AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಧಾರಾವಾಹಿ ನಟಿ ವೈಷ್ಣವಿ ಗೌಡಗೆ ಬಿತ್ತು ದಂಡ; ಮಾಡಿದ ತಪ್ಪೇನು?

Vaishnavi Gowda: ಧಾರಾವಾಹಿಗಳ ಶೂಟ್ ಮಾಡುವಾಗ ಬೈಕ್ ಓಡಿಸೋ ದೃಶ್ಯಗಳಿದ್ದರೆ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹೆಲ್ಮೆಟ್ ಹಾಕುವುದಿಲ್ಲ. ಮುಖ ಸರಿಯಾಗಿ ಕಾಣುವುದಿಲ್ಲ ಎನ್ನುವುದೇ ಇದಕ್ಕೆ ಕಾರಣ. ಆ ಬಗ್ಗೆ ಇಲ್ಲಿದೆ ವಿವರ.

‘ಸೀತಾ ರಾಮ’ ಧಾರಾವಾಹಿ ನಟಿ ವೈಷ್ಣವಿ ಗೌಡಗೆ ಬಿತ್ತು ದಂಡ; ಮಾಡಿದ ತಪ್ಪೇನು?
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on: May 14, 2024 | 12:42 PM

Share

ಕಿರುತೆರೆ ನಟಿ ವೈಷ್ಣವಿ ಗೌಡ (Vaishnavi Gowda) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರು ವೈಯಕ್ತಿಕ ಕಾರಣಕ್ಕೆ ಸುದ್ದಿ ಆಗಿದ್ದಾರೆ. ಟ್ರಾಫಿಕ್ ಪೊಲೀಸರು ವೈಷ್ಣವಿಗೆ 500 ರೂಪಾಯಿ ದಂಡ ವಿಧಿಸಿದ್ದಾರೆ ಎಂದು ವರದಿ ಆಗಿದೆ. ಅಷ್ಟಕ್ಕೂ ವೈಷ್ಣವಿ ಗೌಡ ಮಾಡಿದ ತಪ್ಪೇನು? ಅವರಿಗೆ ದಂಡ ಹಾಕಿದ್ದು ಯಾರು? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಧಾರಾವಾಹಿಗಳ ಶೂಟ್ ಮಾಡುವಾಗ ಬೈಕ್ ಓಡಿಸೋ ದೃಶ್ಯಗಳಿದ್ದರೆ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹೆಲ್ಮೆಟ್ ಹಾಕುವುದಿಲ್ಲ. ಮುಖ ಸರಿಯಾಗಿ ಕಾಣುವುದಿಲ್ಲ ಎನ್ನುವುದೇ ಇದಕ್ಕೆ ಕಾರಣ. ‘ಸೀತಾ ರಾಮ’ ಧಾರಾವಾಹಿ ಶೂಟ್ ವೇಳೆ ಕಥಾ ನಾಯಕಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಬೈಕ್​ನಲ್ಲಿ ತೆರಳುತ್ತಾ ಇರುವ ದೃಶ್ಯವಿತ್ತು.  ಬೈಕ್ ಓಡಿಸುತ್ತಿದ್ದ ಪ್ರಿಯಾ ಹೆಲ್ಮೆಟ್ ಹಾಕಿದ್ದರೆ, ಹಿಂದೆ ಕುಳಿತಿದ್ದ ಸೀತಾ ಹೆಲ್ಮೆಟ್ ಧರಿಸಿರಲಿಲ್ಲ. ಇದಕ್ಕೆ ಸಂಬಂಧಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎಂಬುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ದಾಖಲು ಮಾಡಿದ್ದರು.

ವಾಹಿನಿ ಹಾಗೂ ನಟಿಗೆ ಪೊಲೀಸರು ನೋಟಿಸ್ ನೀಡಿದ್ದರು. ಸಿನಿಮಾದ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದಿದೆ ಅನ್ನೋದು ಗೊತ್ತಾದ ಬಳಿಕ ಪ್ರಕರಣವನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಬೈಕ್ ಮಾಲೀಕರಾದ ಸವಿತಾ ಅವರಿಗೆ 500 ರೂಪಾಯಿ ಹಾಗೂ ವೈಷ್ಣವಿಗೆ 500 ರೂಪಾಯಿ ದಂಡ ವಿಧಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ: ‘ಕಾವಾಲಾ..’ ಹಾಡಿಗೆ ಸಖತ್ ಆಗಿ ಕುಣಿದ ನಟಿ ವೈಷ್ಣವಿ ಗೌಡ; ಈ ಬಗ್ಗೆ ಫ್ಯಾನ್ಸ್ ಕಮೆಂಟ್ ಮಾಡೋ ಹಾಗೇ ಇಲ್ಲ

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಸ್ಪರ್ಧಿ ಆಗಿದ್ದ ಅವರು ಆ ಬಳಿಕ ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸೋಕೆ ಆರಂಭಿಸಿದರು. ಈ ಧಾರಾವಾಹಿ ಇತ್ತೀಚೆಗೆ 200 ಎಪಿಸೋಡ್ ಪೂರ್ಣಗೊಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್