AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಯಲ್ಲಿ ಯಾರೂ ಊಹಿಸದ ಎಲಿಮಿನೇಷನ್​​; ಪ್ರಶಾಂತ್​ ಜತೆ ವೈಷ್ಣವಿ ಔಟ್​

ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಕಪ್​ ಜತೆಗೆ 50 ಲಕ್ಷ ರೂಪಾಯಿ ಹಣವನ್ನು ಮನೆಗೆ ಕೊಂಡೊಯ್ಯಲಿದ್ದಾರೆ. ಅದಕ್ಕೂ ಮೊದಲು ಬಿಗ್​ ಬಾಸ್​ ಮನೆಯಿಂದ ದಿವ್ಯಾ ಹಾಗೂ ಪ್ರಶಾಂತ್​ ಸಂಬರಗಿ ಔಟ್​ ಆಗಿದ್ದಾರೆ. 

ಬಿಗ್​ ಬಾಸ್​ ಫಿನಾಲೆಯಲ್ಲಿ ಯಾರೂ ಊಹಿಸದ ಎಲಿಮಿನೇಷನ್​​; ಪ್ರಶಾಂತ್​ ಜತೆ ವೈಷ್ಣವಿ ಔಟ್​
ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?
TV9 Web
| Edited By: |

Updated on: Aug 08, 2021 | 12:06 AM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಫಿನಾಲೆ ಇಂದು (ಆ.7) ಹಾಗೂ ನಾಳೆ (ಆ.8) ನಡೆಯುತ್ತಿದೆ. ಈ ಬಾರಿಯ ಬಿಗ್​ ಬಾಸ್​ ಸೀಸನ್​ ಯಾರು ಗೆಲ್ಲಲಿದ್ದಾರೆ ಅನ್ನೋದು ಸದ್ಯದ ಕುತೂಹಲ. ಐದು ಸ್ಪರ್ಧಿಗಳು ಸದ್ಯ ಫಿನಾಲೆ ತಲುಪಿದ್ದು, ಇದರಲ್ಲಿ ಒಬ್ಬರು ಗೆಲ್ಲಲಿದ್ದಾರೆ. ಬಿಗ್​ ಬಾಸ್​ ಗೆಲ್ಲುವ ಸ್ಪರ್ಧಿ ಕಪ್​ ಜತೆಗೆ 50 ಲಕ್ಷ ರೂಪಾಯಿ ಹಣವನ್ನು ಮನೆಗೆ ಕೊಂಡೊಯ್ಯಲಿದ್ದಾರೆ. ಅದಕ್ಕೂ ಮೊದಲು ಬಿಗ್​ ಬಾಸ್​ ಮನೆಯಿಂದ ಪ್ರಶಾಂತ್​ ಸಂಬರಗಿ ಹಾಗೂ ವೈಷ್ಣವಿ ಗೌಡ ಔಟ್​ ಆಗಿದ್ದಾರೆ. 

ಪ್ರಶಾಂತ್​ ಸಂಬರಗಿ ಕೂಡ ಫಿನಾಲೆ ಲಿಸ್ಟ್​ನಲ್ಲಿದ್ದರು. ಇವರು ಎರಡು ಬಾರಿ ಬಿಗ್​ ಬಾಸ್​ ಎಕ್ಸಿಟ್​ ಬಾಗಿಲನ್ನು ಮುಟ್ಟಿ ಬಂದಿದ್ದಾರೆ. ಮನೆಯಲ್ಲಿ ನ್ಯಾಯದ ಪರ ಹಾಗೂ ಗುಂಪುಗಾರಿಕೆ ವಿರುದ್ಧ ತೀವ್ರವಾಗಿ ಹೋರಾಡಿದವರು ಪ್ರಶಾಂತ್​. ಸಾಕಷ್ಟು ಬಾರಿ ಅವರು ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ನಾಲ್ಕು ಬಾರಿ ಕಳಪೆ ಪಟ್ಟ ಪಡೆದಿದ್ದಾರೆ ಪ್ರಶಾಂತ್​. ಅಂತಿಮವಾಗಿ ಪ್ರಶಾಂತ್​ ಸಂಪೂರ್ಣವಾಗಿ ಬದಲಾಗಿದ್ದರು. ಅವರು ಎಲ್ಲರ ಜತೆ ಬೆರೆಯೋಕೆ ಪ್ರಾರಂಭಿಸಿದ್ದರು. ಇದು ಅವರಿಗೆ ಪ್ಲಸ್​ ಪಾಯಿಂಟ್​ ಆಗಿತ್ತು. ಆದರೆ, ಅವರು ಮನೆಯಲ್ಲಿ ಉಳಿದುಕೊಳ್ಳೋಕೆ ಸಾಧ್ಯವಾಗಿಲ್ಲ. ಅವರಿಗೆ 6.69 ಲಕ್ಷ ಮತ ಬಿದ್ದಿತ್ತು.

ವೈಷ್ಣವಿ ಗೌಡ ಕೂಡ ಬಿಗ್​ ಬಾಸ್ ಮನೆಯಲ್ಲಿ ನಾಲ್ಕನೇ ಸ್ಪರ್ಧಿಯಾಗಿ ಮನೆಯಿಂದ ಔಟ್​ ಆಗಿದ್ದಾರೆ. ಬಿಗ್​ ಬಾಸ್​ ಫಿನಾಲೆ ಪೈಕಿ ವೈಷ್ಣವಿ ಕೂಡ ಇರುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಅವರು ಮನೆಯಿಂದ ಹೊರ ಹೋಗಿದ್ದಾರೆ. ಇದು ಸಾಕಷ್ಟು ಜನರಿಗೆ ಅಚ್ಚರಿ ಮೂಡಿಸಿದ್ದಂತೂ ಸುಳ್ಳಲ್ಲ. ವೈಷ್ಣವಿ ಪಡೆದ ಮತಗಳ ಸಂಖ್ಯೆ 10,21,831.

ಇದನ್ನೂ ಓದಿ: ಗಾಯಕ ನವೀನ್​ ಸಜ್ಜು ಪ್ರಕಾರ ’ಕನ್ನಡ ಬಿಗ್​ ಬಾಸ್ ಸೀಸನ್​ 8’​ ಗೆಲ್ಲೋರು ಇವರೇ

ಬಿಗ್​ ಬಾಸ್​ ಮನೆಯಲ್ಲಿ ನಾಲ್ಕೇ ದಿನಕ್ಕೆ ಎರಡು ಲಕ್ಷ ಸಂಪಾದಿಸಿದ ಅರವಿಂದ್​ ಕೆಪಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್