AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊತೆಗೆ ಇದ್ದವರು ಗೆದ್ದರು; ಸೋತು ಸೈಲೆಂಟ್​ ಆದ ಉಗ್ರಂ ಮಂಜು, ಗೌತಮಿ

ಬಿಗ್ ಬಾಸ್ ಆಟದಲ್ಲಿ ಯಾವಾಗ, ಯಾವ ರೀತಿಯ ಟ್ವಿಸ್ಟ್​ ಸಿಗುತ್ತದೆ ಎಂದು ಊಹಿಸೋಕೆ ಆಗಲ್ಲ. ತುಂಬ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡವರ ಆಟ ಅರ್ಧದಲ್ಲೇ ಡಲ್ ಆಗಬಹುದು. ಉಗ್ರಂ ಮಂಜು ಅವರ ವಿಚಾರದಲ್ಲಿ ಹಾಗೆಯೇ ಆಗಿದೆ. ವೈಯಕ್ತಿಕ ಆಟದ ಮೇಲೆ ಗಮನ ಹರಿಸದೇ ಇರುವ ಕಾರಣ ಅವರು ಹಿಂದೆ ಉಳಿಯುವಂತಾಗಿದೆ.

ಜೊತೆಗೆ ಇದ್ದವರು ಗೆದ್ದರು; ಸೋತು ಸೈಲೆಂಟ್​ ಆದ ಉಗ್ರಂ ಮಂಜು, ಗೌತಮಿ
Bigg Boss Kannada
ಮದನ್​ ಕುಮಾರ್​
|

Updated on: Jan 10, 2025 | 10:21 PM

Share

ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋ ಸ್ಪರ್ಧಿಗಳಿಗೆ ಬಹಳ ಮಹತ್ವದ್ದಾಗಿತ್ತು. ಫಿನಾಲೆಯ ಟಿಕೆಟ್ ಪಡೆಯಲು ಹಲವು ಟಾಸ್ಕ್​ಗಳನ್ನು ನೀಡಲಾಗಿತ್ತು. ಆ ಟಾಸ್ಕ್​ಗಳಲ್ಲಿ ಗೆಲ್ಲುವ ನಾಲ್ಕು ಮಂದಿಗೆ ‘ಟಿಕೆಟ್ ಟು ಫಿನಾಲೆ’ ಟಾಸ್ಕ್​ನಲ್ಲಿ ಸ್ಪರ್ಧಿಸುವ ಅವಕಾಶ ಸಿಗುತ್ತಿತ್ತು. ಇದರಲ್ಲಿ ಹನುಮಂತ, ತ್ರಿವಿಕ್ರಮ್, ಭವ್ಯಾ ಗೌಡ ಹಾಗೂ ಮನೆಯ ಕ್ಯಾಪ್ಟನ್ ರಜತ್ ಅವರು ಅವಕಾಶ ಪಡೆದುಕೊಂಡರು. ಆದರೆ ಉಗ್ರಂ ಮಂಜು, ಗೌತಮಿ ಜಾದವ್, ಮೋಕ್ಷಿತಾ ಪೈ ಮತ್ತು ಧನರಾಜ್ ಅವರು ಹಿಂದುಳಿದರು.

ಉಗ್ರಂ ಮಂಜು ಅವರ ಬಗ್ಗೆ ವೀಕ್ಷಕರಿಗೆ ಬಹಳ ಭರವಸೆ ಇತ್ತು. ಯಾಕೆಂದರೆ ಅವರು ಆರಂಭದಲ್ಲಿ ಆ ರೀತಿಯ ಆಟ ಪ್ರದರ್ಶನ ಮಾಡಿದ್ದರು. ಆದರೆ ದಿನ ಕಳೆದಂತೆಲ್ಲ ಅವರ ಆಟ ಮಂಕಾಯಿತು. ಅವರ ಗಮನ ಸರಿಯಾಗಿ ಆಟದ ಮೇಲೆ ಇರಲೇ ಇಲ್ಲ. ಗೌತಮಿ ಜಾದವ್ ಜೊತೆ ಹೆಚ್ಚು ಆಪ್ತವಾಗಿದ್ದ ಅವರು ನಿರೀಕ್ಷಿತ ಪ್ರಮಾಣದಲ್ಲಿ ಟಾಸ್ಕ್​ಗಳನ್ನು ಗೆಲ್ಲಲು ಸಾಧ್ಯವಾಗಲೇ ಇಲ್ಲ.

103ನೇ ದಿನದಲ್ಲಿ ‘ಟಿಕೆಟ್​ ಟು ಫಿನಾಲೆ’ ಟಾಸ್ಕ್ ಆಡಲು ಆಯ್ಕೆಯಾದ ತ್ರಿವಿಕ್ರಮ್, ಭವ್ಯಾ ಗೌಡ, ಹನುಮಂತ ಮತ್ತು ರಜತ್ ಅವರ ವಿಟಿ ಪ್ರದರ್ಶನ ಮಾಡಲಾಯಿತು. ಆ ಎಲ್ಲರ ವಿಟಿಯಲ್ಲೂ ಉಗ್ರಂ ಮಂಜು ಅವರ ತುಣುಕುಗಳು ಇದ್ದವು. ಆದರೆ ಆ ನಾಲ್ಕು ಮಂದಿಗೆ ಸಮನಾಗಿ ನಿಂತುಕೊಳ್ಳಲು ಉಗ್ರಂ ಮಂಜುಗೆ ಆಗಿರಲಿಲ್ಲ. ಆ ವಿಚಾರದಲ್ಲಿ ಮಂಜುಗೆ ಬೇಸರ ಕಾಡಿತು. ಸೈಲೆಂಟ್​ ಆಗಿ ಕುಳಿತುಕೊಂಡು ಅವರು ಮುಖ ಸಣ್ಣಗೆ ಮಾಡಿಕೊಂಡರು.

ಇದನ್ನೂ ಓದಿ: ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಗೌತಮಿ ಜಾದವ್ ಮತ್ತು ಉಗ್ರಂ ಮಂಜು ನಡುವೆ ಮೂಡಿದ ಸ್ನೇಹ ತಪ್ಪಲ್ಲ. ಆದರೆ ಆ ಸ್ನೇಹದ ಕಾರಣದಿಂದಾಗಿ ಅವರು ಆಟದ ಕಡೆಗೆ ಸರಿಯಾಗಿ ಗಮನ ನೀಡದೇ ಇರುವುದೇ ತಪ್ಪು. ಬೇರೆ ಸದಸ್ಯರ ಜೊತೆ ಕೂಡ ಅವರು ಸರಿಯಾಗಿ ಬೆರೆಯಲಿಲ್ಲ. ಇದರಿಂದಾಗಿ ಅವರ ಆಟಕ್ಕೆ ಅಡ್ಡಿ ಉಂಟಾಯಿತು. ಅಂತಿಮವಾಗಿ ಟಿಕೆಟ್​ ಟು ಫಿನಾಲೆ ಟಾಸ್ಕ್​ನಲ್ಲಿ ಭಾಗವಹಿಸುವ ಅವಕಾಶ ತಪ್ಪಿಹೋಯಿತು. ಮುಂದಿನ ಆಟದ ಬಗ್ಗೆ ಗಮನ ಹರಿಸಿ ಎಂದು ಮಂಜುಗೆ ಗೌತಮಿ ಅವರು ಬುದ್ಧಿಮಾತು ಹೇಳಿದ್ದಾರೆ. ಆದರೆ ಇನ್ನು ಉಳಿದಿರುವುದು ಕೆಲವೇ ದಿನಗಳ ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!