AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

ಫೋಟೋ ಹಿಂದಿನ ಅಸಲಿ ವಿಚಾರ ಗೊತ್ತಾಗುವುದಕ್ಕೂ ಮುನ್ನವೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವುದು ಈ ಫೋಟೋದಲ್ಲಿ ಹೈಲೈಟ್​ ಆಗಿದೆ.

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​
ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​
TV9 Web
| Edited By: |

Updated on: Jul 23, 2021 | 9:05 AM

Share

ಸೆಲೆಬ್ರಿಟಿಗಳ ಜೀವನದಲ್ಲಿ ಮದುವೆ ಮತ್ತು ವಿಚ್ಛೇದನ ದೊಡ್ಡ ವಿಚಾರವೇ ಅಲ್ಲ ಎಂಬಂತಾಗಿ ಬಿಟ್ಟಿದೆ. ಈ ಕಾರಣದಿಂದಲೇ ನಟಿ, ತಮಿಳು ಬಿಗ್​ ಬಾಸ್ (Bigg Boss) ಸೀಸನ್​ 3ರ ಸ್ಪರ್ಧಿ ವನಿತಾ ವಿಜಯ್​ಕುಮಾರ್​ (Vanitha Vijayakumar) ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗಾಗಲೂ ಮೂರು ಸಲ ಮದುವೆ ಮಾಡಿಕೊಂಡಿರುವ ಅವರು ಮತ್ತೊಂದು ಮದುವೆ (Marriage) ಆಗಿದ್ದಾರಾ ಎಂಬ ಅನುಮಾನ ಮೂಡುವಂತಾಗಿದೆ. ಅಂಥ ಅನುಮಾನಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ಹಾಗಂತ ಈ ಫೋಟೋ ಎಲ್ಲೋ ಲೀಕ್ ಆಗಿರುವುದಲ್ಲ. ಸ್ವತಃ ವನಿತಾ ವಿಜಯ್​ಕುಮಾರ್​ ಅವರೇ ಈ ಫೋಟೋ ಹಂಚಿಕೊಂಡಿದ್ದಾರೆ.

ಈ ಫೋಟೋ ಹಿಂದಿನ ಅಸಲಿ ವಿಚಾರ ಗೊತ್ತಾಗುವುದಕ್ಕೂ ಮುನ್ನವೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವುದು ಈ ಫೋಟೋದಲ್ಲಿ ಹೈಲೈಟ್​ ಆಗಿದೆ. ಇದು ಅವರು ನಟಿಸಿರುವ ಹೊಸ ಸಿನಿಮಾದ ಫೋಟೋ ಎಂಬುದು ನಂತರದಲ್ಲಿ ಗೊತ್ತಾಗಿದೆ.

ವನಿತಾ 4ನೇ ಮದುವೆ ಆಗುತ್ತಾರೆ ಎಂಬ ಬಗ್ಗೆ ಇತ್ತೀಚೆಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದರು. ಗಂಡನ ಹೆಸರು ಎಸ್​ ಅಕ್ಷರದಿಂದ ಆರಂಭವಾಗಲಿದೆ ಎಂದು ಹೇಳಿದ್ದರು. ಹಾಗಾಗಿ ನಟ ಶ್ರೀನಿವಾಸನ್​ ಜೊತೆ ವನಿತಾ ಮದುವೆ ವೇಷದಲ್ಲಿ ಕಾಣಿಸಿಕೊಂಡ ತಕ್ಷಣ ಫ್ಯಾನ್ಸ್​ಗೆ ಅಚ್ಚರಿ ಆಗಿದೆ. ಅಲ್ಲದೆ, ಈ ಫೋಟೋ ಜೊತೆ ವನಿತಾ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ಕಾರಣ ಹಲವು ಊಹಾಪೋಹಗಳು ಹುಟ್ಟಿಕೊಂಡಿವೆ.

ಬಹುಕಾಲದ ಗೆಳೆಯ ಪೀಟರ್​ ಪೌಲ್​ ಜೊತೆ 2020ರ ಜೂನ್​ನಲ್ಲಿ ವನಿತಾ ಮದುವೆ ಮಾಡಿಕೊಂಡಿದ್ದರು. ಅದು ಅವರ ಮೂರನೇ ಮದುವೆ ಆಗಿತ್ತು. ಆದರೆ ಪೀಟರ್​ ವಿಪರೀತ ಮದ್ಯವ್ಯಸನಿ ಎಂಬ ಕಾರಣಕ್ಕೆ ವನಿತಾ ಈ ಮದುವೆ ಮುರಿದುಕೊಂಡರು.

ಪ್ರಸ್ತುತ ‘ಬಿಗ್​ ಬಾಸ್​ ಜೋಡಿಗಳ್​’ ರಿಯಾಲಿಟಿ ಶೋನಲ್ಲಿ ವನಿತಾ ವಿಜಯ್​ಕುಮಾರ್​ ಭಾಗವಹಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ಹಿರಿಯ ನಟಿ ರಮ್ಯಾ ಕೃಷ್ಣ ಜಡ್ಜ್​ ಆಗಿದ್ದಾರೆ. ಇತ್ತೀಚೆಗೆ ವನಿತಾ ಮಾಡಿದ ಪರ್ಫಾರ್ಮೆನ್ಸ್​ ರಮ್ಯಾ ಕೃಷ್ಣಗೆ ಇಷ್ಟ ಆಗಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.

ಇದನ್ನೂ ಓದಿ:

Priyamani: ‘ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ ಮದುವೆ ಅಸಿಂಧು’; ಮುಸ್ತಫಾ ರಾಜ್ ಮೊದಲ ಪತ್ನಿ ಆರೋಪ

‘ಮುಂದಿನ ವರ್ಷ ಮದುವೆ, ನನ್ನದು ಅರೇಂಜ್​ ಮ್ಯಾರೇಜ್’​; ವಿವಾಹದ ಬಗ್ಗೆ ಮತ್ತೊಮ್ಮೆ ಮೌನ ಮುರಿದ ವೈಷ್ಣವಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ