AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌತಮಿಗಾಗಿ ಕಣ್ಣೀರು ಹಾಕುತ್ತಾ, ಕುಟುಂಬದವರಿಗೆ ಕ್ಷಮೆ ಕೇಳಿದ ಉಗ್ರಂ ಮಂಜು

ಉಗ್ರಂ ಮಂಜು ಹಾಗೂ ಗೌತಮಿ ಜಾದವ್ ಅವರು ಬಿಗ್ ಬಾಸ್ ಮನೆಯಲ್ಲಿ ಸಿಕ್ಕಾಪಟ್ಟೆ ಆಪ್ತತೆ ಬೆಳೆಸಿಕೊಂಡಿದ್ದಾರೆ. ಈಗಂತೂ ಗೌತಮಿಗಾಗಿ ಉಗ್ರಂ ಮಂಜು ಅವರು ಕಣ್ಣೀರು ಹಾಕಿದ್ದಾರೆ. ಸಂಕ್ರಾಂತಿ ಸ್ಪೆಷಲ್ ಎಪಿಸೋಡ್​ನಲ್ಲಿ ಮಂಜು ಅವರು ಗೌತಮಿ ಬಗ್ಗೆ ಮಾತನಾಡಿದರು. ಈ ವೇಳೆ ಅವರು ಸಖತ್ ಎಮೋಷನಲ್ ಆದರು.

ಗೌತಮಿಗಾಗಿ ಕಣ್ಣೀರು ಹಾಕುತ್ತಾ, ಕುಟುಂಬದವರಿಗೆ ಕ್ಷಮೆ ಕೇಳಿದ ಉಗ್ರಂ ಮಂಜು
Ugram Manju
ಮದನ್​ ಕುಮಾರ್​
|

Updated on: Jan 15, 2025 | 10:24 PM

Share

ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸುವ ಉಗ್ರಂ ಮಂಜು ಅವರು ಬಿಗ್ ಬಾಸ್ ಮನೆಯೊಳಗೆ ಗೌತಮಿ ಜಾದವ್ ಎದುರು ಮೆತ್ತಗಾಗಿದ್ದಾರೆ. ಮೊದಲಿದ್ದ ಆರ್ಭಟ ಕಾಣಿಸುತ್ತಲೇ ಇಲ್ಲ. ಗೌತಮಿ ವಿಚಾರದಲ್ಲಿ ಉಗ್ರಂ ಮಂಜು ಅವರು ತುಂಬ ಬದಲಾಗಿದ್ದಾರೆ ಎಂದರೆ ತಪ್ಪಿಲ್ಲ. ಇಬ್ಬರ ನಡುವೆ ಎಷ್ಟರಮಟ್ಟಿಗೆ ಆಪ್ತತೆ ಬೆಳೆದಿದೆ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತದೆ. ಬುಧವಾರದ (ಜನವರಿ 15) ಸಂಚಿಕೆಯಲ್ಲಿ ಗೌತಮಿ ಬಗ್ಗೆ ಮಾತನಾಡುವಾಗ ಉಗ್ರಂ ಮಂಜು ಅವರು ಭಾವುಕರಾದರು. ಎಲ್ಲರ ಎದುರು ಅವರು ಅತ್ತರು. ನಟಿ ತಾರಾ ಕೂಡ ಈ ವೇಳೆ ಬಿಗ್ ಬಾಸ್ ಮನೆಯಲ್ಲಿ ಇದ್ದರು.

ಸಂಕ್ರಾಂತಿ ವಿಶೇಷ ಸಂಚಿಕೆಯ ಸಲುವಾಗಿ ಹಿರಿಯ ನಟಿ ತಾರಾ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಬಂದಿದ್ದರು. ಎಲ್ಲರಿಗೂ ಅವರು ಹಬ್ಬದ ಊಟ ಮತ್ತು ಎಳ್ಳು-ಬೆಲ್ಲ ನೀಡಿದರು. ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡಬೇಕು. ನಮ್ಮ ನಡುವೆ ಇರುವ ಮನಸ್ತಾಪವನ್ನು ಇಲ್ಲಿಯೇ ಸರಿಪಡಿಸಿಕೊಳ್ಳೋಣ ಎಂದು ಹೇಳಿದ ತಾರಾ ಅವರು ಸ್ಪರ್ಧಿಗಳಿಗೆ ಮನದ ಮಾತು ಹಂಚಿಕೊಳ್ಳಲು ಅವಕಾಶ ನೀಡಿದರು.

ಉಗ್ರಂ ಮಂಜು ಅವರು ಎಲ್ಲರ ಎದುರು ನಿಂತು ಗೌತಮಿಯ ಕುರಿತು ಹೇಳಿದರು. ತಮಗೆ ಗೌತಮಿ ಜೊತೆ ಆಪ್ತತೆ ಬೆಳೆಯಲು ಕಾರಣ ಏನು ಎಂಬುದನ್ನು ಕೂಡ ವಿವರಿಸಿದರು. ತಮ್ಮ ಬಗ್ಗೆ ಕಾಳಜಿ ತೋರಿದ್ದರಿಂದ ಈ ರೀತಿ ಸ್ನೇಹ ಬೆಳೆಯಿತು ಎಂದು ಮಂಜು ಹೇಳಿದರು. ‘ತಂಗಿಯರು ಮದುವೆ ಆಗಿ ಹೋದ ಬಳಿಕ ನಾನು ಒಂಟಿಯಾಗಿದ್ದೆ. ಊಟದ ವಿಚಾರದಲ್ಲಿ ಯಾರಾದರೂ ಕಾಳಜಿ ತೋರಿಸಿದರೆ ಎಮೋಷನಲ್ ಆಗುತ್ತೇನೆ’ ಎಂದು ಉಗ್ರಂ ಮಂಜು ಅವರು ಹೇಳಿದರು.

ಇದನ್ನೂ ಓದಿ: ಮತ್ತೆ ಒಂದಾದ ಮಂಜು, ಮೋಕ್ಷಿತಾ, ಗೌತಮಿ; ಇದೇನು ಹೊಸ ಡ್ರಾಮಾ?

ಗೌತಮಿ ಜೊತೆ ಉಗ್ರಂ ಮಂಜು ಕ್ಲೋಸ್ ಆಗಿದ್ದರಿಂದ ಕೆಲವರಿಗೆ ಬೇಸರ ಆಗಿರಬಹುದು. ಸ್ನೇಹದಿಂದಾಗಿ ಗೌತಮಿಯ ಆಟದ ಮೇಲೆ ಕೂಡ ಪರಿಣಾಮ ಬೀರಿರಬಹುದು. ಇದರಿಂದಾಗಿ ಗೌತಮಿ ಅವರ ಕುಟುಂಬಕ್ಕೆ ಹಾಗೂ ಅವರನ್ನು ಇಷ್ಟಪಡುವವರಿಗೆ ನೋವಾಗಿರಬಹುದು. ಹಾಗಾಗಿ ಗೌತಮಿಯ ಕುಟುಂಬದವರಿಗೆ ಉಗ್ರಂ ಮಂಜು ಕ್ಷಮೆ ಕೇಳಿದರು. ಮಂಜು ಅವರು ಭಾವುಕವಾಗಿ ಮಾತನಾಡಿದ್ದರಿಂದ ಗೌತಮಿ ಕೂಡ ಕಣ್ಣೀರು ಹಾಕಿದ್ದಾರೆ. ಇಬ್ಬರೂ ತಮ್ಮ ನಡುವಿನ ಸ್ನೇಹವನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಅನೇಕ ಬಾರಿ ಅವರಿಗೆ ಸಾಧ್ಯವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ