AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಯಲ್ಲಿ ಯಾರೂ ಊಹಿಸದ ಎಲಿಮಿನೇಷನ್​​; ಪ್ರಶಾಂತ್​ ಜತೆ ವೈಷ್ಣವಿ ಔಟ್​

ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಕಪ್​ ಜತೆಗೆ 50 ಲಕ್ಷ ರೂಪಾಯಿ ಹಣವನ್ನು ಮನೆಗೆ ಕೊಂಡೊಯ್ಯಲಿದ್ದಾರೆ. ಅದಕ್ಕೂ ಮೊದಲು ಬಿಗ್​ ಬಾಸ್​ ಮನೆಯಿಂದ ದಿವ್ಯಾ ಹಾಗೂ ಪ್ರಶಾಂತ್​ ಸಂಬರಗಿ ಔಟ್​ ಆಗಿದ್ದಾರೆ. 

ಬಿಗ್​ ಬಾಸ್​ ಫಿನಾಲೆಯಲ್ಲಿ ಯಾರೂ ಊಹಿಸದ ಎಲಿಮಿನೇಷನ್​​; ಪ್ರಶಾಂತ್​ ಜತೆ ವೈಷ್ಣವಿ ಔಟ್​
ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?
TV9 Web
| Edited By: |

Updated on: Aug 08, 2021 | 12:06 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ಇಂದು (ಆ.7) ಹಾಗೂ ನಾಳೆ (ಆ.8) ನಡೆಯುತ್ತಿದೆ. ಈ ಬಾರಿಯ ಬಿಗ್​ ಬಾಸ್​ ಸೀಸನ್​ ಯಾರು ಗೆಲ್ಲಲಿದ್ದಾರೆ ಅನ್ನೋದು ಸದ್ಯದ ಕುತೂಹಲ. ಐದು ಸ್ಪರ್ಧಿಗಳು ಸದ್ಯ ಫಿನಾಲೆ ತಲುಪಿದ್ದು, ಇದರಲ್ಲಿ ಒಬ್ಬರು ಗೆಲ್ಲಲಿದ್ದಾರೆ. ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಕಪ್​ ಜತೆಗೆ 50 ಲಕ್ಷ ರೂಪಾಯಿ ಹಣವನ್ನು ಮನೆಗೆ ಕೊಂಡೊಯ್ಯಲಿದ್ದಾರೆ. ಅದಕ್ಕೂ ಮೊದಲು ಬಿಗ್​ ಬಾಸ್​ ಮನೆಯಿಂದ ಪ್ರಶಾಂತ್​ ಸಂಬರಗಿ ಹಾಗೂ ವೈಷ್ಣವಿ ಗೌಡ ಔಟ್​ ಆಗಿದ್ದಾರೆ. 

ಪ್ರಶಾಂತ್​ ಸಂಬರಗಿ ಕೂಡ ಫಿನಾಲೆ ಲಿಸ್ಟ್​ನಲ್ಲಿದ್ದರು. ಇವರು ಎರಡು ಬಾರಿ ಬಿಗ್​ ಬಾಸ್​ ಎಕ್ಸಿಟ್​ ಬಾಗಿಲನ್ನು ಮುಟ್ಟಿ ಬಂದಿದ್ದಾರೆ. ಮನೆಯಲ್ಲಿ ನ್ಯಾಯದ ಪರ ಹಾಗೂ ಗುಂಪುಗಾರಿಕೆ ವಿರುದ್ಧ ತೀವ್ರವಾಗಿ ಹೋರಾಡಿದವರು ಪ್ರಶಾಂತ್​. ಸಾಕಷ್ಟು ಬಾರಿ ಅವರು ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ನಾಲ್ಕು ಬಾರಿ ಕಳಪೆ ಪಟ್ಟ ಪಡೆದಿದ್ದಾರೆ ಪ್ರಶಾಂತ್​. ಅಂತಿಮವಾಗಿ ಪ್ರಶಾಂತ್​ ಸಂಪೂರ್ಣವಾಗಿ ಬದಲಾಗಿದ್ದರು. ಅವರು ಎಲ್ಲರ ಜತೆ ಬೆರೆಯೋಕೆ ಪ್ರಾರಂಭಿಸಿದ್ದರು. ಇದು ಅವರಿಗೆ ಪ್ಲಸ್​ ಪಾಯಿಂಟ್​ ಆಗಿತ್ತು. ಆದರೆ, ಅವರು ಮನೆಯಲ್ಲಿ ಉಳಿದುಕೊಳ್ಳೋಕೆ ಸಾಧ್ಯವಾಗಿಲ್ಲ. ಅವರಿಗೆ 6.69 ಲಕ್ಷ ಮತ ಬಿದ್ದಿತ್ತು.

ವೈಷ್ಣವಿ ಗೌಡ ಕೂಡ ಬಿಗ್​ ಬಾಸ್ ಮನೆಯಲ್ಲಿ ನಾಲ್ಕನೇ ಸ್ಪರ್ಧಿಯಾಗಿ ಮನೆಯಿಂದ ಔಟ್​ ಆಗಿದ್ದಾರೆ. ಬಿಗ್​ ಬಾಸ್​ ಫಿನಾಲೆ ಪೈಕಿ ವೈಷ್ಣವಿ ಕೂಡ ಇರುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಅವರು ಮನೆಯಿಂದ ಹೊರ ಹೋಗಿದ್ದಾರೆ. ಇದು ಸಾಕಷ್ಟು ಜನರಿಗೆ ಅಚ್ಚರಿ ಮೂಡಿಸಿದ್ದಂತೂ ಸುಳ್ಳಲ್ಲ. ವೈಷ್ಣವಿ ಪಡೆದ ಮತಗಳ ಸಂಖ್ಯೆ 10,21,831.

ಇದನ್ನೂ ಓದಿ: ಗಾಯಕ ನವೀನ್​ ಸಜ್ಜು ಪ್ರಕಾರ ’ಕನ್ನಡ ಬಿಗ್​ ಬಾಸ್ ಸೀಸನ್​ 8’​ ಗೆಲ್ಲೋರು ಇವರೇ

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?