AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kamal Haasan: ‘ಮಹಿಳಾ ಸ್ಪರ್ಧಿ ಪರ ಬಿಗ್​ ಬಾಸ್​ ನಿರೂಪಕ ಕಮಲ್​ ಹಾಸನ್​ ಪಕ್ಷಪಾತ’: ವನಿತಾ ಆರೋಪ

Vanitha Vijayakumar | Bigg Boss Tamil 6: ವನಿತಾ ವಿಜಯ್​ಕುಮಾರ್​ ಅವರು ‘ಬಿಗ್​ ಬಾಸ್​ ತಮಿಳು 6’ ಕಾರ್ಯಕ್ರಮವನ್ನು ಫಾಲೋ ಮಾಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯನ್ನು ನೋಡಿದ ಬಳಿಕ ಅವರಿಗೆ ಪಕ್ಷಪಾತದ ಅನುಮಾನ ಮೂಡಿದೆ.

Kamal Haasan: ‘ಮಹಿಳಾ ಸ್ಪರ್ಧಿ ಪರ ಬಿಗ್​ ಬಾಸ್​ ನಿರೂಪಕ ಕಮಲ್​ ಹಾಸನ್​ ಪಕ್ಷಪಾತ’: ವನಿತಾ ಆರೋಪ
ಕಮಲ್​ ಹಾಸನ್​, ವನಿತಾ ವಿಜಯ್​ಕುಮಾರ್​
Follow us
TV9 Web
| Updated By: ಮದನ್​ ಕುಮಾರ್​

Updated on:Nov 23, 2022 | 12:58 PM

ಕನ್ನಡ, ಹಿಂದಿ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲೂ ಬಿಗ್​ ಬಾಸ್​ ಕಾರ್ಯಕ್ರಮ ಫೇಮಸ್​ ಆಗಿದೆ. ತಮಿಳಿನಲ್ಲಿ (Bigg Boss Tamil 6) ಕಮಲ್​ ಹಾಸನ್​ ಅವರು ಈ ಶೋ ನಡೆಸಿಕೊಡುತ್ತಿದ್ದಾರೆ. ಅವರ ನಿರೂಪಣೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದರೆ ಅವರ ಮೇಲೆ ಈಗೊಂದು ಆರೋಪ ಕೇಳಿಬಂದಿದೆ. ಮಹಿಳಾ ಸ್ಪರ್ಧಿಯೊಬ್ಬರ ಪರವಾಗಿ ಕಮಲ್​ ಹಾಸನ್​ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಮಾಜಿ ಸ್ಪರ್ಧಿ ವನಿತಾ ವಿಜಯ್​ಕುಮಾರ್​ (Vanitha Vijayakumar) ಆರೋಪ ಮಾಡಿದ್ದಾರೆ. ಈ ಕುರಿತು ಹೊಸ ಚರ್ಚೆ ಶುರುವಾಗಿದೆ. ವನಿತಾ ಮಾಡಿರುವ ಈ ಆರೋಪದಿಂದ ಕಮಲ್​ ಹಾಸನ್​ (Kamal Haasan) ಅಭಿಮಾನಿಗಳು ಗರಂ ಆಗಿದ್ದಾರೆ.

ತಮಿಳು ಬಿಗ್​ ಬಾಸ್​ ಕಾರ್ಯಕ್ರಮ ಈವರೆಗೆ 5 ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈಗ 6ನೇ ಸೀಸನ್​ ನಡೆಯುತ್ತಿದೆ. ಕಮಲ್​ ಹಾಸನ್​ ಅವರು ಈ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಮನೆಯ ವಿನ್ಯಾಸವನ್ನು ಬದಲಾಯಿಸಲಾಗಿದೆ. ಕೋರ್ಟ್​ ರೀತಿಯಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಅದಕ್ಕೆ ಅನುಗುಣವಾಗಿ ಟಾಸ್ಕ್​ ನೀಡಲಾಗಿದೆ. ಈ ಶೋನಲ್ಲಿ ಕಮಲ್​ ಹಾಸನ್​ ಅವರು ನಟಿ ರಚಿತಾ ಮಹಾಲಕ್ಷ್ಮಿ ಪರವಾಗಿ ಪಕ್ಷಪಾತ ಮಾಡಿದ್ದಾರೆ ಎಂದು ವನಿತಾ ವಿಜಯ್​ಕುಮಾರ್​ ಹೇಳಿದ್ದಾರೆ.

‘ಬಿಗ್​ ಬಾಸ್​ ತಮಿಳು 3’ರಲ್ಲಿ ವನಿತಾ ವಿಜಯ್​ಕುಮಾರ್ ಅವರು ಸ್ಪರ್ಧಿಸಿದ್ದರು. ‘ಬಿಗ್​ ಬಾಸ್​ ತಮಿಳು 4’ರಲ್ಲಿ ಅತಿಥಿಯಾಗಿ ಆಗಮಿಸಿದ್ದರು. ಒಟಿಟಿ ಆವೃತ್ತಿಯಾದ ‘ಬಿಗ್​ ಬಾಸ್​ ಅಲ್ಟಿಮೇಟ್​ 1’ ಶೋನಲ್ಲೂ ಅವರು ಸ್ಪರ್ಧಿಸಿದ್ದರು. ಆದರೆ ಈಗ ಅವರು ಕಮಲ್​ ಹಾಸನ್​ ವಿರುದ್ಧವೇ ಮಾತನಾಡಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ವನಿತಾ ವಿಜಯ್​ಕುಮಾರ್​ ಅವರು ‘ಬಿಗ್​ ಬಾಸ್​ ತಮಿಳು 6’ ಕಾರ್ಯಕ್ರಮವನ್ನು ಫಾಲೋ ಮಾಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯನ್ನು ನೋಡಿದ ಬಳಿಕ ಅವರಿಗೆ ಪಕ್ಷಪಾತದ ಅನುಮಾನ ಮೂಡಿದೆ. ‘ರಾಬರ್ಟ್​ ಮತ್ತು ರಚಿತಾ ನಡುವಿನ ವಿಚಾರಗಳ ಬಗ್ಗೆ ಕಮಲ್​ ಹಾಸನ್​ ಯಾಕೆ ಮಾತನಾಡುತ್ತಿಲ್ಲ? ರಾಬರ್ಟ್​ ಅವರು ಗಂಭೀರ ವಿಷಯಗಳನ್ನು ಕಾಮಿಡಿಯಾಗಿ ಹೇಳುತ್ತಿದ್ದಾರೆ. ರಚಿತಾ ಪರವಾಗಿ ಪಕ್ಷಪಾತ ಮಾಡಲಾಗುತ್ತಿದೆ ಅಂತ ನನಗೆ ಅನಿಸುತ್ತದೆ. ಕಮಲ್​ ಹಾಸನ್​ ಅವರು ಆಕೆಯ ಅಭಿಮಾನಿ ಆಗಿರಬಹುದು. ಆದರೆ ಆ ವಿಷಯ ಬೇರೆ’ ಎಂದು ವನಿತಾ ವಿಜಯ್​ಕುಮಾರ್​ ಹೇಳಿದ್ದಾರೆ.

‘ಅಜೀಮ್​ಗೆ ಅವರದ್ದೇ ಆದ ತಂತ್ರಗಾರಿಕೆ ಇದೆ. ಆದರೆ ಈಗ ಅವರು ಕಮಲ್​ ಹಾಸನ್​ ವಿರುದ್ಧವೇ ನಡೆದುಕೊಳ್ಳುತ್ತಿದ್ದಾರೆ. ಅದರಿಂದ ಅವರಿಗೆ ಒಳ್ಳೆಯದೇ ಆಗಬಹುದು. ಆದರೆ ಜನರ ತೀರ್ಮಾನವನ್ನು ಮೊದಲೇ ಊಹಿಸೋಕೆ ಆಗಲ್ಲ’ ಎಂದು ಕೂಡ ವನಿತಾ ವಿಜಯ್​ಕುಮಾರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:58 pm, Wed, 23 November 22

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು