AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ತಾಳ್ಮೆ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ಯಾರ ತಂಟೆಗೂ ಅಷ್ಟಾಗಿ ಹೋಗುವುದಿಲ್ಲ. ತಾವಾಯಿತು ತಮ್ಮ ಕೆಲಸವಾಯಿತು ಎಂದು ಸುಮ್ಮನುಳಿಯುತ್ತಾರೆ. ಜಗಳವಾಡುವ ಪರಿಸ್ಥಿತಿ ಬಂದರೂ ಅದನ್ನು ತಿಳಿ ಗೊಳಿಸುವ ಕಲೆ ವೈಷ್ಣವಿಗೆ ಕರಗತವಾಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ತಾಳ್ಮೆ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ
ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ನಿಯಂತ್ರಣ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ
TV9 Web
| Edited By: |

Updated on:Jul 20, 2021 | 6:28 PM

Share

ನಟಿ ವೈಷ್ಣವಿ ಗೌಡ ಕನ್ನಡ ಬಿಗ್​ ಬಾಸ್​ ಎಂಟನೇ ಸೀಸನ್​ನಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರ ಮೌನ, ಅವರ ನಗು, ಅವರ ವಿಚಾರಧಾರೆಗಳು ಎಲ್ಲರಿಗೂ ಇಷ್ಟವಾಗಿದೆ. ಆದರೆ, ಇದೇ ಮೊದಲ ಬಾರಿಗೆ ಅವರು ಕೋಪದ ವಿಚಾರದಲ್ಲಿ ತಾಳ್ಮೆ ಕಳೆದುಕೊಂಡಿದ್ದಾರೆ. ಈ ವಿಡಿಯೋ ನೋಡಿದ ವೀಕ್ಷಕರು ಸಾಕಷ್ಟು ಅಚ್ಚರಿ ಹೊರ ಹಾಕಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ಯಾರ ತಂಟೆಗೂ ಅಷ್ಟಾಗಿ ಹೋಗುವುದಿಲ್ಲ. ತಾವಾಯಿತು ತಮ್ಮ ಕೆಲಸವಾಯಿತು ಎಂದು ಸುಮ್ಮನುಳಿಯುತ್ತಾರೆ. ಜಗಳವಾಡುವ ಪರಿಸ್ಥಿತಿ ಬಂದರೂ ಅದನ್ನು ತಿಳಿ ಗೊಳಿಸುವ ಕಲೆ ವೈಷ್ಣವಿಗೆ ಕರಗತವಾಗಿದೆ. ಹೀಗಾಗಿ ಬಿಗ್​ ಬಾಸ್​ ಮನೆಯಲ್ಲಿ ಯಾರ ಜತೆಗೂ ಅವರು ಜಗಳ ಮಾಡಿಕೊಂಡಿಲ್ಲ.

ಇನ್ನು ಬಿಗ್​ ಬಾಸ್​ ಮನೆಯಲ್ಲಿ ಮಾತಿನ ಮೂಲಕ ಏಟು ಕೊಡೋದರಲ್ಲಿ ವೈಷ್ಣವಿ ಅವರದ್ದು ಎತ್ತಿದ ಕೈ. ಇದನ್ನು ಸುದೀಪ್​ ಕೂಡ ಸಾಕಷ್ಟು ಬಾರಿ ಹೇಳಿದ್ದಾರೆ. ಮನೆ ಮಂದಿಯೂ ಇದನ್ನೂ ಒಪ್ಪಿಕೊಂಡಿದ್ದಾರೆ. ಆದರೆ, ಈ ವಾರ ಅದು ಸುಳ್ಳಾಗಿದೆ. ವೈಷ್ಣವಿ ನಡೆದುಕೊಂಡ ರೀತಿಗೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗೋಕೆ ನಾನಾ-ನೀನಾ ಎನ್ನುವ ಟಾಸ್ಕ್​ ನೀಡಲಾಗಿದೆ. ಈ ಟಾಸ್ಕ್​ ಅಡಿಯಲ್ಲಿ ಸಾಕಷ್ಟು ಸ್ಪರ್ಧೆಗಳನ್ನು ನೀಡಲಾಗುತ್ತಿದೆ. ಸ್ಪರ್ಧಿಗಳು ಬೆನ್ನಿಗೆ ಗೋಣಿಚೀಲ ಕಟ್ಟಿಕೊಂಡು ವೃತ್ತಗಳ ಒಳಗೆ ಓಡಬೇಕು. ಮುಂದಿನ ಸದಸ್ಯರ ಚೀಲವನ್ನು ಖಾಲಿ ಮಾಡಬೇಕು. ಈ ವೇಳೆ ವೈಷ್ಣವಿ ಹಿಂದೆ ಇದ್ದ ಪ್ರಶಾಂತ್​ ಚೀಲವನ್ನು ಗಟ್ಟಿಯಾಗಿ ಎಳೆದಿದ್ದಾರೆ. ಇದು ವೈಷ್ಣವಿ ಅವರ ಕೋಪಕ್ಕೆ ಕಾರಣವಾಗಿದೆ. ಅವರು ಸಿಟ್ಟಿನಿಂದ ಪ್ರಶಾಂತ್​ ಮೇಲೆ ಕೈ ಎತ್ತೋಕೆ ಹೋದಂತೆ ಕಂಡು ಬಂದಿದೆ. ಕಲರ್ಸ್​ ಕನ್ನಡ ವಾಹಿನಿ ಈ ಪ್ರೋಮೋವನ್ನು ಹಂಚಿಕೊಂಡಿದೆ. ಪೂರ್ತಿ ಪ್ರಮಾಣದ ಎಪಿಸೋಡ್​ ಇಂದು (ಜುಲೈ 20) ಪ್ರಸಾರವಾಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಾಕಿದ್ದಾರೆ ಕೀಟ; ಸುದೀಪ್​ ಎದುರು ಹೇಳಿಕೊಂಡ ಸಂಬರಗಿ

ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ; ಬಿಗ್​ ಬಾಸ್​ ನೀಡ್ತೀರೋ ಶಿಕ್ಷೆ ಏನು?

Published On - 6:26 pm, Tue, 20 July 21

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ