AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?

ಬಿಗ್​ ಬಾಸ್​ ಮನೆಯಲ್ಲಿ ಪ್ರತೀ ಶುಕ್ರವಾರ ಕಳಪೆ ಮತ್ತು ಅತ್ಯುತ್ತಮ ಎನ್ನುವ ಬಿರುದನ್ನು ಒಂದು ಸ್ಪರ್ಧಿಗೆ ನೀಡಲಾಗುತ್ತದೆ. ಈ ವಾರವೂ ಈ ಆಯ್ಕೆ ನಡೆದಿದೆ. ಪ್ರಶಾಂತ್​ ಸಂಬರಗಿ ಅತಿ ಹೆಚ್ಚು ವೋಟ್​ ಬಿದ್ದಿದ್ದರಿಂದ​ ಕಳಪೆ ಪಟ್ಟ ಅವರಿಗೆ ಸಿಕ್ಕಿದೆ.

ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?
ವೈಷ್ಣವಿ ಕಣ್ಣಲ್ಲಿ ನೀರು ಹಾಕಿಸಿದ ಪ್ರಶಾಂತ್​; ಫಿನಾಲೆಗೂ ಮೊದಲೇ ಫ್ರೆಂಡ್​ಶಿಪ್​ನಲ್ಲಿ ಬ್ರೇಕಪ್?
TV9 Web
| Edited By: |

Updated on: Jul 24, 2021 | 5:40 PM

Share

‘ಬಿಗ್​ ಬಾಸ್​ ಮನೆಯಲ್ಲಿ ನಾನು ಅತಿ ಹೆಚ್ಚು ನಂಬೋದು ವೈಷ್ಣವಿಯನ್ನು. ಅವರನ್ನು ನಾನು ಬೇರೆ ಸ್ಥಾನದಲ್ಲಿಟ್ಟುದ್ದೇನೆ’ ಎಂದು ಪ್ರಶಾಂತ್​ ಸಂಬರಗಿ ಕಳೆದ ವಾರದಲ್ಲಿ ಹೇಳಿದ್ದರು. ಈ ಮೂಲಕ ವೈಷ್ಣವಿ ಬಗ್ಗೆ ವಿಶೇಷ ಗೌರವ ಇದೆ ಎಂದು ಹೇಳಿದ್ದರು. ಆದರೆ, ಈ ವಾರ ಅವರ ವಿರುದ್ಧವೇ ಪ್ರಶಾಂತ್​ ಹರಿಹಾಯ್ದಿದ್ದಾರೆ. ಇದು ವೈಷ್ಣವಿಗೆ ಸಾಕಷ್ಟು ಬೇಸರ ತರಿಸಿದೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರತೀ ಶುಕ್ರವಾರ ಕಳಪೆ ಮತ್ತು ಅತ್ಯುತ್ತಮ ಎನ್ನುವ ಬಿರುದನ್ನು ಒಂದು ಸ್ಪರ್ಧಿಗೆ ನೀಡಲಾಗುತ್ತದೆ. ಈ ವಾರವೂ ಈ ಆಯ್ಕೆ ನಡೆದಿದೆ. ಪ್ರಶಾಂತ್​ ಸಂಬರಗಿ ಅತಿ ಹೆಚ್ಚು ವೋಟ್​ ಬಿದ್ದಿದ್ದರಿಂದ​ ಕಳಪೆ ಪಟ್ಟ ಅವರಿಗೆ ಸಿಕ್ಕಿದೆ. ಈ ಮೂಲಕ ಅವರು ನಾಲ್ಕು ಬಾರಿ ಬಿಗ್​ ಬಾಸ್​ನಲ್ಲಿ ಜೈಲಿಗೆ ತೆರಳಿದಂತಾಗಿದೆ.

ಪ್ರಶಾಂತ್​ ಸಂಬರಗಿ ಈ ಬಾರಿ ನೀಡಿದ ನೀನಾ ನಾನಾ ಟಾಸ್ಕ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಸೀಮಿತ ಮಂದಿ ಆಡುವ ಆಟದಲ್ಲಿಯೂ ನಾನು ಆಡುತ್ತೇನೆ ಎಂದು ಮುಂದೆ ಬಂದಿದ್ದ ಪ್ರಶಾಂತ್​ ಅಂಕ ಗಳಿಸದೇ ಸೋತಿದ್ದರು. ಇದು ಮನೆ ಮಂದಿಗೆ ಇಷ್ಟವಾಗಿಲ್ಲ. ಈ ಕಾರಣವನ್ನು ಇಟ್ಟುಕೊಂಡು ಮನೆಯವರು ಪ್ರಶಾಂತ್​ಗೆ ಕಳಪೆ ಪಟ್ಟ ನೀಡಿದರು.

ವೈಷ್ಣವಿ ಕೂಡ ಚಕ್ರವರ್ತಿ ಹೆಸರನ್ನು ತೆಗೆದುಕೊಂಡರು. ಕೆಲ ಗೇಮ್​ಗಳಲ್ಲಿ ಚಕ್ರವರ್ತಿ ಇನ್ನೂ ಚೆನ್ನಾಗಿ ಆಡಬಹುದಿತ್ತು. ಅವರ ಶ್ರಮ ಕಡಿಮೆ ಆಯಿತು ಎಂದು ನನಗನ್ನಿಸಿತು ಎಂದರು. ಇದು ಚಕ್ರವರ್ತಿಗೆ ಬೇಸರ ತರಿಸಿದೆ. ‘ಗೇಮ್​ ಆಡುವಾಗ ವೈಷ್ಣವಿ ಅವರಿಂದ ನನಗೆ ತೊಂದರೆ ಆಗಿದೆ. ಆದಾಗ್ಯೂ ನಾನು ಆ ವಿಚಾರ ತೆಗೆದಿಲ್ಲ. ಈಗ ಅವರದೇ ತಪ್ಪಿದ್ದರು ಅದನ್ನು ನನ್ನ ಮೇಲೆ ಹಾಕುತ್ತಾರೆ. ನನಗೆ ಕಳಪೆಪಟ್ಟ ನೀಡುತ್ತಾರೆ. ಇದೆಷ್ಟು ಸರಿ?’ ಎಂದು ಚಕ್ರವರ್ತಿ ಪ್ರಶ್ನೆ ಮಾಡಿದರು. ಈ ವೇಳೆ ಕೆಲ ಖಾರದ ಮಾತುಗಳನ್ನು ಕೂಡ ಆಡಿದರು.

ಈ ವಿಚಾರ ವೈಷ್ಣವಿಗೆ ಬೇಸರ ತರಿಸಿದೆ. ಅಲ್ಲದೆ, ಅವರು ಕೋಪದಿಂದ ಕಣ್ಣೀರು ಹಾಕಿದ್ದಾರೆ. ಅವರು ತುಂಬಾನೇ ಅಪ್ಸೆಟ್​ ಆಗಿದ್ದರು ಎನ್ನುವ ವಿಚಾರ ಎದ್ದು ಕಾಣುತ್ತಿತ್ತು. ಈಗ ಇಬ್ಬರ ನಡುವಿನ ಗೆಳೆತನ ಮುರಿದು ಬೀಳಲಿದೆಯೇ ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಶಮಂತ್​ ಬ್ರೋ ಗೌಡ ಎಲಿಮಿನೇಟ್? ಅನುಮಾನ ಹುಟ್ಟುಹಾಕಿದ ಆ ಒಂದು ಫೋಟೋ

‘ಮುಂದಿನ ವರ್ಷ ಮದುವೆ, ನನ್ನದು ಅರೇಂಜ್​ ಮ್ಯಾರೇಜ್’​; ವಿವಾಹದ ಬಗ್ಗೆ ಮತ್ತೊಮ್ಮೆ ಮೌನ ಮುರಿದ ವೈಷ್ಣವಿ

Follow Us
Web contact
Web contact

TV9 Kannada

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು