AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಖಡಕ್​ ವಿಲನ್​ ಉಗ್ರಂ ಮಂಜು ಈಗ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಸ್ಪರ್ಧಿ

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಗ್ರ್ಯಾಂಡ್​ ಓಪನಿಂಗ್​ ಆಗಿದೆ. ಕಿಚ್ಚ ಸುದೀಪ್​ ಅವರು ಸ್ಪರ್ಧಿಗಳನ್ನು ಬರಮಾಡಿಕೊಂಡಿದ್ದಾರೆ. ಕನ್ನಡದ ಖ್ಯಾತ ನಟ ಉಗ್ರಂ ಮಂಜು ಅವರು ಕೂಡ ಬಿಗ್​ ಬಾಸ್​ ಮನೆಗೆ ಕಾಲಿಟ್ಟಿದ್ದಾರೆ. ಆ ಮೂಲಕ ಅವರು ಪ್ರೇಕ್ಷಕರಿಗೆ ತಮ್ಮ ಇನ್ನೊಂದು ಮುಖ ತೋರಿಸಲು ಬಂದಿದ್ದಾರೆ. ಸ್ವರ್ಗ-ನರಕದ ಕಾನ್ಸೆಪ್ಟ್​ನಲ್ಲಿ ಶೋ ಆರಂಭ ಆಗಿದೆ.

ಕನ್ನಡದ ಖಡಕ್​ ವಿಲನ್​ ಉಗ್ರಂ ಮಂಜು ಈಗ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಸ್ಪರ್ಧಿ
ಉಗ್ರಂ ಮಂಜು
ಮದನ್​ ಕುಮಾರ್​
|

Updated on: Sep 29, 2024 | 10:58 PM

Share

ಪ್ರಶಾಂತ್​ ನೀಲ್​ ನಿರ್ದೇಶನದ ‘ಉಗ್ರಂ’ ಸಿನಿಮಾದಿಂದ ಅನೇಕರಿಗೆ ಖ್ಯಾತಿ ಸಿಕ್ಕಿತು. ಅಂಥವರ ಪೈಕಿ ಮಂಜು ಕೂಡ ಇದ್ದಾರೆ. ‘ಉಗ್ರಂ’ ಸಿನಿಮಾದಲ್ಲಿ ನೆಗೆಟಿವ್​ ಪಾತ್ರವನ್ನು ಮಂಜು ಮಾಡಿದರು. ಆ ಬಳಿಕ ಅವರ ಹೆಸರಿನ ಜೊತೆ ‘ಉಗ್ರಂ’ ಎಂಬುದು ಕೂಡ ಸೇರಿಕೊಂಡಿತು. ನಂತರ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. ಬಹುತೇಕ ಎಲ್ಲದರಲ್ಲೂ ವಿಲನ್​ ಪಾತ್ರಗಳನ್ನೇ ಮಾಡಿ ಸೈ ಎನಿಸಿಕೊಂಡರು. ಗಮನಾರ್ಹ ಪಾತ್ರಗಳ ಮೂಲಕ ಮಂಜು ಅವರು ಪ್ರೇಕ್ಷಕರಿಗೆ ಹತ್ತಿರ ಆಗಿದ್ದಾರೆ. ಈಗ ಅವರಿಗೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಎಂಬುದು ಹೊಸ ಜರ್ನಿ.

‘ಕಿಡಿ’, ‘ಮಂಜರಿ’, ‘ರುಸ್ತುಂ’, ‘ಭರಾಟೆ’, ‘ಹೀರೋ’, ‘ಎಲ್ಲೋ ಬೋರ್ಡ್​’, ‘ತೂತು ಮಡಿಕೆ’, ‘ಬೈಪಾಸ್​ ರೋಡ್​’, ‘ಕಬ್ಜಾ’, ‘ಅಗ್ರಸೇನಾ’, ‘ಮಾರಕಾಸ್ತ್ರ’, ‘ಕೈವ’, ‘ಮೂರನೇ ಕೃಷ್ಣಪ್ಪ’ ಮುಂತಾದ ಸಿನಿಮಾಗಳಲ್ಲಿ ಉಗ್ರಂ ಮಂಜು ಅವರು ನಟಿಸಿದ್ದಾರೆ. ತಮ್ಮದ ಆದ ಮ್ಯಾನರಿಸಂ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ.

ಉಗ್ರಂ ಮಂಜು ಅವರು ಸಿನಿಮಾದಲ್ಲಿ ಹೇಗೆ ಇರುತ್ತಾರೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ರಿಯಲ್ ಲೈಫ್​ನಲ್ಲಿ ಅವರು ಯಾವ ರೀತಿ ಇದ್ದಾರೆ ಎಂಬುದು ಬಹುತೇಕರಿಗೆ ಗೊತ್ತಿಲ್ಲ. ಅವರ ನಿಜವಾದ ವ್ಯಕ್ತಿತ್ವ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದಿಂದ ಗೊತ್ತಾಗಲಿದೆ. ಸಿನಿಮಾಗಳ ಕೆಲಸಗಳನ್ನು ಸದ್ಯಕ್ಕೆ ಬದಿಗಿಟ್ಟು ಮಂಜು ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ತುಕಾಲಿ ಸಂತು ಪತ್ನಿ ಮಾನಸಾಗೆ ಸವಾಲು ಹಾಕಿ ಬಿಗ್​ ಬಾಸ್​ಗೆ ಬಂದ ನಟಿ ಹಂಸಾ

ಚೈತ್ರಾ ಕುಂದಾಪುರ, ಧನರಾಜ್​, ಭವ್ಯಾ ಗೌಡ, ಗೌತಮಿ ಜಾಧವ್, ಲಾಯರ್​ ಜಗದೀಶ್, ಗೋಲ್ಡ್ ಸುರೇಶ್, ಯಮುನಾ ಶ್ರೀನಿಧಿ, ಅನುಷಾ ರೈ, ಧರ್ಮ ಕೀರ್ತಿರಾಜ್ ಮುಂತಾದ ಸ್ಪರ್ಧಿಗಳು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋಗೆ ಬಂದಿದ್ದಾರೆ. ಈ ಬಾರಿ ಮನೆಯನ್ನು ಸ್ಪರ್ಗ ಮತ್ತು ನರಕ ಎಂದು ಎರಡು ಭಾಗ ಮಾಡಲಾಗಿದೆ. ಹೊಸ ರೀತಿಯಲ್ಲಿ ಈ ಸೀಸನ್​ನ ಆಟವನ್ನು ವಿನ್ಯಾಸ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ