AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ಸೈಲೆಂಟ್​ ಆಗಿ ಬಿಗ್​ ಬಾಸ್​ ಗೆಲ್ತಾರಾ ವೈಷ್ಣವಿ? ಇಲ್ಲಿವೆ ಕಾರಣಗಳು ​

ಅವರು ಈಗ ಮೊದಲಿನ ವೈಷ್ಣವಿ ಆಗಿ ಉಳಿದಿಲ್ಲ. ಅವರಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅತಿ ಹೆಚ್ಚು ವೋಟ್​ ಪಡೆದು ಮೊದಲು ಸೇವ್​ ಆಗುತ್ತಿರುವವರು ಅವರೇ. ಸೀಸನ್​ 8 ಗೆಲ್ಲುವ ಸ್ಪರ್ಧಿಗಳ ಪೈಕಿ ವೈಷ್ಣವಿ ಹೆಸರು ಮುಂಚೂಣಿಯಲ್ಲಿದೆ.

Vaishnavi Gowda: ಸೈಲೆಂಟ್​ ಆಗಿ ಬಿಗ್​ ಬಾಸ್​ ಗೆಲ್ತಾರಾ ವೈಷ್ಣವಿ? ಇಲ್ಲಿವೆ ಕಾರಣಗಳು ​
ರಾಜೇಶ್ ದುಗ್ಗುಮನೆ
|

Updated on:Aug 06, 2021 | 6:03 PM

Share

ಕನ್ನಡ ಬಿಗ್​ ಬಾಸ್ ಸೀಸನ್​ 8ರ​ ಆರಂಭದ ದಿನಗಳವು. ಬಿಗ್​ ಬಾಸ್​ ಮನೆಗೆ ವೈಷ್ಣವಿ ಗೌಡ ಅವರನ್ನು ಯಾಕೆ ಕರೆತರಲಾಗಿದೆ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಅವರು ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಅಚ್ಚರಿ ತರಿಸಿತ್ತು. ಅವರು ಸದಾ ಒಬ್ಬಂಟಿಯಾಗಿರುತ್ತಿದ್ದರು. ಆದರೆ ಅವರು ಈಗ ಮೊದಲಿನ ವೈಷ್ಣವಿ ಆಗಿ ಉಳಿದಿಲ್ಲ. ಅವರಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅತಿ ಹೆಚ್ಚು ವೋಟ್​ ಪಡೆದು ಮೊದಲು ಸೇವ್​ ಆಗುತ್ತಿರುವವರು ಅವರೇ. ಸೀಸನ್​ 8 ಗೆಲ್ಲುವ ಸ್ಪರ್ಧಿಗಳ ಪೈಕಿ ವೈಷ್ಣವಿ ಹೆಸರು ಮುಂಚೂಣಿಯಲ್ಲಿದೆ.

ಪ್ಲಸ್​ ಪಾಯಿಂಟ್​

ಕಮ್​ಬ್ಯಾಕ್​:

ವೈಷ್ಣವಿ ಮೊದಲ ಇನ್ನಿಂಗ್ಸ್​ ಆರಂಭದಲ್ಲಿ ಟಾಸ್ಕ್​ನಲ್ಲಿ ಅಷ್ಟಾಗಿ ಭಾಗವಹಿಸುತ್ತಿರಲಿಲ್ಲ. ಯಾರ ಜತೆಗೂ ಅವರು ಅಷ್ಟಾಗಿ ಮಾತನಾಡುತ್ತಿರಲಿಲ್ಲ. ವೈಷ್ಣವಿ ಅವರು ಇನ್ನೂ ಎಕ್ಸ್​ಪ್ರೆಸಿವ್​ ಆಗಬಹುದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಇದನ್ನು ವೈಷ್ಣವಿ ಚಾಲೆಂಜ್​ ಆಗಿ ಸ್ವೀಕರಿಸಿದ್ದರು. ಅಲ್ಲದೆ, ಎಲ್ಲರ ಜತೆ ಬೆರೆಯೋಕೆ ಆರಂಭಿಸಿದರು. ಟಾಸ್ಕ್​ ಉತ್ತಮವಾಗಿ ನಿರ್ವಹಿಸಿದರು. ಈ ಮೂಲಕ ಎಲ್ಲರಿಂದ ಭೇಷ್​ ಎನಿಸಿಕೊಂಡರು. ಇದು ಅವರ ಉತ್ತಮ ಕಮ್​ಬ್ಯಾಕ್​.

ಇಷ್ಟವಾಗುವ ವ್ಯಕ್ತಿತ್ವ:

ವೈಷ್ಣವಿ ವ್ಯಕ್ತಿತ್ವ ಬಹುತೇಕರಿಗೆ ಇಷ್ಟವಾಗಿದೆ. ಅವರು ಮನೆಯಲ್ಲಿ ಸೈಲೆಂಟ್​ ಆಗಿರುತ್ತಾರೆ ನಿಜ. ಆದರೆ, ಎಲ್ಲಿ ಏನು ಮಾತನಾಡಬೇಕೋ ಅದನ್ನು ಮಾತನಾಡುತ್ತಾರೆ. ಅವರ ಸೌಮ್ಯ ಸ್ವಭಾವ ಎಲ್ಲರಿಗೂ ಇಷ್ಟವಾಗುತ್ತದೆ. ಇನ್ನು, ವೈಷ್ಣವಿ ನಗು ನೋಡಿ ಫಿದಾ ಆಗದವರೇ ಇಲ್ಲ.

ಎಲ್ಲ ಕಡೆ ಆ್ಯಕ್ಟಿವ್​:

ವೈಷ್ಣವಿ ಅಡುಗೆ ಮನೆಯಲ್ಲಿ ಹೆಚ್ಚು ಆ್ಯಕ್ಟಿವ್​. ಇದಲ್ಲದೆ, ಟಾಸ್ಕ್​ಗಳನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ. ತಪ್ಪು ಮಾಡುವುದು ಅವರು ತುಂಬಾನೇ ಕಡಿಮೆ. ತಪ್ಪು ಮಾಡಿದಾಗ ಅದನ್ನು ತಿದ್ದಿಕೊಂಡು ಮುಂದೆ ನಡೆದಿದ್ದಾರೆ. ಎಲ್ಲರ ಜತೆ ಅವರು ಸರಿಸಮಾನವಾಗಿ ಬೆರೆತಿದ್ದಾರೆ. ಇದು ಅವರು ಗೆಲ್ಲೋಕೆ ಸಹಾಯ ಮಾಡಬಹುದು.

ಹಿರಿದಾದ ಅಭಿಮಾನಿ ಬಳಗ:

‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ವೈಷ್ಣವಿ ಗುರುತಿಸಿಕೊಂಡವರು. ಆಗಲೇ ಅವರಿಗೆ ದೊಡ್ಡ ಅಭಿಮಾನಿ ಬಳಗ ಇತ್ತು. ಅದು ಈಗ ಮತ್ತಷ್ಟು ವಿಸ್ತರಣೆ ಆಗಿದೆ. ಈ ಕಾರಣಕ್ಕೆ ಅವರಿಗೆ ಹೆಚ್ಚು ವೋಟ್​ಗಳು ಬೀಳುತ್ತಿವೆ. ಕಳೆದ ಎರಡು ವಾರಗಳಿಂದ ಮೊದಲು ಸೇವ್​ ಆಗುತ್ತಿರುವ ಸ್ಪರ್ಧಿ ಎಂದರೆ ಅದು ವೈಷ್ಣವಿ ಅನ್ನೋದನ್ನು ಇಲ್ಲಿ ಗಮನಿಸಬೇಕು.

ಮೈನಸ್​ ಪಾಯಿಂಟ್​

ಕಾಂಪಿಟೇಷನ್​:

ಮಂಜು ಪಾವಗಡ ಹಾಗೂ ಅರವಿಂದ್ ಕಡೆಯಿಂದ ವೈಷ್ಣವಿ ಟಫ್​ ಕಾಂಪಿಟೇಷನ್​ ಎದುರಿಸುತ್ತಿದ್ದಾರೆ. ವೋಟ್​ ಯಾರಿಗೆ ಹೆಚ್ಚು ಬೀಳುತ್ತದೆಯೋ ಅವರು ಗೆದ್ದಂತೆ. ಈ ವಿಚಾರದಲ್ಲಿ ಜನರು ಯಾರ ಕೈ ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇಷ್ಟವಾಗಿಲ್ಲ ಈ ಗುಣಗಳು: 

ವೈಷ್ಣವಿ ಅವರು ಎಷ್ಟೇ ಬದಲಾದರೂ ಅವರ ಕೆಲವು ಗುಣಗಳು ವೀಕ್ಷಕರಿಗೆ ಇಷ್ಟವಾಗಿಲ್ಲ. ಕೆಲವೊಮ್ಮೆ ಅವರು ತುಂಬಾನೇ ಸೈಲೆಂಟ್​ ಆಗಿರುತ್ತಾರೆ. ಇನ್ನೂ ಕೆಲವೊಮ್ಮೆ ವೈಷ್ಣವಿ ಎಲ್ಲರ ಜತೆ ಬೆರೆತರೂ ಬೆರೆತಂತೆ ಇರುವುದಿಲ್ಲ. ಇದು ಅವರಿಗೆ ಮೈನಸ್​ ​ ಆಗಬಹುದು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಮಂಜು ಕೋರಿಕೆ ದಿವ್ಯಾಗೆ ಶಾಪವಾಯ್ತು; ನೊಂದುಕೊಂಡ ಉರುಡುಗ

Vaishnavi Gowda: ದೊಡ್ಮನೆಯೊಳಗೆ ವೈಷ್ಣವಿ ಜೊತೆ ಚೆನ್ನಾಗಿದ್ದ ರಘು ಗೌಡ ಫಿನಾಲೆ ವೇಳೆಗೆ ಪ್ರಚಾರ ಮಾಡಿದ್ದು ಯಾರ ಪರವಾಗಿ?

Published On - 6:02 pm, Fri, 6 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!