AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamal Haasan: ‘ಮಹಿಳಾ ಸ್ಪರ್ಧಿ ಪರ ಬಿಗ್​ ಬಾಸ್​ ನಿರೂಪಕ ಕಮಲ್​ ಹಾಸನ್​ ಪಕ್ಷಪಾತ’: ವನಿತಾ ಆರೋಪ

Vanitha Vijayakumar | Bigg Boss Tamil 6: ವನಿತಾ ವಿಜಯ್​ಕುಮಾರ್​ ಅವರು ‘ಬಿಗ್​ ಬಾಸ್​ ತಮಿಳು 6’ ಕಾರ್ಯಕ್ರಮವನ್ನು ಫಾಲೋ ಮಾಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯನ್ನು ನೋಡಿದ ಬಳಿಕ ಅವರಿಗೆ ಪಕ್ಷಪಾತದ ಅನುಮಾನ ಮೂಡಿದೆ.

Kamal Haasan: ‘ಮಹಿಳಾ ಸ್ಪರ್ಧಿ ಪರ ಬಿಗ್​ ಬಾಸ್​ ನಿರೂಪಕ ಕಮಲ್​ ಹಾಸನ್​ ಪಕ್ಷಪಾತ’: ವನಿತಾ ಆರೋಪ
ಕಮಲ್​ ಹಾಸನ್​, ವನಿತಾ ವಿಜಯ್​ಕುಮಾರ್​
TV9 Web
| Updated By: ಮದನ್​ ಕುಮಾರ್​|

Updated on:Nov 23, 2022 | 12:58 PM

Share

ಕನ್ನಡ, ಹಿಂದಿ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲೂ ಬಿಗ್​ ಬಾಸ್​ ಕಾರ್ಯಕ್ರಮ ಫೇಮಸ್​ ಆಗಿದೆ. ತಮಿಳಿನಲ್ಲಿ (Bigg Boss Tamil 6) ಕಮಲ್​ ಹಾಸನ್​ ಅವರು ಈ ಶೋ ನಡೆಸಿಕೊಡುತ್ತಿದ್ದಾರೆ. ಅವರ ನಿರೂಪಣೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದರೆ ಅವರ ಮೇಲೆ ಈಗೊಂದು ಆರೋಪ ಕೇಳಿಬಂದಿದೆ. ಮಹಿಳಾ ಸ್ಪರ್ಧಿಯೊಬ್ಬರ ಪರವಾಗಿ ಕಮಲ್​ ಹಾಸನ್​ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಮಾಜಿ ಸ್ಪರ್ಧಿ ವನಿತಾ ವಿಜಯ್​ಕುಮಾರ್​ (Vanitha Vijayakumar) ಆರೋಪ ಮಾಡಿದ್ದಾರೆ. ಈ ಕುರಿತು ಹೊಸ ಚರ್ಚೆ ಶುರುವಾಗಿದೆ. ವನಿತಾ ಮಾಡಿರುವ ಈ ಆರೋಪದಿಂದ ಕಮಲ್​ ಹಾಸನ್​ (Kamal Haasan) ಅಭಿಮಾನಿಗಳು ಗರಂ ಆಗಿದ್ದಾರೆ.

ತಮಿಳು ಬಿಗ್​ ಬಾಸ್​ ಕಾರ್ಯಕ್ರಮ ಈವರೆಗೆ 5 ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈಗ 6ನೇ ಸೀಸನ್​ ನಡೆಯುತ್ತಿದೆ. ಕಮಲ್​ ಹಾಸನ್​ ಅವರು ಈ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಮನೆಯ ವಿನ್ಯಾಸವನ್ನು ಬದಲಾಯಿಸಲಾಗಿದೆ. ಕೋರ್ಟ್​ ರೀತಿಯಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಅದಕ್ಕೆ ಅನುಗುಣವಾಗಿ ಟಾಸ್ಕ್​ ನೀಡಲಾಗಿದೆ. ಈ ಶೋನಲ್ಲಿ ಕಮಲ್​ ಹಾಸನ್​ ಅವರು ನಟಿ ರಚಿತಾ ಮಹಾಲಕ್ಷ್ಮಿ ಪರವಾಗಿ ಪಕ್ಷಪಾತ ಮಾಡಿದ್ದಾರೆ ಎಂದು ವನಿತಾ ವಿಜಯ್​ಕುಮಾರ್​ ಹೇಳಿದ್ದಾರೆ.

‘ಬಿಗ್​ ಬಾಸ್​ ತಮಿಳು 3’ರಲ್ಲಿ ವನಿತಾ ವಿಜಯ್​ಕುಮಾರ್ ಅವರು ಸ್ಪರ್ಧಿಸಿದ್ದರು. ‘ಬಿಗ್​ ಬಾಸ್​ ತಮಿಳು 4’ರಲ್ಲಿ ಅತಿಥಿಯಾಗಿ ಆಗಮಿಸಿದ್ದರು. ಒಟಿಟಿ ಆವೃತ್ತಿಯಾದ ‘ಬಿಗ್​ ಬಾಸ್​ ಅಲ್ಟಿಮೇಟ್​ 1’ ಶೋನಲ್ಲೂ ಅವರು ಸ್ಪರ್ಧಿಸಿದ್ದರು. ಆದರೆ ಈಗ ಅವರು ಕಮಲ್​ ಹಾಸನ್​ ವಿರುದ್ಧವೇ ಮಾತನಾಡಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ವನಿತಾ ವಿಜಯ್​ಕುಮಾರ್​ ಅವರು ‘ಬಿಗ್​ ಬಾಸ್​ ತಮಿಳು 6’ ಕಾರ್ಯಕ್ರಮವನ್ನು ಫಾಲೋ ಮಾಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯನ್ನು ನೋಡಿದ ಬಳಿಕ ಅವರಿಗೆ ಪಕ್ಷಪಾತದ ಅನುಮಾನ ಮೂಡಿದೆ. ‘ರಾಬರ್ಟ್​ ಮತ್ತು ರಚಿತಾ ನಡುವಿನ ವಿಚಾರಗಳ ಬಗ್ಗೆ ಕಮಲ್​ ಹಾಸನ್​ ಯಾಕೆ ಮಾತನಾಡುತ್ತಿಲ್ಲ? ರಾಬರ್ಟ್​ ಅವರು ಗಂಭೀರ ವಿಷಯಗಳನ್ನು ಕಾಮಿಡಿಯಾಗಿ ಹೇಳುತ್ತಿದ್ದಾರೆ. ರಚಿತಾ ಪರವಾಗಿ ಪಕ್ಷಪಾತ ಮಾಡಲಾಗುತ್ತಿದೆ ಅಂತ ನನಗೆ ಅನಿಸುತ್ತದೆ. ಕಮಲ್​ ಹಾಸನ್​ ಅವರು ಆಕೆಯ ಅಭಿಮಾನಿ ಆಗಿರಬಹುದು. ಆದರೆ ಆ ವಿಷಯ ಬೇರೆ’ ಎಂದು ವನಿತಾ ವಿಜಯ್​ಕುಮಾರ್​ ಹೇಳಿದ್ದಾರೆ.

‘ಅಜೀಮ್​ಗೆ ಅವರದ್ದೇ ಆದ ತಂತ್ರಗಾರಿಕೆ ಇದೆ. ಆದರೆ ಈಗ ಅವರು ಕಮಲ್​ ಹಾಸನ್​ ವಿರುದ್ಧವೇ ನಡೆದುಕೊಳ್ಳುತ್ತಿದ್ದಾರೆ. ಅದರಿಂದ ಅವರಿಗೆ ಒಳ್ಳೆಯದೇ ಆಗಬಹುದು. ಆದರೆ ಜನರ ತೀರ್ಮಾನವನ್ನು ಮೊದಲೇ ಊಹಿಸೋಕೆ ಆಗಲ್ಲ’ ಎಂದು ಕೂಡ ವನಿತಾ ವಿಜಯ್​ಕುಮಾರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:58 pm, Wed, 23 November 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ