‘ಸೀತಾ ರಾಮ’ ಧಾರಾವಾಹಿ ನಟಿ ವೈಷ್ಣವಿ ಗೌಡಗೆ ಬಿತ್ತು ದಂಡ; ಮಾಡಿದ ತಪ್ಪೇನು?

Vaishnavi Gowda: ಧಾರಾವಾಹಿಗಳ ಶೂಟ್ ಮಾಡುವಾಗ ಬೈಕ್ ಓಡಿಸೋ ದೃಶ್ಯಗಳಿದ್ದರೆ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹೆಲ್ಮೆಟ್ ಹಾಕುವುದಿಲ್ಲ. ಮುಖ ಸರಿಯಾಗಿ ಕಾಣುವುದಿಲ್ಲ ಎನ್ನುವುದೇ ಇದಕ್ಕೆ ಕಾರಣ. ಆ ಬಗ್ಗೆ ಇಲ್ಲಿದೆ ವಿವರ.

‘ಸೀತಾ ರಾಮ’ ಧಾರಾವಾಹಿ ನಟಿ ವೈಷ್ಣವಿ ಗೌಡಗೆ ಬಿತ್ತು ದಂಡ; ಮಾಡಿದ ತಪ್ಪೇನು?
ವೈಷ್ಣವಿ ಗೌಡ
Follow us
|

Updated on: May 14, 2024 | 12:42 PM

ಕಿರುತೆರೆ ನಟಿ ವೈಷ್ಣವಿ ಗೌಡ (Vaishnavi Gowda) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ವೈಯಕ್ತಿಕ ಕಾರಣಕ್ಕೆ ಸುದ್ದಿ ಆಗಿದ್ದಾರೆ. ಟ್ರಾಫಿಕ್ ಪೊಲೀಸರು ವೈಷ್ಣವಿಗೆ 500 ರೂಪಾಯಿ ದಂಡ ವಿಧಿಸಿದ್ದಾರೆ ಎಂದು ವರದಿ ಆಗಿದೆ. ಅಷ್ಟಕ್ಕೂ ವೈಷ್ಣವಿ ಗೌಡ ಮಾಡಿದ ತಪ್ಪೇನು? ಅವರಿಗೆ ದಂಡ ಹಾಕಿದ್ದು ಯಾರು? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಧಾರಾವಾಹಿಗಳ ಶೂಟ್ ಮಾಡುವಾಗ ಬೈಕ್ ಓಡಿಸೋ ದೃಶ್ಯಗಳಿದ್ದರೆ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹೆಲ್ಮೆಟ್ ಹಾಕುವುದಿಲ್ಲ. ಮುಖ ಸರಿಯಾಗಿ ಕಾಣುವುದಿಲ್ಲ ಎನ್ನುವುದೇ ಇದಕ್ಕೆ ಕಾರಣ. ‘ಸೀತಾ ರಾಮ’ ಧಾರಾವಾಹಿ ಶೂಟ್ ವೇಳೆ ಕಥಾ ನಾಯಕಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಬೈಕ್​ನಲ್ಲಿ ತೆರಳುತ್ತಾ ಇರುವ ದೃಶ್ಯವಿತ್ತು.  ಬೈಕ್ ಓಡಿಸುತ್ತಿದ್ದ ಪ್ರಿಯಾ ಹೆಲ್ಮೆಟ್ ಹಾಕಿದ್ದರೆ, ಹಿಂದೆ ಕುಳಿತಿದ್ದ ಸೀತಾ ಹೆಲ್ಮೆಟ್ ಧರಿಸಿರಲಿಲ್ಲ. ಇದಕ್ಕೆ ಸಂಬಂಧಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎಂಬುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ದಾಖಲು ಮಾಡಿದ್ದರು.

ವಾಹಿನಿ ಹಾಗೂ ನಟಿಗೆ ಪೊಲೀಸರು ನೋಟಿಸ್ ನೀಡಿದ್ದರು. ಸಿನಿಮಾದ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದಿದೆ ಅನ್ನೋದು ಗೊತ್ತಾದ ಬಳಿಕ ಪ್ರಕರಣವನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಬೈಕ್ ಮಾಲೀಕರಾದ ಸವಿತಾ ಅವರಿಗೆ 500 ರೂಪಾಯಿ ಹಾಗೂ ವೈಷ್ಣವಿಗೆ 500 ರೂಪಾಯಿ ದಂಡ ವಿಧಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ: ‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಸ್ಪರ್ಧಿ ಆಗಿದ್ದ ಅವರು ಆ ಬಳಿಕ ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸೋಕೆ ಆರಂಭಿಸಿದರು. ಈ ಧಾರಾವಾಹಿ ಇತ್ತೀಚೆಗೆ 200 ಎಪಿಸೋಡ್ ಪೂರ್ಣಗೊಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್