AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?

Vaishnavi Gowda Engagement: ಖ್ಯಾತ ಕನ್ನಡ ನಟಿ ವೈಷ್ಣವಿ ಗೌಡ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅವರ ನಿಶ್ಚಿತಾರ್ಥದ ಫೋಟೋಗಳು ಮತ್ತು ವಿಡಿಯೋಗಳು ಅಭಿಮಾನಿಗಳಲ್ಲಿ ಸಂತೋಷ ಮತ್ತು ಆಶ್ಚರ್ಯವನ್ನು ಉಂಟುಮಾಡಿದೆ. ವಿವಾಹದ ದಿನಾಂಕವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

Vaishnavi Gowda: ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?
ವೈಷ್ಣವಿ ಎಂಗೇಜ್​ಮೆಂಟ್ ಫೋಟೋ
ರಾಜೇಶ್ ದುಗ್ಗುಮನೆ
|

Updated on:Apr 15, 2025 | 12:25 PM

Share

ನಟಿ ವೈಷ್ಣವಿ ಗೌಡ (Vaishnavi Gowda) ಅವರು ಅಭಿಮಾನಿಗಳಿಗೆ ಸರ್​ಪ್ರೈಸ್ ನೀಡಿದ್ದಾರೆ. ಅವರು ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನಟಿ ನಿಶ್ಚಿತಾರ್ಥ ಆಗಿರೋದು ಅಭಿಮಾನಿಗಳಿಗೆ ಶಾಕ್ ಹಾಗೂ ಖುಷಿ ಎರಡನ್ನೂ ನೀಡಿದೆ. ಅವರಿಗೆ ಎಲ್ಲ ಕಡೆಗಳಿಂದ ಅಭಿನಂದನೆಗಳು ಬರುತ್ತಿವೆ. ಹಾಗಾದರೆ ವೈಷ್ಣವಿ ಗೌಡ ಅವರು ಮದುವೆ ಆಗುತ್ತಿರುವ ಹುಡುಗ ಯಾರು? ಅವರ ಹಿನ್ನೆಲೆ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ತಮಗೆ ಮದುವೆ ಬಗ್ಗೆ ಇರುವ ಕನಸುಗಳ ಬಗ್ಗೆ ಹೇಳಿಕೊಂಡಿದ್ದರು. ಮದುವೆನ ಹೀಗೆ ಆಗ್ತೀನಿ, ಹಾಗೆ ಆಗ್ತೀನಿ ಎಂದೆಲ್ಲ ವಿವರಿಸಿದ್ದರು. ಅವರಿಗೆ ಸಾಕಷ್ಟು ಮದುವೆ ಆಫರ್​ಗಳು ಬಂದರೂ ಅದನ್ನು ಒಪ್ಪಿಲ್ಲ ಎಂದಿದ್ದರು. ಈಗ ವೈಷ್ಣವಿ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಅವರ ಎಂಗೇಜ್​ಮೆಂಟ್ ಫೋಟೋ ಹಾಗೂ ವಿಡಿಯೋಗಳನ್ನು ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ವೈಷ್ಣವಿ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ಸೀತಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಈ ಧಾರಾವಾಹಿಯ ಕಲಾವಿದೆ ಮೇಘನಾ ಶಂಕರಪ್ಪ ಅವರು ಇತ್ತೀಚೆಗೆ ವಿವಾಹ ಆಗಿದ್ದರು. ಈಗ ಧಾರಾವಾಹಿ ತಂಡದಲ್ಲಿ ಮತ್ತೊಂದು ಮದುವೆ ನೆರವೇರುತ್ತಿದೆ.

ಇದನ್ನೂ ಓದಿ
Image
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
Image
860 ಸಿನಿಮಾ ಮಾಡಿದರೂ ಬ್ಯಾಂಕ್ ಬ್ಯಾಲೆನ್ಸ್ ಇಲ್ಲ; ಮರುಗಿದ್ದ ನಟ
Image
ಬ್ಯಾಂಕ್ ಜನಾರ್ಧನ್ ವೃತ್ತಿ ಜೀವನ ಬದಲಿಸಿದ್ದು ಆ ಇಬ್ಬರು ವ್ಯಕ್ತಿಗಳು
Image
ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ  

ಹುಡುಗ ಯಾರು?

ವೈಷ್ಣವಿ ಗೌಡ ಅವರು ಮದುವೆ ಆಗುತ್ತಿರುವ ಹುಡುಗನ ಹೆಸರು ಅನುಕೂಲ್ ಮಿಶ್ರಾ​ ಎಂದು. ಅವರು ಏರ್​ಫೋರ್ಸ್​ನಲ್ಲಿ ಕೆಲಸ ಮಾಡುತ್ತಾ ಇದ್ದಾರೆ. ಈ ಮೂಲಕ ವೈಷ್ಣವಿ ಅವರು ಬಣ್ಣದ ಲೋಕದವರನ್ನು ಬಿಟ್ಟು ಹೊರಗಿನವರನ್ನು ಕೈ ಹಿಡಿಯುತ್ತಿದ್ದಾರೆ.

ಇದನ್ನೂ ಓದಿ: ‘ಸೀತಾ ರಾಮ’ ಧಾರಾವಾಹಿ ನಟಿ ವೈಷ್ಣವಿ ಗೌಡಗೆ ಬಿತ್ತು ದಂಡ; ಮಾಡಿದ ತಪ್ಪೇನು?

ಅದ್ದೂರಿ ಎಂಗೇಜ್​ಮೆಂಟ್

ವೈಷ್ಣವಿ ಗೌಡ ಅವರು ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮದುವೆ ಹಾಗೂ ಎಂಗೇಜ್​ಮೆಂಟ್ ಬಗ್ಗೆ ಅವರು ತಮ್ಮದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಅವರು ಅಂದುಕೊಂಡ ರೀತಿಯಲ್ಲೇ ನಿಶ್ಚಿತಾರ್ಥ ನೆರವೇರಿದೆ ಎಂದು ಹೇಳಲಾಗುತ್ತಿದೆ. ಈ ವಿವಾಹಕ್ಕೆ ಆಪ್ತರು ಹಾಗೂ ಕುಟುಂಬದವರು ಮಾತ್ರ ಹಾಜರಿ ಹಾಕಿದ್ದರು. ವಿವಾಹದ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Tue, 15 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು