AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು-ಮೋಕ್ಷಿತಾ ಸ್ವಾರ್ಥಕ್ಕೆ ರದ್ದಾಯ್ತು ಟಾಸ್ಕ್; ಇಡೀ ಮನೆಗೆ ನಷ್ಟ

ಬಿಗ್ ಬಾಸ್ ಕನ್ನಡದಲ್ಲಿ ಮಂಜು ಮತ್ತು ಮೋಕ್ಷಿತಾ ನಡುವಿನ ಸ್ವಾರ್ಥ ಆಟವು ಟಾಸ್ಕ್ ರದ್ದತಿಗೆ ಕಾರಣವಾಯಿತು. ಆರಂಭದಲ್ಲಿ ಒಳ್ಳೆಯ ಬಾಂಧವ್ಯ ಹೊಂದಿದ್ದ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಯಿತು. ಬಿಗ್ ಬಾಸ್ ಇದರಿಂದ ಬೇಸರಗೊಂಡು ಟಾಸ್ಕ್ ಅನ್ನು ರದ್ದುಗೊಳಿಸಿ, ಸ್ಪರ್ಧಿಗಳಿಗೆ ಶಿಕ್ಷೆ ವಿಧಿಸಿದರು. ಇದು ಮನೆಯ ಮೇಲೆ ದೊಡ್ಡ ಪರಿಣಾಮ ಬೀರಿತು.

ಮಂಜು-ಮೋಕ್ಷಿತಾ ಸ್ವಾರ್ಥಕ್ಕೆ ರದ್ದಾಯ್ತು ಟಾಸ್ಕ್; ಇಡೀ ಮನೆಗೆ ನಷ್ಟ
ಮೋಕ್ಷಿತಾ- ಮಂಜು
ರಾಜೇಶ್ ದುಗ್ಗುಮನೆ
|

Updated on: Nov 29, 2024 | 7:19 AM

Share

‘ಬಿಗ್ ಬಾಸ್​’ನಲ್ಲಿ ಒಂದು ಟಾಸ್ಕ್ ರಚನೆ ಮಾಡಬೇಕು ಎಂದರೆ ಅದಕ್ಕೆ ಸಾಕಷ್ಟು ಜನರ ಶ್ರಮ ಇರುತ್ತದೆ. ಹೀಗಾಗಿ, ಸ್ಪರ್ಧಿಗಳು ಅದನ್ನು ಶ್ರದ್ಧೆಯಿಂದ ಆಡಬೇಕು. ಕೊಟ್ಟ ಟಾಸ್ಕ್​ಗೆ ಗೌರವ ನೀಡಬೇಕು. ಇಲ್ಲವಾದಲ್ಲಿ ಬಿಗ್ ಬಾಸ್​ಗೆ ಕೋಪ ಬರೋದು ಗ್ಯಾರಂಟಿ. ಈಗ ನವೆಂಬರ್ 28ರ ಎಪಿಸೋಡ್​ನಲ್ಲಿ ಹಾಗೆಯೇ ಆಗಿದೆ. ಸ್ಪರ್ಧಿಗಳ ಮಧ್ಯೆ ಕಿತ್ತಾಟ ಜೋರಾಗಿದೆ. ಅದರಲ್ಲೂ ಮಂಜು ಹಾಗೂ ಮೋಕ್ಷಿತಾ ಸ್ವಾರ್ಥದ ಆಟ ಆಡಿದ್ದು, ಇದು ಇಡೀ ಮನೆಯ ಮೇಲೆ ಪರಿಣಾಮ ಬೀರಿದೆ.

‘ಬಿಗ್ ಬಾಸ್​​’ನ ಆರಂಭದ ದಿನಗಳಲ್ಲಿ ಮೋಕ್ಷಿತಾ ಹಾಗೂ ಮಂಜು ಒಂದು ದೇಹ ಎರಡು ಮನಸ್ಸು ಎನ್ನುವ ರೀತಿಯಲ್ಲಿ ಇದ್ದರು. ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಮೋಕ್ಷಿತಾ ಪ್ರೀತಿಯಿಂದ ಮಂಜಣ್ಣ ಎಂದು ಕರೆಯುತ್ತಿದ್ದರು. ಆದರೆ, ಬರುಬರುತ್ತಾ ಕಾಲ ಬದಲಾಯಿತು. ಮಂಜು ಆಟಕ್ಕೋಸ್ಕರ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ ಎಂಬ ವಿಚಾರ ತಿಳಿದ ಬಳಿಕ ಮೋಕ್ಷಿತಾ ಅವರು ಮಂಜುವಿನಿಂದ ದೂರ ಆದರು. ಇದು ಈಗ ದೊಡ್ಡ ಮಟ್ಟಕ್ಕೆ ಹೋಗಿದೆ.

ಬಿಗ್ ಬಾಸ್​ನಲ್ಲಿ ಮಂಜು ರಾಜನಾದರೆ, ಮೋಕ್ಷಿತಾ ಯುವರಾಣಿ (ಸಹೋದರಿ) ಆಗಿದ್ದಾರೆ. ಇಬ್ಬರ ಮಧ್ಯೆ ಕಿತ್ತಾಟ ಇತ್ತು ಎಂಬುದು ಬಿಗ್ ಬಾಸ್ ಹೆಣೆದಿರುವ ಕಥೆ. ಆದರೆ, ಇದನ್ನು ವೈಯಕ್ತಿಕವಾಗಿ ತೆಗೆದುಕೊಂಡು ಹೋಗಿ ಆಟವನ್ನೇ ಹಾಳು ಮಾಡಲಾಗಿದೆ. ಇದು ಬಿಗ್ ಬಾಸ್ ಪ್ರಜೆಗಳ ಮೇಲೆ ಪ್ರಭಾವ ಬೀರಿದೆ.

ಮಣ್ಣಿನಿಂದ ಗುರಾಣಿ ಮಾದರಿಗಳನ್ನು ಮಾಡುವ ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ಮಂಜು ಹಾಗೂ ಯುವರಾಣಿ ಬೇರೆ ಬೇರೆ ತಂಡದಲ್ಲಿದ್ದು, ಉಸ್ತುವಾರಿ ವಹಿಸಿಕೊಂಡಿದ್ದರು. ಆದರೆ, ಸರಿಯಾಗಿ ಉಸ್ತುವಾರಿ ಮಾಡಲಿಲ್ಲ. ಇದರಿಂದ ಬಿಗ್ ಬಾಸ್​ಗೆ ಕೋಪ ಬಂದಿದೆ. ಸ್ವಾರ್ಥ ಮೆರೆದ ಸ್ಪರ್ಧಿಗಳಿಗೆ ಶಿಕ್ಷೆ ನೀಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆ ರಣರಂಗ ಆಗುವಂತಿದೆ ರಜತ್ ಮಾತು; ಹೆಚ್ಚಿದ ಗಲಾಟೆ

‘ನಿಮಗೆ ಆಟದ ಫಲಿತಾಂಶ ಮುಖ್ಯವಲ್ಲ ಎಂಬುದು ಬಿಗ್ ಬಾಸ್​ಗೆ ಅರಿವಾಗಿದೆ. ನಿಮಗೆ ಇದು ಮುಖ್ಯ ಅಲ್ಲದಿದ್ದರೂ ಬಿಗ್ ಬಾಸ್​ಗೆ ಹಾಗೂ ವೀಕ್ಷಕರಿಗೆ ಮುಖ್ಯ. ಹೀಗಾಗಿ, ಈ ಟಾಸ್ಕ್​ನ ಉಸ್ತುವಾರಿಯನ್ನು ಬಿಗ್ ಬಾಸ್ ವಹಿಸಿಕೊಳ್ಳುತ್ತಾರೆ’ ಎಂದು ಹೇಳಿದ ಬಿಗ್ ಬಾಸ್, ಆಟವನ್ನೇ ರದ್ದು ಮಾಡಿದರು. ಇದನ್ನು ಕೇಳಿ ಇಡೀ ಮನೆಗೆ ಶಾಕ್ ಆಯಿತು. ಇದರಿಂದ ಮನೆಗೆ ನಷ್ಟ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ