AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಮ್ ಮುಖವಾಡ ಬಯಲು ಮಾಡಿದ ಉಗ್ರಂ ಮಂಜು; ಹೆಚ್ಚಿತು ದ್ವೇಷ

ಮೊದಲಿಗೆ ಕ್ಯಾಪ್ಟೆನ್ಸಿ ಟಾಸ್ಕ್​ನಲ್ಲಿ ತ್ರಿವಿಕ್ರಮ್ ಅವರಿಗೆ ಉಗ್ರಂ ಮಂಜು ಸಹಾಯ ಮಾಡಿದ್ದರು. ಆದರೆ ನಂತರದ ವಾರದಲ್ಲಿ ಉಗ್ರಂ ಮಂಜು ಅವರು ಕ್ಯಾಪ್ಟನ್ ಆಗುವ ಅವಕಾಶಕ್ಕೆ ತ್ರಿವಿಕ್ರಮ್ ಕಲ್ಲು ಹಾಕಿದ್ದರು. ನಾಮಿನೇಷನ್​ ಸಂದರ್ಭದಲ್ಲಿ ಈ ಬಗ್ಗೆ ಮಂಜು ಗರಂ ಆಗಿ ಮಾತನಾಡಿದ್ದಾರೆ. ಅಲ್ಲದೇ, ಬೇರೆ ಸ್ಪರ್ಧಿಗಳನ್ನು ತ್ರಿವಿಕ್ರಮ್ ಹೇಗೆ ತಮ್ಮತ್ತ ಸೆಳೆಯುತ್ತಾರೆ ಎಂಬುದನ್ನು ಕೂಡ ಮಂಜು ತಿಳಿಸಿದ್ದಾರೆ.

ತ್ರಿವಿಕ್ರಮ್ ಮುಖವಾಡ ಬಯಲು ಮಾಡಿದ ಉಗ್ರಂ ಮಂಜು; ಹೆಚ್ಚಿತು ದ್ವೇಷ
ಉಗ್ರಂ ಮಂಜು, ತ್ರಿವಿಕ್ರಮ್
Follow us
ಮದನ್​ ಕುಮಾರ್​
|

Updated on: Nov 19, 2024 | 11:01 PM

ಬಿಗ್ ಬಾಸ್ ಮನೆಯಲ್ಲಿ ತ್ರಿವಿಕ್ರಮ್ ಅವರು ಸ್ಟ್ರಾಂಗ್ ಸ್ಪರ್ಧಿ ಎಂದು ಗುರುತಿಸಿಕೊಂಡಿದ್ದಾರೆ. ಅವರಿಗೆ ಉಗ್ರಂ ಮಂಜು ಅವರು ನೇರವಾಗಿ ಪೈಪೋಟಿ ನೀಡುತ್ತಿದ್ದಾರೆ. ಈ ವಾರದ ನಾಮಿನೇಷನ್​ ಪ್ರಕ್ರಿಯೆಯಲ್ಲಿ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ತ್ರಿವಿಕ್ರಮ್ ಅವರನ್ನು ನಾಮಿನೇಟ್ ಮಾಡುವಾಗ ಉಗ್ರಂ ಮಂಜು ಅವರು ಒಂದಷ್ಟು ಕಾರಣಗಳನ್ನು ನೀಡಿದ್ದಾರೆ. ಆ ಮೂಲಕ ತ್ರಿವಿಕ್ರಮ್ ಅವರ ಮುಖವಾಡ ಕಳಚುವ ಪ್ರಯತ್ನವನ್ನು ಉಗ್ರಂ ಮಂಜು ಮಾಡಿದ್ದಾರೆ. ಈ ವೇಳೆ ಇಬ್ಬರೂ ಏರು ಧ್ವನಿಯಲ್ಲಿ ವಾದ ಮಾಡಿಕೊಂಡಿದ್ದಾರೆ.

ಮೊದಲು ಮೋಕ್ಷಿತಾ ಅವರು ಉಗ್ರಂ ಮಂಜು ಜೊತೆ ಚೆನ್ನಾಗಿ ಇದ್ದರು. ಆದರೆ ಮೋಕ್ಷಿತಾ ಅವರನ್ನು ತಮ್ಮತ್ತ ಸೆಳೆದುಕೊಳ್ಳಬೇಕು ಎಂಬ ಕಾರಣಕ್ಕಾಗಿ ತ್ರಿವಿಕ್ರಮ್ ಅವರು ಒಂದು ಪ್ಲ್ಯಾನ್ ಮಾಡಿದ್ದರು. ‘ನಿಮ್ಮ ಜೊತೆ ನಾನು ಆಟ ಆಡಬೇಕು’ ಎಂದು ಮೋಕ್ಷಿತಾ ಜೊತೆ ಕೈ ಜೋಡಿಸಲು ತ್ರಿವಿಕ್ರಮ್ ಪ್ರಯತ್ನಿಸಿದ್ದರು. ಅದೇ ಸಮಯಕ್ಕೆ ಮೋಕ್ಷಿತಾ ಅವರು ಉಗ್ರಂ ಮಂಜು ಜೊತೆ ಸ್ನೇಹ ಕೆಡಿಸಿಕೊಂಡರು. ಅವರ ಈ ಬದಲಾವಣೆ ಹಿಂದೆ ತ್ರಿವಿಕ್ರಮ್ ಅವರ ಕುತಂತ್ರ ವರ್ಕ್ ಆಗಿದೆ ಎಂಬುದು ಮಂಜು ವಾದ.

ಈ ಮೊದಲು ಕ್ಯಾಪ್ಟೆನ್ಸಿ ಆಟದಲ್ಲಿ ತ್ರಿವಿಕ್ರಮ್ ಅವರಿಗೆ ಉಗ್ರಂ ಮಂಜು ಸಹಾಯ ಮಾಡಿದ್ದರು. ಮುಂದಿನ ಬಾರಿ ಉಗ್ರಂ ಮಂಜುಗೆ ತಾವು ಸಪೋರ್ಟ್ ಮಾಡುವುದಾಗಿ ತ್ರಿವಿಕ್ರಮ್ ಮಾತು ನೀಡಿದ್ದರು. ಆದರೆ ಆ ಮಾತಿಗೆ ತಕ್ಕಂತೆ ತ್ರಿವಿಕ್ರಮ್ ನಡೆದುಕೊಂಡಿಲ್ಲ ಎಂದು ಮಂಜು ವಾದ ಮಾಡಿದ್ದಾರೆ. ಅಲ್ಲದೇ, ತ್ರಿವಿಕ್ರಮ್ ಅವರದ್ದು ಬೇರೆಯವರನ್ನು ತುಳಿದು ಮುಂದೆ ಸಾಗುವ ವ್ಯಕ್ತಿತ್ವ ಎಂದು ಮಂಜು ಖಂಡಿಸಿದ್ದಾರೆ.

ಇದನ್ನೂ ಓದಿ: ಮಂಜು-ಮೋಕ್ಷಿತಾ ನಡುವೆ ದುಷ್ಮನಿ; ಉಗ್ರಂ ನಟನ ವಿರುದ್ಧ ತೊಡೆ ತಟ್ಟಿದ ತ್ರಿವಿಕ್ರಮ್

ಎಲ್ಲ ಟಾಸ್ಕ್​ನಲ್ಲಿಯೂ ತ್ರಿವಿಕ್ರಮ್ ಅವರು ಅಗ್ರೆಸಿವ್ ಆಗಿ ಆಡುತ್ತಾರೆ. ಹಾಗಾಗಿ ಅವರನ್ನು ಸ್ಟ್ರಾಂಗ್ ಸ್ಪರ್ಧಿ ಎಂದು ಎಲ್ಲರೂ ಪರಿಗಣಿಸಿದ್ದಾರೆ. ಅವರ ಜೊತೆ ಕೈ ಜೋಡಿಸಬೇಕು ಎಂಬ ಕಾರಣದಿಂದ ಚೈತ್ರಾ ಅವರು ಕಳೆದ ವಾರ ಶಿಶಿರ್ ಜೊತೆ ಜೋಡಿ ಮುರಿದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಆದರೆ ಅದರಿಂದಾಗಿ ಚೈತ್ರಾ ಅವರಿಗೆ ಮುಳುವಾಯಿತು. ತ್ರಿವಿಕ್ರಮ್ ಅವರು ಚೈತ್ರಾ ಬದಲು ಭವ್ಯಾ ಅವರನ್ನು ಆಯ್ಕೆ ಮಾಡಿಕೊಂಡರು. ಭವ್ಯಾ ಕ್ಯಾಪ್ಟನ್ ಆದರು. ಚೈತ್ರಾಗೆ ಸಿಕ್ಕಿದ್ದು ಕಪ್ಪು ಚುಕ್ಕಿ ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ