AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರ ಪತ್ನಿ ಐದು ತಿಂಗಳ ಗರ್ಭಿಣಿ’; ಸಂಪತ್ ಸಾವಿನ ಬಗ್ಗೆ ಬೇಸರ ಹೊರಹಾಕಿದ ವೈಷ್ಣವಿ

Vaishnavi Gowda: ವೈಷ್ಣವಿ ಗೌಡ ಅವರಿಗೆ ಖ್ಯಾತಿ ತಂದುಕೊಟ್ಟಿದ್ದು ‘ಅಗ್ನಿಸಾಕ್ಷಿ’ ಧಾರಾವಾಹಿ. ಈ ಧಾರಾವಾಹಿ ಮೂಲಕ ಅವರು ಸನ್ನಿಧಿ ಎಂದೇ ಜನಪ್ರಿಯತೆ ಪಡೆದರು. ಈ ಧಾರಾವಾಹಿಯಲ್ಲಿ ವೈಷ್ಣವಿ ಸಹೋದರನ ಪಾತ್ರವನ್ನು ಸಂಪತ್ ಮಾಡಿದ್ದರು.

‘ಅವರ ಪತ್ನಿ ಐದು ತಿಂಗಳ ಗರ್ಭಿಣಿ’; ಸಂಪತ್ ಸಾವಿನ ಬಗ್ಗೆ ಬೇಸರ ಹೊರಹಾಕಿದ ವೈಷ್ಣವಿ
ಪತ್ನಿ ಜೊತೆ ಸಂಪತ್​- ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on:Apr 26, 2023 | 8:08 AM

Share

‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದ ನಟ ಸಂಪತ್ ಜಯರಾಮ್ (Sampath Jaya Ram) ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೆಂಡತಿಗೆ ಹೆದರಿಸಲು ಹೋಗಿ ಅವರು ಜೀವ ಕಳೆದುಕೊಂಡರು ಎಂದು ನಟ ರಾಜೇಶ್ ಧ್ರುವ ಹೇಳಿದ್ದರು. ಈಗ ಸಂಪತ್ ಸಾವಿನ ಬಗ್ಗೆ ನಟಿ ವೈಷ್ಣವಿ ಗೌಡ ಮಾತನಾಡಿದ್ದಾರೆ. ವೈಷ್ಣವಿ ಗೌಡ ಅವರು ‘ಅಗ್ನಿಸಾಕ್ಷಿ’ (Agnisakshi Serial) ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡಿದ್ದರು. ಸಂಪತ್ ರಾಜ್ ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಈಗ ಅವರನ್ನು ಕಳೆದುಕೊಂಡಿದ್ದು ವೈಷ್ಣವಿ ಗೌಡ ಅವರಿಗೆ ಬೇಸರ ಮೂಡಿಸಿದೆ. ಸಂಪತ್ ಪತ್ನಿಯ ಪರಿಸ್ಥಿತಿ ನೆನೆದು ಬೇಸರಗೊಂಡಿದ್ದಾರೆ.

ವೈಷ್ಣವಿ ಗೌಡ ಅವರಿಗೆ ಖ್ಯಾತಿ ತಂದುಕೊಟ್ಟಿದ್ದು ‘ಅಗ್ನಿಸಾಕ್ಷಿ’ ಧಾರಾವಾಹಿ. ಈ ಧಾರಾವಾಹಿ ಮೂಲಕ ಅವರು ಸನ್ನಿಧಿ ಎಂದೇ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ವೈಷ್ಣವಿ ಸಹೋದರನ ಪಾತ್ರವನ್ನು ಸಂಪತ್ ಮಾಡಿದ್ದರು. ಸಂಪತ್ ತೆಗೆದುಕೊಂಡ ನಿರ್ಧಾರ ವೈಷ್ಣವಿಗೆ ಬೇಸರ ತರಿಸಿದೆ. ಅವರು ಈ ಬಗ್ಗೆ ಹಿಂದುಸ್ತಾನ್ ಟೈಮ್ಸ್ ಜೊತೆ ಮಾತನಾಡಿದ್ದಾರೆ.

‘ಸಂಪತ್ ಸೆಟ್‌ನಲ್ಲಿ ಯಾವಾಗಲೂ ನಗುತ್ತಿದ್ದರು ಮತ್ತು ಇತರರನ್ನು ನಗಿಸುತ್ತಿದ್ದರು. ಅವರು ಧಾರಾವಾಹಿಯಲ್ಲಿ ನನ್ನ ಸಹೋದರನ ಪಾತ್ರ ನಿರ್ವಹಿಸಿದ್ದರು. ನಮ್ಮಿಬ್ಬರ ಕಾಂಬಿನೇಷನ್ ದಿನಾಲೂ ಇರುತ್ತಿರಲಿಲ್ಲ. ಆದರೆ, ಇದ್ದಾಗೆಲ್ಲ ಅವರು ಖುಷಿಯಿಂದ ಮಾತನಾಡುತ್ತಿದ್ದರು. ಜೀವನದ ಬಗ್ಗೆ ಅವರು ಎಂದಿಗೂ ದೂರಿಲ್ಲ. ಸೆಟ್‌ನಲ್ಲಿ ಅವರು ಯಾವಾಗಲೂ ಬೇಸರದಲ್ಲಿ ಇದ್ದಿದ್ದನ್ನು ನೋಡಿಲ್ಲ’ ಎಂದು ವೈಷ್ಣವಿ ಗೌಡ ಹೇಳಿದ್ದಾರೆ.

‘ಅಗ್ನಿಸಾಕ್ಷಿ ಕೊನೆಗೊಂಡಾಗಿನಿಂದ ಸಂಪತ್​ನ​ ಭೇಟಿ ಆಗಿರಲಿಲ್ಲ. ಅವರು ನನ್ನನ್ನು ಪಾರ್ಟಿ ಮತ್ತು ಮದುವೆಗೆ ಕರೆದಿದ್ದರು. ಆದರೆ ಶೂಟಿಂಗ್​ನಲ್ಲಿ ಬ್ಯುಸಿ ಇದ್ದ ಕಾರಣ ನಾನು ಅಲ್ಲಿಗೆ ಹೋಗಲು ಸಾಧ್ಯವಾಗಿರಲಿಲ್ಲ. ನಾನು ಕಾಲ್​​ನಲ್ಲಿ ಮಾತನಾಡಿ ಅವರಿಗೆ ಶುಭಾಶಯ ತಿಳಿಸಿದ್ದೆ. ಸಂಪತ್​ಗೆ ಮದುವೆಯಾಗಿ ಒಂದು ವರ್ಷವೂ ಆಗಿಲ್ಲ. ನನಗೆ ತಿಳಿದಿರುವ ಪ್ರಕಾರ ಅವರ ಪತ್ನಿ ಐದು ತಿಂಗಳ ಗರ್ಭಿಣಿ. ಹೀಗಿರುವಾಗ ಅವರಿಗೆ ಯಾವ ವಿಚಾರ ಆತ್ಮಹತ್ಯೆಗೆ ಪ್ರೇರೇಪಿಸಿತೋ ಗೊತ್ತಿಲ್ಲ’ ಎಂದಿದ್ದಾರೆ ವೈಷ್ಣವಿ.

ಇದನ್ನೂ ಓದಿ: Sampath Jayaram: ಕನ್ನಡ ಸೀರಿಯಲ್​ ನಟ ಸಂಪತ್​ ಜಯರಾಮ್​ ಆತ್ಮಹತ್ಯೆ; ಕಂಬನಿ ಮಿಡಿದ ಸೆಲೆಬ್ರಿಟಿಗಳು

ವೈಷ್ಣವಿ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿ ಆಗಿದ್ದರು. ಅವರು ಈಗ ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿ ಹಲವು ತಿಂಗಳು ಕಳೆದಿದೆ. ಆದರೆ, ಧಾರಾವಾಹಿ ಪ್ರಸಾರ ದಿನಾಂಕ ಈವರೆಗೆ ಘೋಷಣೆ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:04 am, Wed, 26 April 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​