‘ನೋಡೋಕೆ ಅಷ್ಟೇ ಪಾಪ, ತುಂಬಾ ಡೇಂಜರ್’; ಗಮನ ಸೆಳೆದ ವೈಷ್ಣವಿ ಹೊಸ ಸೀರಿಯಲ್ ಪ್ರೋಮೋ

‘ಸೀತಾ ರಾಮ’ ಧಾರಾವಾಹಿ ಬಗ್ಗೆ ವೀಕ್ಷಕರಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ವೈಷ್ಣವಿ ಹಾಗೂ ಗಗನ್ ಚಿನ್ನಪ್ಪ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ಮಾಡುತ್ತಿದ್ದಾರೆ.

‘ನೋಡೋಕೆ ಅಷ್ಟೇ ಪಾಪ, ತುಂಬಾ ಡೇಂಜರ್’; ಗಮನ ಸೆಳೆದ ವೈಷ್ಣವಿ ಹೊಸ ಸೀರಿಯಲ್ ಪ್ರೋಮೋ
ವೈಷ್ಣವಿ
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 21, 2023 | 9:38 AM

ವೈಷ್ಣವಿ ಗೌಡ (Vaishnavi Gowda) ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಂಡ ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಅವರು ಜನಪ್ರಿಯತೆ ಹೆಚ್ಚಿಸಿಕೊಂಡರು. ನಂತರ ಬಿಗ್ ಬಾಸ್​ಗೆ ಬಂದು ಎಲ್ಲರ ಗಮನ ಸೆಳೆದರು. ಈಗ ಅವರು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇದರ ಪ್ರೋಮೋನ ವಾಹಿನಿ ಹಂಚಿಕೊಂಡಿದೆ. ಇದು ಸಾಕಷ್ಟು ಸೌಂಡ್ ಮಾಡುತ್ತಿದೆ. ವೈಷ್ಣವಿ ಗೌಡ ಅವರು ಸೈಲೆಂಟ್ ಅಮ್ಮ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ, ಈ ಸೀತಾ ನೋಡೋಕೆ ಅಷ್ಟೇ ಪಾಪ ಅಂತೆ!

‘ಸೀತಾ ರಾಮ’ ಧಾರಾವಾಹಿ ಬಗ್ಗೆ ವೀಕ್ಷಕರಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ವೈಷ್ಣವಿ ಹಾಗೂ ಗಗನ್ ಚಿನ್ನಪ್ಪ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ಮಾಡುತ್ತಿದ್ದಾರೆ. ರೀತು ಸಿಂಗ್ ಹೆಸರಿನ ಬಾಲಕಿ ಕೂಡ ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಸದ್ಯ ಹೊಸ ಪ್ರೋಮೋಗೆ ಸಾಕಷ್ಟು ಮೆಚ್ಚುಗೆ ಕೇಳಿ ಬಂದಿದೆ.

ಇದನ್ನೂ ಓದಿ: Vaishnavi Gowda: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆದ ನಟಿ ವೈಷ್ಣವಿ ಗೌಡ; ಇಲ್ಲಿದೆ ಫೋಟೋ ಗ್ಯಾಲರಿ

ಕಥಾ ನಾಯಕಿ ಸೀತಾ (ವೈಷ್ಣವಿ) ಹಾಗೂ ಅವಳ ಮಗಳು (ರೀತು ಸಿಂಗ್) ತಮ್ಮ ಪಾಡಿಗೆ ತಾವಿರುತ್ತಾರೆ. ಆಗ ಕಥಾ ನಾಯಕ ರಾಮನ (ಗಗನ್) ಎಂಟ್ರಿ ಆಗುತ್ತದೆ. ಸೀತಾಳ ಮದುವೆ ಆಗಬೇಕು ಎಂದರೆ ಅವಳ ಮಗಳ ಒಪ್ಪಿಗೆ ಪಡೆಯಬೇಕು. ಸದ್ಯಕ್ಕೆ ಪ್ರೋಮೋ ನೋಡಿದವರು ಧಾರಾವಾಹಿ ಕಥೆಯನ್ನು ಈ ರೀತಿ ಊಹಿಸುತ್ತಿದ್ದಾರೆ. ಅಸಲಿ ಕಥೆ ಬೇರೆಯದೇ ಇರಬಹುದೇ ಎಂಬುದನ್ನು ಕಾದು ನೋಡಬೇಕಿದೆ.

View this post on Instagram

A post shared by Zee Kannada (@zeekannada)

‘ಇವಳು ನೋಡೋಕೆ ಪಾಪದವಳ ತರ ಕಾಣಿಸ್ತಾಳೆ. ಆದರೆ ತುಂಬಾ ಡೇಂಜರ್. ಕೋಪ ಬಂದ್ರೆ ಟೀಚರ್​ಗಿಂತ ಜೋರಾಗಿ ಹೊಡಿತಾಳೆ. ಎಷ್ಟು ಉರಿಯತ್ತೆ ಗೊತ್ತಾ? ನೋಡು ಇವಳು ನನ್ನಮ್ಮ. ನಂಗೇ ಇಷ್ಟು ಹೊಡೀತಾಳೆ. ಮದುವೆ ಆದ್ಮೇಲೆ ನಿಂಗೆ ಎಷ್ಟು ಕಾಟ ಕೊಡಬಹುದು. ಯೋಚನೆ ಮಾಡು’ ಎಂದು ಅಮ್ಮನ ಬಗ್ಗೆ ಮಗಳು ಹೇಳುವ ರೀತಿಯಲ್ಲಿ ಪ್ರೋಮೋ ಇದೆ.

ಇದನ್ನೂ ಓದಿ: ದಿವ್ಯಾ-ಅರವಿಂದ್ ಜತೆ ವೈಷ್ಣವಿ ಗೌಡ, ರಘು ಮೋಜು-ಮಸ್ತಿ ; ಫೋಟೋ ವೈರಲ್

‘ಸೀತಾ ರಾಮ’ ಮೊದಲ ಪ್ರೋಮೋ ರಿಲೀಸ್ ಆಗಿ ಕೆಲವು ತಿಂಗಳು ಕಳೆದಿದೆ. ಅಂದಿನಿಂದ ಇಂದಿನವರೆಗೆ ಧಾರಾವಾಹಿ ಆರಂಭ ದಿನಾಂಕ ರೀವಿಲ್ ಆಗಿಲ್ಲ. ಈಗ ರಿಲೀಸ್ ಆದ ಹೊಸ ಪ್ರೋಮೋದಲ್ಲೂ ಧಾರಾವಾಹಿಯ ಪ್ರಸಾರದ ದಿನಾಂಕ ಇಲ್ಲ. ದಯವಿಟ್ಟು ಧಾರಾವಾಹಿ ರಿಲೀಸ್ ದಿನಾಂಕ ತಿಳಿಸಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಈ ಮುದ್ದಾದ ಸ್ಟೋರಿನ ನೋಡೋಕೆ ವೀಕ್ಷಕರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ