AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

ಫೋಟೋ ಹಿಂದಿನ ಅಸಲಿ ವಿಚಾರ ಗೊತ್ತಾಗುವುದಕ್ಕೂ ಮುನ್ನವೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವುದು ಈ ಫೋಟೋದಲ್ಲಿ ಹೈಲೈಟ್​ ಆಗಿದೆ.

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​
ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​
TV9 Web
| Edited By: |

Updated on: Jul 23, 2021 | 9:05 AM

Share

ಸೆಲೆಬ್ರಿಟಿಗಳ ಜೀವನದಲ್ಲಿ ಮದುವೆ ಮತ್ತು ವಿಚ್ಛೇದನ ದೊಡ್ಡ ವಿಚಾರವೇ ಅಲ್ಲ ಎಂಬಂತಾಗಿ ಬಿಟ್ಟಿದೆ. ಈ ಕಾರಣದಿಂದಲೇ ನಟಿ, ತಮಿಳು ಬಿಗ್​ ಬಾಸ್ (Bigg Boss) ಸೀಸನ್​ 3ರ ಸ್ಪರ್ಧಿ ವನಿತಾ ವಿಜಯ್​ಕುಮಾರ್​ (Vanitha Vijayakumar) ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗಾಗಲೂ ಮೂರು ಸಲ ಮದುವೆ ಮಾಡಿಕೊಂಡಿರುವ ಅವರು ಮತ್ತೊಂದು ಮದುವೆ (Marriage) ಆಗಿದ್ದಾರಾ ಎಂಬ ಅನುಮಾನ ಮೂಡುವಂತಾಗಿದೆ. ಅಂಥ ಅನುಮಾನಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ಹಾಗಂತ ಈ ಫೋಟೋ ಎಲ್ಲೋ ಲೀಕ್ ಆಗಿರುವುದಲ್ಲ. ಸ್ವತಃ ವನಿತಾ ವಿಜಯ್​ಕುಮಾರ್​ ಅವರೇ ಈ ಫೋಟೋ ಹಂಚಿಕೊಂಡಿದ್ದಾರೆ.

ಈ ಫೋಟೋ ಹಿಂದಿನ ಅಸಲಿ ವಿಚಾರ ಗೊತ್ತಾಗುವುದಕ್ಕೂ ಮುನ್ನವೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವುದು ಈ ಫೋಟೋದಲ್ಲಿ ಹೈಲೈಟ್​ ಆಗಿದೆ. ಇದು ಅವರು ನಟಿಸಿರುವ ಹೊಸ ಸಿನಿಮಾದ ಫೋಟೋ ಎಂಬುದು ನಂತರದಲ್ಲಿ ಗೊತ್ತಾಗಿದೆ.

ವನಿತಾ 4ನೇ ಮದುವೆ ಆಗುತ್ತಾರೆ ಎಂಬ ಬಗ್ಗೆ ಇತ್ತೀಚೆಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದರು. ಗಂಡನ ಹೆಸರು ಎಸ್​ ಅಕ್ಷರದಿಂದ ಆರಂಭವಾಗಲಿದೆ ಎಂದು ಹೇಳಿದ್ದರು. ಹಾಗಾಗಿ ನಟ ಶ್ರೀನಿವಾಸನ್​ ಜೊತೆ ವನಿತಾ ಮದುವೆ ವೇಷದಲ್ಲಿ ಕಾಣಿಸಿಕೊಂಡ ತಕ್ಷಣ ಫ್ಯಾನ್ಸ್​ಗೆ ಅಚ್ಚರಿ ಆಗಿದೆ. ಅಲ್ಲದೆ, ಈ ಫೋಟೋ ಜೊತೆ ವನಿತಾ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ಕಾರಣ ಹಲವು ಊಹಾಪೋಹಗಳು ಹುಟ್ಟಿಕೊಂಡಿವೆ.

ಬಹುಕಾಲದ ಗೆಳೆಯ ಪೀಟರ್​ ಪೌಲ್​ ಜೊತೆ 2020ರ ಜೂನ್​ನಲ್ಲಿ ವನಿತಾ ಮದುವೆ ಮಾಡಿಕೊಂಡಿದ್ದರು. ಅದು ಅವರ ಮೂರನೇ ಮದುವೆ ಆಗಿತ್ತು. ಆದರೆ ಪೀಟರ್​ ವಿಪರೀತ ಮದ್ಯವ್ಯಸನಿ ಎಂಬ ಕಾರಣಕ್ಕೆ ವನಿತಾ ಈ ಮದುವೆ ಮುರಿದುಕೊಂಡರು.

ಪ್ರಸ್ತುತ ‘ಬಿಗ್​ ಬಾಸ್​ ಜೋಡಿಗಳ್​’ ರಿಯಾಲಿಟಿ ಶೋನಲ್ಲಿ ವನಿತಾ ವಿಜಯ್​ಕುಮಾರ್​ ಭಾಗವಹಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ಹಿರಿಯ ನಟಿ ರಮ್ಯಾ ಕೃಷ್ಣ ಜಡ್ಜ್​ ಆಗಿದ್ದಾರೆ. ಇತ್ತೀಚೆಗೆ ವನಿತಾ ಮಾಡಿದ ಪರ್ಫಾರ್ಮೆನ್ಸ್​ ರಮ್ಯಾ ಕೃಷ್ಣಗೆ ಇಷ್ಟ ಆಗಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.

ಇದನ್ನೂ ಓದಿ:

Priyamani: ‘ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ ಮದುವೆ ಅಸಿಂಧು’; ಮುಸ್ತಫಾ ರಾಜ್ ಮೊದಲ ಪತ್ನಿ ಆರೋಪ

‘ಮುಂದಿನ ವರ್ಷ ಮದುವೆ, ನನ್ನದು ಅರೇಂಜ್​ ಮ್ಯಾರೇಜ್’​; ವಿವಾಹದ ಬಗ್ಗೆ ಮತ್ತೊಮ್ಮೆ ಮೌನ ಮುರಿದ ವೈಷ್ಣವಿ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!