AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮಾಸ್ಕ್​ ಧರಿಸಿ ಮಿಂಚಿದ ವೈಷ್ಣವಿ ಗೌಡ; ಈ ಸಲ ಕಪ್​ ನಮ್ಮದೇ ಎಂದ ಸನ್ನಿಧಿ

ವೈಷ್ಣವಿ ಗೌಡ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಪರಿಚಯಗೊಂಡರು. ಆ ಧಾರಾವಾಹಿಯಲ್ಲಿ ಅವರು ನಿರ್ವಹಿಸಿದ್ದ ಸನ್ನಿಧಿ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಅನೇಕರು ಅವರನ್ನು ವೈಷ್ಣವಿ ಎನ್ನುವ ಬದಲು ಸನ್ನಿಧಿ ಎಂದೇ ಕರೆದ ಉದಾಹರಣೆ ಇದೆ.

ಆರ್​ಸಿಬಿ ಮಾಸ್ಕ್​ ಧರಿಸಿ ಮಿಂಚಿದ ವೈಷ್ಣವಿ ಗೌಡ; ಈ ಸಲ ಕಪ್​ ನಮ್ಮದೇ ಎಂದ ಸನ್ನಿಧಿ
ವೈಷ್ಣವಿ ಗೌಡ
TV9 Web
| Edited By: |

Updated on: Sep 24, 2021 | 7:26 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ ವೈಷ್ಣವಿ ಗೌಡ ಅವರು ಫಿನಾಲೆ ರೇಸ್​ನಲ್ಲಿದ್ದರು. ಟಾಪ್​ ಎರಡರಲ್ಲಿ ಅವರು ಕೂಡ ಇರುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ, ಮೂರನೇ ರನ್ನರ್​​ಅಪ್​ ಸ್ಥಾನಕ್ಕೆ ಖುಷಿಪಟ್ಟುಕೊಂಡರು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ವಿವಿಧ ಪೋಸ್ಟ್​ಗಳನ್ನು ಹಾಕುವ ಮೂಲಕ ಅಭಿಮಾನಿಗಳ ಜತೆ ಸಂಪರ್ಕದಲ್ಲಿದ್ದಾರೆ. ಈಗ ಅವರು ಆರ್​ಸಿಬಿಗೆ ಸಪೋರ್ಟ್​ ಮಾಡಿ ಪೋಸ್ಟ್​ ಒಂದನ್ನು ಮಾಡಿದ್ದಾರೆ.

ವೈಷ್ಣವಿ ಗೌಡ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಪರಿಚಯಗೊಂಡರು. ಆ ಧಾರಾವಾಹಿಯಲ್ಲಿ ಅವರು ನಿರ್ವಹಿಸಿದ್ದ ಸನ್ನಿಧಿ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಅನೇಕರು ಅವರನ್ನು ವೈಷ್ಣವಿ ಎನ್ನುವ ಬದಲು ಸನ್ನಿಧಿ ಎಂದೇ ಕರೆದ ಉದಾಹರಣೆ ಇದೆ. ಬಿಗ್​ ಬಾಸ್​ ಮನೆ ಪ್ರವೇಶಿಸಿದ ನಂತರದಲ್ಲಿ ಅವರು ಖ್ಯಾತಿ ದುಪ್ಪಟ್ಟಾಗಿದೆ. ಈಗ ವೈಷ್ಣವಿ ಆರ್​ಸಿಬಿಗೆ ಸಪೋರ್ಟ್​ ಮಾಡಿ ಪೋಸ್ಟ್ ಒಂದನ್ನು ಮಾಡಿದ್ದಾರೆ.

ಇಂದು (ಸೆಪ್ಟೆಂಬರ್​ 24) ವಿರಾಟ್​ ಕೊಹ್ಲಿ ನೇತೃತ್ವದ ಆರ್​ಸಿಬಿ ಹಾಗೂ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್​ ನಡುವೆ ಹಣಾಹಣಿ ಏರ್ಪಡುತ್ತಿದೆ. ಆರ್​ಸಿಬಿ vs ಸಿಎಸ್​ಕೆ ಮ್ಯಾಚ್​ ಬಂದರೆ ಸಾಕು ಅಭಿಮಾನಿಗಳ ಪಾಲಿಗೆ ಹಬ್ಬದೂಟ. ಈ ಮ್ಯಾಚ್​ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿರುತ್ತಾರೆ. ಇಂದು ಧೋನಿ ಹಾಗೂ ಕೊಹ್ಲಿ ಮುಖಮುಖಿ ಆಗುತ್ತಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಮ್ಯಾಚ್​ನಲ್ಲಿ ವೈಷ್ಣವಿ ಅವರು ಆರ್​ಸಿಬಿಯನ್ನು ಬೆಂಬಲಿಸಿದ್ದಾರೆ.

ಆರ್​ಸಿಬಿ ಲೋಗೋ ಇರುವ ಮಾಸ್ಕ್​ ಧರಿಸಿರುವ ವೈಷ್ಣವಿ ‘ಈ ಸಲ ಕಪ್​ ನಮ್ದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಫೋಟೋ ಪೋಸ್ಟ್​ ಮಾಡಿದ್ದಾರೆ. ಅಲ್ಲದೆ, ಆರ್​ಸಿಬಿ ಮ್ಯಾಚ್​ಗಾಗಿ ಕಾಯುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಸದ್ಯ, ಈ ಫೋಟೋ ಸಾಕಷ್ಟು ವೈರಲ್​ ಆಗುತ್ತಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಅಂಕಪಟ್ಟಿಯಲ್ಲಿ ಚೆನ್ನೈ ಮೊದಲ ಸ್ಥಾನದಲ್ಲಿದ್ದರೆ, ಆರ್​ಸಿಬಿ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೆ ಬದಲಾದ ವೈಷ್ಣವಿ ಗೌಡ; ಬೇಸರಗೊಂಡ ರಘು 

ಕುಟುಂಬದವರ ಸುದ್ದಿಗೆ ಬಂದ ಶಮಂತ್​ಗೆ ಸರಿಯಾಗೇ ತಿರುಗೇಟು ನೀಡಿದ ವೈಷ್ಣವಿ ಗೌಡ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ