AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ಕೊಟ್ಟು ಮೋಸ ಮಾಡಿದ ಮಂಜು; ಗೆಳೆಯನಿಗೆ ಪಾಠ ಮಾಡ್ತಾರಾ ಸುದೀಪ್?

ಈ ವಾರ ಬಿಗ್ ಬಾಸ್ ಕನ್ನಡದಲ್ಲಿ ಮಂಜು ಅವರು ತಮ್ಮ ತಂಡದ ಸದಸ್ಯರೊಂದಿಗೆ ಕುತಂತ್ರದ ಆಟ ಆಡಿದ್ದಾರೆ. ಭವ್ಯಾ ಗೌಡರಿಗೆ ಮಾತು ಕೊಟ್ಟು ಮೋಸ ಮಾಡಿದ್ದಾರೆ ಮತ್ತು ಸುರೇಶ್ ಅವರನ್ನು ಕಡೆಗಣಿಸಿದ್ದಾರೆ. ಇದರಿಂದ ಅವರ ತಂಡದ ಸದಸ್ಯರಿಗೆ ಬೇಸರವಾಗಿದೆ. ಸುದೀಪ್ ಅವರು ಮಂಜು ಅವರಿಗೆ ಖಚಿತವಾಗಿ ಒಂದು ಉಪದೇಶ ಮಾಡುವ ಸಾಧ್ಯತೆ ಇದೆ.

ಮಾತು ಕೊಟ್ಟು ಮೋಸ ಮಾಡಿದ ಮಂಜು; ಗೆಳೆಯನಿಗೆ ಪಾಠ ಮಾಡ್ತಾರಾ ಸುದೀಪ್?
ರಾಜೇಶ್ ದುಗ್ಗುಮನೆ
|

Updated on:Nov 09, 2024 | 10:56 AM

Share

ಉಗ್ರಂ ಮಂಜು ಅವರು ಈ ವಾರ ಸಾಕಷ್ಟು ಕುತಂತ್ರದ ಆಟ ಆಡಿದ್ದರು. ಆದಾಗ್ಯೂ ಆಪ್ತ ಬಳಗದಿಂದ ಅವರು ಉತ್ತಮ ಪಡೆದರು. ಈ ಬಗ್ಗೆ ಕೆಲವರಿಗೆ ಬೇಸರ ಇದೆ. ಇಷ್ಟೇ ಅಲ್ಲ, ಭವ್ಯಾ ಗೌಡಗೆ ಮಾತು ಕೊಟ್ಟು ಮೋಸ ಮಾಡಿದ್ದಾರೆ. ಈ ವಿಚಾರದಲ್ಲಿ ಸುದೀಪ್ ಅವರು ಮಂಜುಗೆ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಂಜು ಮಾಡಿದ ತಪ್ಪೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಮಂಜು, ಗೋಲ್ಡ್ ಸುರೇಶ್, ಭವ್ಯಾ ಗೌಡ ಈ ವಾರ ಒಂದೇ ತಂಡದಲ್ಲಿ ಇದ್ದರು. ಪ್ರತಿ ಹಂತದಲ್ಲೂ ಭವ್ಯಾ ಉತ್ತಮವಾಗಿ ಆಡಿದ್ದಾರೆ. ಭವ್ಯಾ ಅವರ ಆಟದಿಂದ ಮಂಜು ತಂಡ ಅನೇಕ ಬಾರಿ ಗೆದ್ದಿದೆ. ಇದು ಮಂಜು ಅವರ ಗಮನಕ್ಕೂ ಬಂದಿತ್ತು. ಮತ್ತೊಂದು ಕಡೆ ಆಟ ಆಡುವಾಗ ಸುರೇಶ್ ಗಾಯ ಮಾಡಿಕೊಂಡರು. ಈ ಮಧ್ಯೆ ಮಂಜು ಅವರು ಭವ್ಯಾ ಗೌಡ ಅವರಿಗೆ ಒಂದು ಭರವಸೆ ನೀಡಿದ್ದರು.

‘ಕ್ಯಾಪ್ಟನ್ಸಿ ಇರೋ ಒಂದು ವಾರದಲ್ಲಿ ನಿನ್ನನ್ನು ಮೊದಲು ಸೇವ್ ಮಾಡ್ತೀನಿ. ಇಡೀ ವಾರದಲ್ಲಿ ಇಮ್ಯುನಿಟಿ ಬರುತ್ತದೆಯೋ ಅದು ನನ್ನ ತಂಡಕ್ಕೆ ಕೊಡೋದು’ ಎಂದು ಮಂಜು ಅವರು ಹೇಳಿದ್ದರು. ಆದರೆ, ಇದಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದರು ಮಂಜು.

ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಅವರು ಕ್ಯಾಪ್ಟನ್ಸಿ ರೇಸ್​ನಲ್ಲಿ ಇದ್ದರು. ಅವರಿಗೆ ವಿರುದ್ಧವಾಗಿ ಮಂಜು ವೋಟ್ ಮಾಡಿದ್ದಾರೆ. ಇದನ್ನು ಭವ್ಯಾ ಬಳಿ ಸಹಿಸಿಕೊಳ್ಳೋಕೆ ಆಗಿಲ್ಲ. ಮತ್ತೊಂದು ಕಡೆಯಲ್ಲಿ ಗೋಲ್ಡ್ ಸುರೇಶ್ ಅವರನ್ನು ಕಳಪೆ ಎಂದು ಮಂಜು ಘೋಷಣೆ ಮಾಡಿದ್ದಾರೆ. ‘ನನ್ನ ತಂಡದವರೇ ನನಗೆ ಕಳಪೆ ಕೊಟ್ರಲ್ಲ’ ಎಂದು ಸುರೇಶ್ ಬೇಸರ ಮಾಡಿಕೊಂಡಿದ್ದಾರೆ. ತಂಡಕ್ಕೋಸ್ಕರ ಆಡಿ, ಗಾಯ ಮಾಡಿಕೊಂಡರೂ ಕೊನೆಗೆ ಸಿಕ್ಕಿದ್ದು ಕೇವಲ ಕಳಪೆ ಎಂದು ಅವರಿಗೆ ಬೇಸರ ಆಗಿದೆ.

ಇದನ್ನೂ ಓದಿ: ಮಂಜು ಕುತಂತ್ರಕ್ಕೆ ಬಲಿಯಾದ್ರಾ ಭವ್ಯಾ? ಕ್ಯಾಪ್ಟನ್ ಪಟ್ಟ ಜಸ್ಟ್ ಮಿಸ್

ಮಂಜು ಹಾಗೂ ಸುದೀಪ್ ಮಧ್ಯೆ ಮೊದಲಿನಿಂದ ಗೆಳೆತನ ಇದೆ. ಈ ವಿಚಾರದಲ್ಲಿ ಸುದೀಪ್ ಅವರು ಮಂಜುಗೆ ಕ್ಲಾಸ್ ತೆಗೆದುಕೊಳ್ಳಲಿ ಎಂದು ಅನೇಕರು ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:55 am, Sat, 9 November 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು