AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಕುತಂತ್ರಕ್ಕೆ ಬಲಿಯಾದ್ರಾ ಭವ್ಯಾ? ಕ್ಯಾಪ್ಟನ್ ಪಟ್ಟ ಜಸ್ಟ್ ಮಿಸ್

ಬಿಗ್ ಬಾಸ್ ಕನ್ನಡದಲ್ಲಿ ಭವ್ಯಾ ಗೌಡ ಅವರ ಪ್ರದರ್ಶನ ಮತ್ತು ಮಂಜು ಅವರ ಕುತಂತ್ರದ ಆಟದ ಬಗ್ಗೆ ಈ ವಾರ ಚರ್ಚೆ ಆಗುತ್ತಿದೆ. ಭವ್ಯಾ ಅವರು ಉತ್ತಮವಾಗಿ ಆಡಿದರೂ, ಕ್ಯಾಪ್ಟನ್ಸಿ ರೇಸ್‌ನಲ್ಲಿ ಮಂಜು ಅವರ ಒಪ್ಪಂದಗಳಿಂದ ಸೋತರು. ಮಂಜು ಅವರು ತಮ್ಮ ಒಪ್ಪಂದಗಳಿಂದಾಗಿ ಟೀಕೆಗೆ ಗುರಿಯಾಗಿದ್ದಾರೆ ಮತ್ತು ಸುದೀಪ್ ಅವರು ಈ ವಿಷಯವನ್ನು ಪಂಚಾಯ್ತಿಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.

ಮಂಜು ಕುತಂತ್ರಕ್ಕೆ ಬಲಿಯಾದ್ರಾ ಭವ್ಯಾ? ಕ್ಯಾಪ್ಟನ್ ಪಟ್ಟ ಜಸ್ಟ್ ಮಿಸ್
ಭವ್ಯಾ ಗೌಡ
ರಾಜೇಶ್ ದುಗ್ಗುಮನೆ
|

Updated on: Nov 09, 2024 | 6:53 AM

Share

ಬಿಗ್ ಬಾಸ್​​ನಲ್ಲಿ ಭವ್ಯಾ ಗೌಡ ಅವರು ಚೆನ್ನಾಗಿ ಆಡುವುದಿಲ್ಲ ಎಂಬುದು ಎಂಬುದು ಅನೇಕರ ಟೀಕೆ ಆಗಿತ್ತು. ಆ ಟೀಕೆಗಳಿಗೆ ಭವ್ಯಾ ಗೌಡ ಅವರು ನೇರವಾಗಿ ಉತ್ತರ ಕೊಟ್ಟಿದ್ದಾರೆ. ಈ ವಾರ ಅವರು ಅತ್ಯುತ್ತಮವಾಗಿ ಆಡುವ ಮೂಲಕ ಭೇಷ್ ಎನಿಸಿಕೊಂಡಿದ್ದಾರೆ. ಕ್ಯಾಪ್ಟನ್ಸಿ ರೇಸ್​ನಲ್ಲಿ ಇದ್ದ ಅವರು ಕೊನೆಯ ಹಂತದಲ್ಲಿ ಎಡವಿದ್ದಾರೆ. ಇದಕ್ಕೆ ಮಂಜು ಕಾರಣ ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಉಗ್ರಂ ಮಂಜು ಅವರು ಭರ್ಜರಿ ತಂತ್ರಗಳ ಮೂಲಕ ಆಟ ಆಡುತ್ತಿದ್ದಾರೆ. ಅವರ ಕುತಂತ್ರಕ್ಕೆ ಅನೇಕರು ಬಲಿಯಾಗಿದ್ದಾರೆ. ಈ ವಾರ ಮಂಜು, ಭವ್ಯಾ ಹಾಗೂ ಗೋಲ್ಡ್ ಸುರೇಶ್ ಒಂದೇ ತಂಡದಲ್ಲಿ ಇದ್ದರು. ಈ ತಂಡ ಟಾಸ್ಕ್ ಗೆಲ್ಲುವಲ್ಲಿ ಭವ್ಯಾ ಅವರ ಕೊಡುಗೆ ತುಂಬಾನೇ ಹೆಚ್ಚಿದೆ. ಇದನ್ನು ಮಂಜು ಅವರು ಗಮನದಲ್ಲಿ ಇಟ್ಟುಕೊಂಡಿಲ್ಲ. ಭವ್ಯಾ ವಿರುದ್ಧವೇ ಅವರು ಮತ ಚಲಾಯಿಸಿದ್ದಾರೆ.

ಭವ್ಯಾ ಹಾಗೂ ತ್ರಿವಿಕ್ರಂ ಅವರು ಈ ಬಾರಿಯ ಕ್ಯಾಪ್ಟನ್ಸಿ ರೇಸ್​​ನಲ್ಲಿ ಇದ್ದರು. ಮನೆಯವರಿಗೇ ಕ್ಯಾಪ್ಟನ್​ನ ಆಯ್ಕೆ ಮಾಡಲು ಅವಕಾಶ ನೀಡಲಾಯಿತು. ಈ ವೇಳೆ ಮಂಜು ಅವರು ಮೂರು ಬಾರಿ ಭವ್ಯಾ ವಿರುದ್ಧ ಮತ ಚಲಾಯಿಸಿದರು. ತಮ್ಮ ಜೊತೆ ಆಪ್ತರಾದವರ ಜೊತೆಯೂ ಭವ್ಯಾ ವಿರುದ್ಧ ವೋಟ್ ಹಾಕುವಂತೆ ಅವರು ಕೋರಿಕೊಂಡಿದ್ದರು.

ತ್ರಿವಿಕ್ರಂ ಪರವಾಗಿ ಮಂಜು ಮಾತನಾಡುವುದಕ್ಕೂ ಒಂದು ಕಾರಣ ಇತ್ತು. ಅದುವೇ ಒಪ್ಪಂದ. ಪ್ರತಿ ಹಂತದಲ್ಲೂ ಮಂಜು ಅವರು ಒಪ್ಪಂದ ಮಾಡಿಕೊಂಡು ಆಟ ಆಡುತ್ತಿದ್ದಾರೆ. ತ್ರಿವಿಕ್ರಂ ಜೊತೆ ಅವರು ಕೆಲವು ಒಪ್ಪಂದ ಮಾಡಿಕೊಂಡಿದ್ದಾರೆ. ಕ್ಯಾಪ್ಟನ್ ಆದರೆ ತಮ್ಮನ್ನು ನಾಮಿನೇಟ್ ಮಾಡದಂತೆ ಅವರು ಕೋರಿದ್ದಾರೆ. ಇದಕ್ಕೆ ತ್ರಿವಿಕ್ರಂ ಓಕೆ ಎಂದ ಬಳಿಕವೇ ಅವರ ಪರವಾಗಿ ವೋಟ್ ಚಲಾಯಿಸಿದ್ದಾರೆ ಮಂಜು. ಕೊನೆಯಲ್ಲಿ ತ್ರಿವಿಕ್ರಂ ಕ್ಯಾಪ್ಟನ್ ಆದರು.

ಇದನ್ನೂ ಓದಿ: ಭವ್ಯಾ-ತ್ರಿವಿಕ್ರಂ ಮಧ್ಯೆ ಕ್ಯಾಪ್ಟನ್ಸಿ ಓಟ; ಟಾಸ್ಕ್ ಇಲ್ಲದೆ ನಾಯಕನ ಆಯ್ಕೆಗೆ ಬಿಗ್ ಬಾಸ್ ಪ್ಲ್ಯಾನ್

ಈ ರೀತಿಯ ಒಪ್ಪಂದದ ಆಟದಿಂದ ಅಸಲಿ ಆಟ ಆಡೋಕೆ ಆಗಲ್ಲ. ಹೀಗಾಗಿ, ಇಂದು (ನವೆಂಬರ್ 9) ಸುದೀಪ್ ಅವರು ಈ ವಿಚಾರವಾಗಿ ಪಂಚಾಯ್ತಿಯಲ್ಲಿ ಮಾತನಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು