂಬುದು ಬಹುತೇಕರಿಗೆ ಗೊತ್ತಿಲ್ಲ. ಅವರ ನಿಜವಾದ ವ್ಯಕ್ತಿತ್ವ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದಿಂದ ಗೊತ್ತಾಗಲಿದೆ. ಸಿನಿಮಾಗಳ ಕೆಲಸಗಳನ್ನು ಸದ್ಯಕ್ಕೆ ಬದಿಗಿಟ್ಟು ಮಂಜು ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ತುಕಾಲಿ ಸಂತು ಪತ್ನಿ ಮಾನಸಾಗೆ ಸವಾಲು ಹಾಕಿ ಬಿಗ್​ ಬಾಸ್​ಗೆ ಬಂದ ನಟಿ ಹಂಸಾ

ಚೈತ್ರಾ ಕುಂದಾಪುರ, ಧನರಾಜ್​, ಭವ್ಯಾ ಗೌಡ, ಗೌತಮಿ ಜಾಧವ್, ಲಾಯರ್​ ಜಗದೀಶ್, ಗೋಲ್ಡ್ ಸುರೇಶ್, ಯಮುನಾ ಶ್ರೀನಿಧಿ, ಅನುಷಾ ರೈ, ಧರ್ಮ ಕೀರ್ತಿರಾಜ್ ಮುಂತಾದ ಸ್ಪರ್ಧಿಗಳು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋಗೆ ಬಂದಿದ್ದಾರೆ. ಈ ಬಾರಿ ಮನೆಯನ್ನು ಸ್ಪರ್ಗ ಮತ್ತು ನರಕ ಎಂದು ಎರಡು ಭಾಗ ಮಾಡಲಾಗಿದೆ. ಹೊಸ ರೀತಿಯಲ್ಲಿ ಈ ಸೀಸನ್​ನ ಆಟವನ್ನು ವಿನ್ಯಾಸ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ