AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಗೆ ಮರ್ಯಾದೆ ಕೊಡಲ್ಲ, ಸೆಲೆಬ್ರಿಟಿಗಳೇ ಕೆಟ್ಟ ಕಮೆಂಟ್​​ ಮಾಡ್ತಾರೆ’: ಎಲ್ಲವನ್ನೂ ಹೇಳಿಕೊಂಡ ಉರ್ಫಿ ಜಾವೇದ್​

Urfi Javed: ಇತ್ತೀಚೆಗಿನ ಸಂದರ್ಶನದಲ್ಲಿ ಉರ್ಫಿ ಜಾವೇದ್​ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಕಿರುತೆರೆಯಲ್ಲಿ ತಮಗೆ ಆದ ಕಹಿ ಅನುಭವವನ್ನು ಅವರು ತೆರೆದಿಟ್ಟಿದ್ದಾರೆ.

‘ನಂಗೆ ಮರ್ಯಾದೆ ಕೊಡಲ್ಲ, ಸೆಲೆಬ್ರಿಟಿಗಳೇ ಕೆಟ್ಟ ಕಮೆಂಟ್​​ ಮಾಡ್ತಾರೆ’: ಎಲ್ಲವನ್ನೂ ಹೇಳಿಕೊಂಡ ಉರ್ಫಿ ಜಾವೇದ್​
ಉರ್ಫಿ ಜಾವೇದ್
TV9 Web
| Edited By: |

Updated on: Apr 07, 2022 | 9:05 AM

Share

ನಟಿ ಉರ್ಫಿ ಜಾವೇದ್​ (Urfi Javed) ಅವರು ಹತ್ತು ಹಲವು ಕಾರಣಗಳಿಂದಾಗಿ ಸುದ್ದಿ ಆಗುತ್ತಿದ್ದಾರೆ. ಅವರು ಧರಿಸುವ ಬಟ್ಟೆಗಳು ಚಿತ್ರ-ವಿಚಿತ್ರವಾಗಿ ಇರುತ್ತವೆ. ತಾವೇ ಡಿಸೈನ್ ಮಾಡಿದ ಕಾಸ್ಟ್ಯೂಮ್​ಗಳನ್ನು ಅವರು ಧರಿಸುತ್ತಾರೆ. ಅವರ ಡ್ರೆಸ್​ (Urfi Javed Dress) ಕಂಡು ನೆಟ್ಟಿಗರು ಹಿಗ್ಗಾಮುಗ್ಗಾ ಕಮೆಂಟ್​ ಮಾಡುತ್ತಾರೆ. ಈ ನೆಗೆಟಿವ್ ಕಮೆಂಟ್​ಗಳಿಗೆ ಅವರು ತಲೆ ಕೆಡಿಸಿಕೊಂಡಿಲ್ಲ. ಬಿಗ್​ ಬಾಸ್​ ಒಟಿಟಿ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ ಬಳಿಕ ಉರ್ಫಿ ಜಾವೇದ್​ ಅವರ ಖ್ಯಾತಿ ಹೆಚ್ಚಿತು. ದೊಡ್ಮನೆಯಲ್ಲಿ ಇದ್ದಾಗ ಅವರು ಕಸದ ಚೀಲವನ್ನೇ ಬಳಸಿ ವಸ್ತ್ರ ವಿನ್ಯಾಸ ಮಾಡಿದ್ದರು. ಬಿಗ್​ ಬಾಸ್​ನಿಂದ ಹೊರಬಂದ ಬಳಿಕ ಪ್ರತಿ ದಿನವೂ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಳ್ಳುವ ಉರ್ಫಿ ಜಾವೇದ್​ ಅವರು ಅನೇಕ ಕಿರಿಕ್​ಗಳನ್ನು ಮಾಡಿಕೊಂಡಿದ್ದುಂಟು. ಅವರು ಫೋಟೋಗಳು (Urfi Javed Photos) ಸಖತ್​ ವೈರಲ್​ ಆಗುತ್ತವೆ. ಈಗ ಅವರು ನೇರವಾಗಿ ಕಿರುತೆರೆ ಮಂದಿಯ ಬಗ್ಗೆ ಕೆಂಡ ಕಾರಿದ್ದಾರೆ. ತಮ್ಮನ್ನು ಟಿವಿ ಇಂಡಸ್ಟ್ರೀ ಹೇಗೆ ನಡೆಸಿಕೊಂಡಿದೆ ಎಂಬುದನ್ನು ಅವರು ವಿವರಿಸಿದ್ದಾರೆ. ಕಿರುತೆರೆ ಕಲಾವಿದರ ಬಗ್ಗೆಯೂ ಉರ್ಫಿ ಜಾವೇದ್​ ಅವರು ಗರಂ ಆಗಿದ್ದಾರೆ. ಅಷ್ಟಕ್ಕೂ ಅವರ ಗೋಳು ಏನು? ಆ ಬಗ್ಗೆ ಇಲ್ಲಿದೆ ವಿವರ..

‘ಮಿಸ್​ ಮಾಲಿನಿ’ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಉರ್ಫಿ ಜಾವೇದ್​ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಕಿರುತೆರೆಯಲ್ಲಿ ತಮಗೆ ಆದ ಕಹಿ ಅನುಭವವನ್ನು ಅವರು ತೆರೆದಿಟ್ಟಿದ್ದಾರೆ. ಧಾರಾವಾಹಿಗಳಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬುದು ಉರ್ಫಿ ಜಾವೇದ್​ ಅವರ ಆಸೆ ಆಗಿತ್ತು. ಆದರೆ ಅಲ್ಲಿ ಅವರಿಗೆ ಸಿಕ್ಕಿದ್ದು ಕೇವಲ ಸಣ್ಣ-ಪುಟ್ಟ ಪಾತ್ರಗಳು. ಆ ಬಗ್ಗೆ ಅವರಿಗೆ ಅಸಮಾಧಾನ ಇದೆ.

ಕಿರುತೆರೆಯ ಹಲವು ಶೋಗಳಲ್ಲಿ ಭಾಗವಹಿಸಿದ್ದರೂ ಕೂಡ ಟಿವಿ ಇಂಡಸ್ಟ್ರೀ ಅವರು ತಮಗೆ ಮರ್ಯಾದೆ ಕೊಡಲಿಲ್ಲ ಎಂಬುದು ಉರ್ಫಿ ಜಾವೇದ್​ ತಕರಾರು. ಇಷ್ಟಬಂದ ರೀತಿಯಲ್ಲಿ ಉರ್ಫಿ ಬಟ್ಟೆ ಧರಿಸಿದ್ದಕ್ಕಾಗಿ ಕಿರಿತೆರೆಯ ಸೆಲೆಬ್ರಿಟಿಗಳೇ ಕೆಟ್ಟದಾಗಿ ಕಮೆಂಟ್​ ಮಾಡಿದ್ದಾರೆ. ಅದು ಕೂಡ ಅವರ ಬೇಸರಕ್ಕೆ ಕಾರಣ ಆಗಿದೆ. ‘ನನ್ನ ಫೋಟೋಗಳು ಅಪ್​ಲೋಡ್​ ಆದಾಗ ಅಥವಾ ವೈರಲ್​ ಆದಾಗ ಬ್ಲೂ ಟಿಕ್​ ಇರುವ ಕಿರುತೆರೆಯ ಸೆಲೆಬ್ರಿಟಿಗಳು ಕೆಟ್ಟದಾಗಿ ಕಮೆಂಟ್​ ಮಾಡುತ್ತಾರೆ. ಇವರಿಗೆಲ್ಲ ನಾನೇನು ಅನ್ಯಾಯ ಮಾಡಿದ್ದೇನೆ? ಯಾಕೆ ಈ ರೀತಿಯಾಗಿ ಕೆಟ್ಟ ಕಮೆಂಟ್​ ಮಾಡ್ತಾರೆ’ ಎಂದು ಉರ್ಫಿ ಜಾವೇದ್​ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಎಲ್ಲ ಕಾರಣದಿಂದಾಗಿ ಟಿವಿ ಇಂಡಸ್ಟ್ರೀ ಜೊತೆ ಉರ್ಫಿ ಜಾವೇದ್​ ಅವರಿಗೆ ಸಂಬಂಧ ಕೆಟ್ಟಿದೆ. ಸದ್ಯಕ್ಕಂತೂ ಅವರು ಯಾವುದೇ ಟಿವಿ ಕಾರ್ಯಕ್ರಮದಲ್ಲೂ ಭಾಗಿ ಆಗುತ್ತಿಲ್ಲ. ಇತ್ತೀಚೆಗೆ ‘ಬೇಫಿಕ್ರಾ’ ಮ್ಯೂಸಿಕ್​ ವಿಡಿಯೋದಲ್ಲಿ ಅವರು ಕಾಣಿಸಿಕೊಂಡರು.

ತಾವು ಮುಸ್ಲಿಂ ಧರ್ಮಕ್ಕೆ ಸೇರಿದವರಾಗಿದ್ದರೂ ಕೂಡ ಆ ಧರ್ಮದಲ್ಲಿ ತಮಗೆ ನಂಬಿಕೆ ಉಳಿದಿಲ್ಲ ಎಂದು ಈ ಹಿಂದೆ ಉರ್ಫಿ ಜಾವೇದ್​ ಹೇಳಿಕೆ ನೀಡಿದ್ದರು. ಅಲ್ಲದೇ ತಾವು ಭಗವದ್ಗೀತೆ ಓದುತ್ತಿರುವುದಾಗಿಯೂ ಅವರು ಹೇಳಿದ್ದರು. ಅದರಂತೆಯೇ ಒಂದು ದಿನ ಅವರು ಭಗವದ್ಗೀತೆ ಹಿಡಿದು ಓಡಾಡಿದ ವಿಡಿಯೋ ಸಖತ್​ ವೈರಲ್​ ಆಗಿತ್ತು.

ಚಿತ್ರಸಾಹಿತಿ ಜಾವೇದ್ ಅಖ್ತರ್​ ಅವರಿಗೂ ಉರ್ಫಿ ಜಾವೇದ್​ ಅವರಿಗೂ ಯಾವುದೇ ಸಂಬಂಧ ಇಲ್ಲ. ಇಬ್ಬರ ಹೆಸರಿನಲ್ಲೂ ‘ಜಾವೇದ್​’ ಇದೆ ಅಷ್ಟೇ. ಆ ಕಾರಣಕ್ಕಾಗಿ ಉರ್ಫಿಯನ್ನು ಜಾವೇದ್​ ಅಖ್ತರ್​ ಅವರ ಮೊಮ್ಮಗಳು ಎಂದು ಅನೇಕರು ಭಾವಿಸಿದ್ದಾರೆ. ‘ನಾನು ಜಾವೇದ್​ ಅಖ್ತರ್ ಮೊಮ್ಮಗಳಲ್ಲ’ ಎಂದು ಅವರು ಅನೇಕ ಬಾರಿ ಸ್ಪಷ್ಟಪಡಿಸಿದ್ದಾರೆ. ಒಮ್ಮೆಯಂತೂ ಊರಿಗೆಲ್ಲ ತಿಳಿಯಲಿ ಎಂದು ತಾವು ಧರಿಸಿದ ಟಿ-ಶರ್ಟ್​​ ಮೇಲೆ ‘ನಾನು ಜಾವೇದ್​ ಅಖ್ತರ್ ಮೊಮ್ಮಗಳಲ್ಲ’ ಎಂದು ಪ್ರಿಂಟ್​ ಹಾಕಿಸಿಕೊಂಡು ಬಂದು ಅವರು ಪೋಸ್​ ನೀಡಿದ್ದರು.

ಇದನ್ನೂ ಓದಿ:

‘ಮುಸ್ಲಿಂ ಹುಡುಗನನ್ನು ಮದುವೆ ಆಗಲ್ಲ’: ಬಲವಾದ ಕಾರಣ ನೀಡಿದ ಮುಸ್ಲಿಂ ನಟಿ ಉರ್ಫಿ ಜಾವೇದ್​

ಬ್ಯಾಕ್​ಲೆಸ್​ ಫೋಟೋದಲ್ಲಿ ಮಿಂಚಿದ ಊರ್ಫಿ ಜಾವೇದ್​; ವೈರಲ್​ ಆಗುತ್ತಿದೆ ಫೋಟೋ

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!