AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?

ಬಿಗ್​ ಬಾಸ್​ ಮನೆಯಲ್ಲಿ ಪ್ರತೀ ಶುಕ್ರವಾರ ಕಳಪೆ ಮತ್ತು ಅತ್ಯುತ್ತಮ ಎನ್ನುವ ಬಿರುದನ್ನು ಒಂದು ಸ್ಪರ್ಧಿಗೆ ನೀಡಲಾಗುತ್ತದೆ. ಈ ವಾರವೂ ಈ ಆಯ್ಕೆ ನಡೆದಿದೆ. ಪ್ರಶಾಂತ್​ ಸಂಬರಗಿ ಅತಿ ಹೆಚ್ಚು ವೋಟ್​ ಬಿದ್ದಿದ್ದರಿಂದ​ ಕಳಪೆ ಪಟ್ಟ ಅವರಿಗೆ ಸಿಕ್ಕಿದೆ.

ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?
ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?
TV9 Web
| Edited By: |

Updated on: Jul 24, 2021 | 5:40 PM

Share

‘ಬಿಗ್​ ಬಾಸ್​ ಮನೆಯಲ್ಲಿ ನಾನು ಅತಿ ಹೆಚ್ಚು ನಂಬೋದು ವೈಷ್ಣವಿಯನ್ನು. ಅವರನ್ನು ನಾನು ಬೇರೆ ಸ್ಥಾನದಲ್ಲಿಟ್ಟುದ್ದೇನೆ’ ಎಂದು ಪ್ರಶಾಂತ್​ ಸಂಬರಗಿ ಕಳೆದ ವಾರದಲ್ಲಿ ಹೇಳಿದ್ದರು. ಈ ಮೂಲಕ ವೈಷ್ಣವಿ ಬಗ್ಗೆ ವಿಶೇಷ ಗೌರವ ಇದೆ ಎಂದು ಹೇಳಿದ್ದರು. ಆದರೆ, ಈ ವಾರ ಅವರ ವಿರುದ್ಧವೇ ಪ್ರಶಾಂತ್​ ಹರಿಹಾಯ್ದಿದ್ದಾರೆ. ಇದು ವೈಷ್ಣವಿಗೆ ಸಾಕಷ್ಟು ಬೇಸರ ತರಿಸಿದೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರತೀ ಶುಕ್ರವಾರ ಕಳಪೆ ಮತ್ತು ಅತ್ಯುತ್ತಮ ಎನ್ನುವ ಬಿರುದನ್ನು ಒಂದು ಸ್ಪರ್ಧಿಗೆ ನೀಡಲಾಗುತ್ತದೆ. ಈ ವಾರವೂ ಈ ಆಯ್ಕೆ ನಡೆದಿದೆ. ಪ್ರಶಾಂತ್​ ಸಂಬರಗಿ ಅತಿ ಹೆಚ್ಚು ವೋಟ್​ ಬಿದ್ದಿದ್ದರಿಂದ​ ಕಳಪೆ ಪಟ್ಟ ಅವರಿಗೆ ಸಿಕ್ಕಿದೆ. ಈ ಮೂಲಕ ಅವರು ನಾಲ್ಕು ಬಾರಿ ಬಿಗ್​ ಬಾಸ್​ನಲ್ಲಿ ಜೈಲಿಗೆ ತೆರಳಿದಂತಾಗಿದೆ.

ಪ್ರಶಾಂತ್​ ಸಂಬರಗಿ ಈ ಬಾರಿ ನೀಡಿದ ನೀನಾ ನಾನಾ ಟಾಸ್ಕ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಸೀಮಿತ ಮಂದಿ ಆಡುವ ಆಟದಲ್ಲಿಯೂ ನಾನು ಆಡುತ್ತೇನೆ ಎಂದು ಮುಂದೆ ಬಂದಿದ್ದ ಪ್ರಶಾಂತ್​ ಅಂಕ ಗಳಿಸದೇ ಸೋತಿದ್ದರು. ಇದು ಮನೆ ಮಂದಿಗೆ ಇಷ್ಟವಾಗಿಲ್ಲ. ಈ ಕಾರಣವನ್ನು ಇಟ್ಟುಕೊಂಡು ಮನೆಯವರು ಪ್ರಶಾಂತ್​ಗೆ ಕಳಪೆ ಪಟ್ಟ ನೀಡಿದರು.

ವೈಷ್ಣವಿ ಕೂಡ ಚಕ್ರವರ್ತಿ ಹೆಸರನ್ನು ತೆಗೆದುಕೊಂಡರು. ಕೆಲ ಗೇಮ್​ಗಳಲ್ಲಿ ಚಕ್ರವರ್ತಿ ಇನ್ನೂ ಚೆನ್ನಾಗಿ ಆಡಬಹುದಿತ್ತು. ಅವರ ಶ್ರಮ ಕಡಿಮೆ ಆಯಿತು ಎಂದು ನನಗನ್ನಿಸಿತು ಎಂದರು. ಇದು ಚಕ್ರವರ್ತಿಗೆ ಬೇಸರ ತರಿಸಿದೆ. ‘ಗೇಮ್​ ಆಡುವಾಗ ವೈಷ್ಣವಿ ಅವರಿಂದ ನನಗೆ ತೊಂದರೆ ಆಗಿದೆ. ಆದಾಗ್ಯೂ ನಾನು ಆ ವಿಚಾರ ತೆಗೆದಿಲ್ಲ. ಈಗ ಅವರದೇ ತಪ್ಪಿದ್ದರು ಅದನ್ನು ನನ್ನ ಮೇಲೆ ಹಾಕುತ್ತಾರೆ. ನನಗೆ ಕಳಪೆಪಟ್ಟ ನೀಡುತ್ತಾರೆ. ಇದೆಷ್ಟು ಸರಿ?’ ಎಂದು ಚಕ್ರವರ್ತಿ ಪ್ರಶ್ನೆ ಮಾಡಿದರು. ಈ ವೇಳೆ ಕೆಲ ಖಾರದ ಮಾತುಗಳನ್ನು ಕೂಡ ಆಡಿದರು.

ಈ ವಿಚಾರ ವೈಷ್ಣವಿಗೆ ಬೇಸರ ತರಿಸಿದೆ. ಅಲ್ಲದೆ, ಅವರು ಕೋಪದಿಂದ ಕಣ್ಣೀರು ಹಾಕಿದ್ದಾರೆ. ಅವರು ತುಂಬಾನೇ ಅಪ್ಸೆಟ್​ ಆಗಿದ್ದರು ಎನ್ನುವ ವಿಚಾರ ಎದ್ದು ಕಾಣುತ್ತಿತ್ತು. ಈಗ ಇಬ್ಬರ ನಡುವಿನ ಗೆಳೆತನ ಮುರಿದು ಬೀಳಲಿದೆಯೇ ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

‘ಮುಂದಿನ ವರ್ಷ ಮದುವೆ, ನನ್ನದು ಅರೇಂಜ್​ ಮ್ಯಾರೇಜ್’​; ವಿವಾಹದ ಬಗ್ಗೆ ಮತ್ತೊಮ್ಮೆ ಮೌನ ಮುರಿದ ವೈಷ್ಣವಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ