AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಟ್​ ಬೆಲ್ಟ್ ಧರಿಸಿದ್ದರೆ ಉಳಿಯುತ್ತಿತ್ತು ಕಿರುತೆರೆ ನಟಿಯ ಜೀವ; ನಿರ್ಲಕ್ಷ್ಯದಿಂದ ಹೋಯಿತು ಪ್ರಾಣ

ವೈಭವಿ ಉಪಾಧ್ಯಾಯ ಅವರು ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸಿರಲಿಲ್ಲ. ಹೀಗಾಗಿ, ಅವರಿಗೆ ಗಂಭೀರ ಗಾಯಗಳು ಆದವು. ವೈಭವಿ ಉಪಾಧ್ಯಾಯ ಸೀಟ್ ಬೆಲ್ಟ್ ಹಾಕಿದ್ದರೆ ಪ್ರಾಣ ಉಳಿಯುತ್ತಿತ್ತು

ಸೀಟ್​ ಬೆಲ್ಟ್ ಧರಿಸಿದ್ದರೆ ಉಳಿಯುತ್ತಿತ್ತು ಕಿರುತೆರೆ ನಟಿಯ ಜೀವ; ನಿರ್ಲಕ್ಷ್ಯದಿಂದ ಹೋಯಿತು ಪ್ರಾಣ
ವೈಭವಿ ವೈಷ್ಣವ್
ರಾಜೇಶ್ ದುಗ್ಗುಮನೆ
|

Updated on: May 25, 2023 | 7:02 AM

Share

ಹಿಂದಿ ಕಿರುತೆರೆ ನಟಿ ವೈಭವಿ ಉಪಾಧ್ಯಾಯ (Vaibhavi Upadhyaya) ಅವರು ಸೋಮವಾರ (ಮೇ 22) ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟರು. ಹಿಮಾಚಲ ಪ್ರದೇಶದಲ್ಲಿ ಅಪಘಾತ ಸಂಭವಿಸಿತ್ತು. ಬುಧವಾರ (ಮೇ 24) ಅವರ ಅಂತ್ಯಕ್ರಿಯೆಯನ್ನು ಮುಂಬೈನಲ್ಲಿ ನಡೆಸಲಾಗಿದೆ. ಚಿತ್ರರಂಗದ ಅನೇಕರು ಅವರ ಅಂತ್ಯಕ್ರಿಯೆಯಲ್ಲಿ ಭಾಗಿ ಆಗಿದ್ದಾರೆ. ವೈಭವಿ ಉಪಾಧ್ಯಾಯ ಅವರು ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸಿರಲಿಲ್ಲ. ಹೀಗಾಗಿ, ಅವರಿಗೆ ಗಂಭೀರ ಗಾಯಗಳು ಆದವು. ವೈಭವಿ ಉಪಾಧ್ಯಾಯ ಸೀಟ್ ಬೆಲ್ಟ್ ಹಾಕಿದ್ದರೆ ಪ್ರಾಣ ಉಳಿಯುತ್ತಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಹಿಂದಿಯ ‘ಸಾರಾಭಾಯ್ vs ಸಾರಾಭಾಯ್​’ ಧಾರಾವಾಹಿ ಮೂಲಕ ವೈಭವಿ ಉಪಾಧ್ಯಾಯ ಫೇಮಸ್ ಆಗಿದ್ದರು.

ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದರು. ಅಲ್ಲಿ ಕಾರಿನಲ್ಲಿ ಸುತ್ತಾಟ ನಡೆಸುತ್ತಿದ್ದರು. ವೈಭವಿ ಅವರ ಜೊತೆ ಕೆಲಸ ಮಾಡಿದ್ದ ಜೆಡಿ ಮಜೇಥಿಯಾ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ವೈಭವಿ ಅವರು ಭಾವಿ ಪತಿ ಜೊತೆ ಹಿಮಾಚಲದಲ್ಲಿದ್ದರು. ಅವರು ಡಿಸೆಂಬರ್‌ನಲ್ಲಿ ಮದುವೆಯಾಗಬೇಕಿತ್ತು. ಅವರು ಸಾಗುತ್ತಿದ್ದ ರಸ್ತೆ ಸಾಕಷ್ಟು ಕಿರಿದಾಗಿತ್ತು. ಎದುರಿಂದ ಟ್ರಕ್ ಬರುತ್ತಿತ್ತು. ಅದು ಹಾದುಹೋಗಲಿ ಎಂದು ಕಾರನ್ನು ನಿಲ್ಲಿಸಿದರು. ಟ್ರಕ್ ಹಾದುಹೋಗುತ್ತಿರುವಾಗ ಕಾರಿಗೆ ತಾಗಿದೆ. ಇದರಿಂದ ಕಾರು ಕಣಿವೆಗೆ ಜಾರಿದೆ. ವೈಭವಿ ಸೀಟ್ ಬೆಲ್ಟ್​ ಧರಿಸಿರಲಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Nitesh Pandey Death News: ಕಿರುತೆರೆ ನಟ ನಿತೇಶ್ ಪಾಂಡೆ ನಿಧನ; ಹೃದಯಾಘಾತದಿಂದ ಕೊನೆಯುಸಿರೆಳೆದ ಕಲಾವಿದ

ಇತ್ತೀಚೆಗೆ ಹಿಂದಿ ಕಿರುತೆರೆಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕೆಲವೇ ಕೆಲವು ದಿನಗಳ ಹಿಂದೆ ಕಿರುತೆರೆ ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟರು. ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದಾದ ಬೆನ್ನಲ್ಲೇ ಕಿರುತೆರೆ ಮೂಲಕ ಫೇಮಸ್ ಆದ ನಟ ನಿತೇಶ್ ಪಾಂಡೆ ಅವರು ಮೇ 24ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ