Vaishnavi Gowda: ಸೈಲೆಂಟ್​ ಆಗಿ ಬಿಗ್​ ಬಾಸ್​ ಗೆಲ್ತಾರಾ ವೈಷ್ಣವಿ? ಇಲ್ಲಿವೆ ಕಾರಣಗಳು ​

ಅವರು ಈಗ ಮೊದಲಿನ ವೈಷ್ಣವಿ ಆಗಿ ಉಳಿದಿಲ್ಲ. ಅವರಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅತಿ ಹೆಚ್ಚು ವೋಟ್​ ಪಡೆದು ಮೊದಲು ಸೇವ್​ ಆಗುತ್ತಿರುವವರು ಅವರೇ. ಸೀಸನ್​ 8 ಗೆಲ್ಲುವ ಸ್ಪರ್ಧಿಗಳ ಪೈಕಿ ವೈಷ್ಣವಿ ಹೆಸರು ಮುಂಚೂಣಿಯಲ್ಲಿದೆ.

Vaishnavi Gowda: ಸೈಲೆಂಟ್​ ಆಗಿ ಬಿಗ್​ ಬಾಸ್​ ಗೆಲ್ತಾರಾ ವೈಷ್ಣವಿ? ಇಲ್ಲಿವೆ ಕಾರಣಗಳು ​
Follow us
|

Updated on:Aug 06, 2021 | 6:03 PM

ಕನ್ನಡ ಬಿಗ್​ ಬಾಸ್ ಸೀಸನ್​ 8ರ​ ಆರಂಭದ ದಿನಗಳವು. ಬಿಗ್​ ಬಾಸ್​ ಮನೆಗೆ ವೈಷ್ಣವಿ ಗೌಡ ಅವರನ್ನು ಯಾಕೆ ಕರೆತರಲಾಗಿದೆ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಅವರು ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಅಚ್ಚರಿ ತರಿಸಿತ್ತು. ಅವರು ಸದಾ ಒಬ್ಬಂಟಿಯಾಗಿರುತ್ತಿದ್ದರು. ಆದರೆ ಅವರು ಈಗ ಮೊದಲಿನ ವೈಷ್ಣವಿ ಆಗಿ ಉಳಿದಿಲ್ಲ. ಅವರಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಅತಿ ಹೆಚ್ಚು ವೋಟ್​ ಪಡೆದು ಮೊದಲು ಸೇವ್​ ಆಗುತ್ತಿರುವವರು ಅವರೇ. ಸೀಸನ್​ 8 ಗೆಲ್ಲುವ ಸ್ಪರ್ಧಿಗಳ ಪೈಕಿ ವೈಷ್ಣವಿ ಹೆಸರು ಮುಂಚೂಣಿಯಲ್ಲಿದೆ.

ಪ್ಲಸ್​ ಪಾಯಿಂಟ್​

ಕಮ್​ಬ್ಯಾಕ್​:

ವೈಷ್ಣವಿ ಮೊದಲ ಇನ್ನಿಂಗ್ಸ್​ ಆರಂಭದಲ್ಲಿ ಟಾಸ್ಕ್​ನಲ್ಲಿ ಅಷ್ಟಾಗಿ ಭಾಗವಹಿಸುತ್ತಿರಲಿಲ್ಲ. ಯಾರ ಜತೆಗೂ ಅವರು ಅಷ್ಟಾಗಿ ಮಾತನಾಡುತ್ತಿರಲಿಲ್ಲ. ವೈಷ್ಣವಿ ಅವರು ಇನ್ನೂ ಎಕ್ಸ್​ಪ್ರೆಸಿವ್​ ಆಗಬಹುದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಇದನ್ನು ವೈಷ್ಣವಿ ಚಾಲೆಂಜ್​ ಆಗಿ ಸ್ವೀಕರಿಸಿದ್ದರು. ಅಲ್ಲದೆ, ಎಲ್ಲರ ಜತೆ ಬೆರೆಯೋಕೆ ಆರಂಭಿಸಿದರು. ಟಾಸ್ಕ್​ ಉತ್ತಮವಾಗಿ ನಿರ್ವಹಿಸಿದರು. ಈ ಮೂಲಕ ಎಲ್ಲರಿಂದ ಭೇಷ್​ ಎನಿಸಿಕೊಂಡರು. ಇದು ಅವರ ಉತ್ತಮ ಕಮ್​ಬ್ಯಾಕ್​.

ಇಷ್ಟವಾಗುವ ವ್ಯಕ್ತಿತ್ವ:

ವೈಷ್ಣವಿ ವ್ಯಕ್ತಿತ್ವ ಬಹುತೇಕರಿಗೆ ಇಷ್ಟವಾಗಿದೆ. ಅವರು ಮನೆಯಲ್ಲಿ ಸೈಲೆಂಟ್​ ಆಗಿರುತ್ತಾರೆ ನಿಜ. ಆದರೆ, ಎಲ್ಲಿ ಏನು ಮಾತನಾಡಬೇಕೋ ಅದನ್ನು ಮಾತನಾಡುತ್ತಾರೆ. ಅವರ ಸೌಮ್ಯ ಸ್ವಭಾವ ಎಲ್ಲರಿಗೂ ಇಷ್ಟವಾಗುತ್ತದೆ. ಇನ್ನು, ವೈಷ್ಣವಿ ನಗು ನೋಡಿ ಫಿದಾ ಆಗದವರೇ ಇಲ್ಲ.

ಎಲ್ಲ ಕಡೆ ಆ್ಯಕ್ಟಿವ್​:

ವೈಷ್ಣವಿ ಅಡುಗೆ ಮನೆಯಲ್ಲಿ ಹೆಚ್ಚು ಆ್ಯಕ್ಟಿವ್​. ಇದಲ್ಲದೆ, ಟಾಸ್ಕ್​ಗಳನ್ನು ಅದ್ಭುತವಾಗಿ ನಿರ್ವಹಿಸಿದ್ದಾರೆ. ತಪ್ಪು ಮಾಡುವುದು ಅವರು ತುಂಬಾನೇ ಕಡಿಮೆ. ತಪ್ಪು ಮಾಡಿದಾಗ ಅದನ್ನು ತಿದ್ದಿಕೊಂಡು ಮುಂದೆ ನಡೆದಿದ್ದಾರೆ. ಎಲ್ಲರ ಜತೆ ಅವರು ಸರಿಸಮಾನವಾಗಿ ಬೆರೆತಿದ್ದಾರೆ. ಇದು ಅವರು ಗೆಲ್ಲೋಕೆ ಸಹಾಯ ಮಾಡಬಹುದು.

ಹಿರಿದಾದ ಅಭಿಮಾನಿ ಬಳಗ:

‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ವೈಷ್ಣವಿ ಗುರುತಿಸಿಕೊಂಡವರು. ಆಗಲೇ ಅವರಿಗೆ ದೊಡ್ಡ ಅಭಿಮಾನಿ ಬಳಗ ಇತ್ತು. ಅದು ಈಗ ಮತ್ತಷ್ಟು ವಿಸ್ತರಣೆ ಆಗಿದೆ. ಈ ಕಾರಣಕ್ಕೆ ಅವರಿಗೆ ಹೆಚ್ಚು ವೋಟ್​ಗಳು ಬೀಳುತ್ತಿವೆ. ಕಳೆದ ಎರಡು ವಾರಗಳಿಂದ ಮೊದಲು ಸೇವ್​ ಆಗುತ್ತಿರುವ ಸ್ಪರ್ಧಿ ಎಂದರೆ ಅದು ವೈಷ್ಣವಿ ಅನ್ನೋದನ್ನು ಇಲ್ಲಿ ಗಮನಿಸಬೇಕು.

ಮೈನಸ್​ ಪಾಯಿಂಟ್​

ಕಾಂಪಿಟೇಷನ್​:

ಮಂಜು ಪಾವಗಡ ಹಾಗೂ ಅರವಿಂದ್ ಕಡೆಯಿಂದ ವೈಷ್ಣವಿ ಟಫ್​ ಕಾಂಪಿಟೇಷನ್​ ಎದುರಿಸುತ್ತಿದ್ದಾರೆ. ವೋಟ್​ ಯಾರಿಗೆ ಹೆಚ್ಚು ಬೀಳುತ್ತದೆಯೋ ಅವರು ಗೆದ್ದಂತೆ. ಈ ವಿಚಾರದಲ್ಲಿ ಜನರು ಯಾರ ಕೈ ಹಿಡಿಯುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇಷ್ಟವಾಗಿಲ್ಲ ಈ ಗುಣಗಳು: 

ವೈಷ್ಣವಿ ಅವರು ಎಷ್ಟೇ ಬದಲಾದರೂ ಅವರ ಕೆಲವು ಗುಣಗಳು ವೀಕ್ಷಕರಿಗೆ ಇಷ್ಟವಾಗಿಲ್ಲ. ಕೆಲವೊಮ್ಮೆ ಅವರು ತುಂಬಾನೇ ಸೈಲೆಂಟ್​ ಆಗಿರುತ್ತಾರೆ. ಇನ್ನೂ ಕೆಲವೊಮ್ಮೆ ವೈಷ್ಣವಿ ಎಲ್ಲರ ಜತೆ ಬೆರೆತರೂ ಬೆರೆತಂತೆ ಇರುವುದಿಲ್ಲ. ಇದು ಅವರಿಗೆ ಮೈನಸ್​ ​ ಆಗಬಹುದು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಮಂಜು ಕೋರಿಕೆ ದಿವ್ಯಾಗೆ ಶಾಪವಾಯ್ತು; ನೊಂದುಕೊಂಡ ಉರುಡುಗ

Vaishnavi Gowda: ದೊಡ್ಮನೆಯೊಳಗೆ ವೈಷ್ಣವಿ ಜೊತೆ ಚೆನ್ನಾಗಿದ್ದ ರಘು ಗೌಡ ಫಿನಾಲೆ ವೇಳೆಗೆ ಪ್ರಚಾರ ಮಾಡಿದ್ದು ಯಾರ ಪರವಾಗಿ?

Published On - 6:02 pm, Fri, 6 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ