AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಮಾಸ್ಕ್​ ಧರಿಸಿ ಮಿಂಚಿದ ವೈಷ್ಣವಿ ಗೌಡ; ಈ ಸಲ ಕಪ್​ ನಮ್ಮದೇ ಎಂದ ಸನ್ನಿಧಿ

ವೈಷ್ಣವಿ ಗೌಡ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಪರಿಚಯಗೊಂಡರು. ಆ ಧಾರಾವಾಹಿಯಲ್ಲಿ ಅವರು ನಿರ್ವಹಿಸಿದ್ದ ಸನ್ನಿಧಿ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಅನೇಕರು ಅವರನ್ನು ವೈಷ್ಣವಿ ಎನ್ನುವ ಬದಲು ಸನ್ನಿಧಿ ಎಂದೇ ಕರೆದ ಉದಾಹರಣೆ ಇದೆ.

ಆರ್​ಸಿಬಿ ಮಾಸ್ಕ್​ ಧರಿಸಿ ಮಿಂಚಿದ ವೈಷ್ಣವಿ ಗೌಡ; ಈ ಸಲ ಕಪ್​ ನಮ್ಮದೇ ಎಂದ ಸನ್ನಿಧಿ
ವೈಷ್ಣವಿ ಗೌಡ
TV9 Web
| Edited By: |

Updated on: Sep 24, 2021 | 7:26 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ ವೈಷ್ಣವಿ ಗೌಡ ಅವರು ಫಿನಾಲೆ ರೇಸ್​ನಲ್ಲಿದ್ದರು. ಟಾಪ್​ ಎರಡರಲ್ಲಿ ಅವರು ಕೂಡ ಇರುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ, ಮೂರನೇ ರನ್ನರ್​​ಅಪ್​ ಸ್ಥಾನಕ್ಕೆ ಖುಷಿಪಟ್ಟುಕೊಂಡರು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ವಿವಿಧ ಪೋಸ್ಟ್​ಗಳನ್ನು ಹಾಕುವ ಮೂಲಕ ಅಭಿಮಾನಿಗಳ ಜತೆ ಸಂಪರ್ಕದಲ್ಲಿದ್ದಾರೆ. ಈಗ ಅವರು ಆರ್​ಸಿಬಿಗೆ ಸಪೋರ್ಟ್​ ಮಾಡಿ ಪೋಸ್ಟ್​ ಒಂದನ್ನು ಮಾಡಿದ್ದಾರೆ.

ವೈಷ್ಣವಿ ಗೌಡ ಅವರು ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಪರಿಚಯಗೊಂಡರು. ಆ ಧಾರಾವಾಹಿಯಲ್ಲಿ ಅವರು ನಿರ್ವಹಿಸಿದ್ದ ಸನ್ನಿಧಿ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು. ಅನೇಕರು ಅವರನ್ನು ವೈಷ್ಣವಿ ಎನ್ನುವ ಬದಲು ಸನ್ನಿಧಿ ಎಂದೇ ಕರೆದ ಉದಾಹರಣೆ ಇದೆ. ಬಿಗ್​ ಬಾಸ್​ ಮನೆ ಪ್ರವೇಶಿಸಿದ ನಂತರದಲ್ಲಿ ಅವರು ಖ್ಯಾತಿ ದುಪ್ಪಟ್ಟಾಗಿದೆ. ಈಗ ವೈಷ್ಣವಿ ಆರ್​ಸಿಬಿಗೆ ಸಪೋರ್ಟ್​ ಮಾಡಿ ಪೋಸ್ಟ್ ಒಂದನ್ನು ಮಾಡಿದ್ದಾರೆ.

ಇಂದು (ಸೆಪ್ಟೆಂಬರ್​ 24) ವಿರಾಟ್​ ಕೊಹ್ಲಿ ನೇತೃತ್ವದ ಆರ್​ಸಿಬಿ ಹಾಗೂ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್​ ನಡುವೆ ಹಣಾಹಣಿ ಏರ್ಪಡುತ್ತಿದೆ. ಆರ್​ಸಿಬಿ vs ಸಿಎಸ್​ಕೆ ಮ್ಯಾಚ್​ ಬಂದರೆ ಸಾಕು ಅಭಿಮಾನಿಗಳ ಪಾಲಿಗೆ ಹಬ್ಬದೂಟ. ಈ ಮ್ಯಾಚ್​ ನೋಡೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿರುತ್ತಾರೆ. ಇಂದು ಧೋನಿ ಹಾಗೂ ಕೊಹ್ಲಿ ಮುಖಮುಖಿ ಆಗುತ್ತಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಮ್ಯಾಚ್​ನಲ್ಲಿ ವೈಷ್ಣವಿ ಅವರು ಆರ್​ಸಿಬಿಯನ್ನು ಬೆಂಬಲಿಸಿದ್ದಾರೆ.

ಆರ್​ಸಿಬಿ ಲೋಗೋ ಇರುವ ಮಾಸ್ಕ್​ ಧರಿಸಿರುವ ವೈಷ್ಣವಿ ‘ಈ ಸಲ ಕಪ್​ ನಮ್ದೇ’ ಎನ್ನುವ ಕ್ಯಾಪ್ಶನ್​ನೊಂದಿಗೆ ಫೋಟೋ ಪೋಸ್ಟ್​ ಮಾಡಿದ್ದಾರೆ. ಅಲ್ಲದೆ, ಆರ್​ಸಿಬಿ ಮ್ಯಾಚ್​ಗಾಗಿ ಕಾಯುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ. ಸದ್ಯ, ಈ ಫೋಟೋ ಸಾಕಷ್ಟು ವೈರಲ್​ ಆಗುತ್ತಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಅಂಕಪಟ್ಟಿಯಲ್ಲಿ ಚೆನ್ನೈ ಮೊದಲ ಸ್ಥಾನದಲ್ಲಿದ್ದರೆ, ಆರ್​ಸಿಬಿ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೆ ಬದಲಾದ ವೈಷ್ಣವಿ ಗೌಡ; ಬೇಸರಗೊಂಡ ರಘು 

ಕುಟುಂಬದವರ ಸುದ್ದಿಗೆ ಬಂದ ಶಮಂತ್​ಗೆ ಸರಿಯಾಗೇ ತಿರುಗೇಟು ನೀಡಿದ ವೈಷ್ಣವಿ ಗೌಡ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ