AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

ಫೋಟೋ ಹಿಂದಿನ ಅಸಲಿ ವಿಚಾರ ಗೊತ್ತಾಗುವುದಕ್ಕೂ ಮುನ್ನವೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವುದು ಈ ಫೋಟೋದಲ್ಲಿ ಹೈಲೈಟ್​ ಆಗಿದೆ.

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​
ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​
TV9 Web
| Edited By: |

Updated on: Jul 23, 2021 | 9:05 AM

Share

ಸೆಲೆಬ್ರಿಟಿಗಳ ಜೀವನದಲ್ಲಿ ಮದುವೆ ಮತ್ತು ವಿಚ್ಛೇದನ ದೊಡ್ಡ ವಿಚಾರವೇ ಅಲ್ಲ ಎಂಬಂತಾಗಿ ಬಿಟ್ಟಿದೆ. ಈ ಕಾರಣದಿಂದಲೇ ನಟಿ, ತಮಿಳು ಬಿಗ್​ ಬಾಸ್ (Bigg Boss) ಸೀಸನ್​ 3ರ ಸ್ಪರ್ಧಿ ವನಿತಾ ವಿಜಯ್​ಕುಮಾರ್​ (Vanitha Vijayakumar) ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗಾಗಲೂ ಮೂರು ಸಲ ಮದುವೆ ಮಾಡಿಕೊಂಡಿರುವ ಅವರು ಮತ್ತೊಂದು ಮದುವೆ (Marriage) ಆಗಿದ್ದಾರಾ ಎಂಬ ಅನುಮಾನ ಮೂಡುವಂತಾಗಿದೆ. ಅಂಥ ಅನುಮಾನಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ಹಾಗಂತ ಈ ಫೋಟೋ ಎಲ್ಲೋ ಲೀಕ್ ಆಗಿರುವುದಲ್ಲ. ಸ್ವತಃ ವನಿತಾ ವಿಜಯ್​ಕುಮಾರ್​ ಅವರೇ ಈ ಫೋಟೋ ಹಂಚಿಕೊಂಡಿದ್ದಾರೆ.

ಈ ಫೋಟೋ ಹಿಂದಿನ ಅಸಲಿ ವಿಚಾರ ಗೊತ್ತಾಗುವುದಕ್ಕೂ ಮುನ್ನವೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವುದು ಈ ಫೋಟೋದಲ್ಲಿ ಹೈಲೈಟ್​ ಆಗಿದೆ. ಇದು ಅವರು ನಟಿಸಿರುವ ಹೊಸ ಸಿನಿಮಾದ ಫೋಟೋ ಎಂಬುದು ನಂತರದಲ್ಲಿ ಗೊತ್ತಾಗಿದೆ.

ವನಿತಾ 4ನೇ ಮದುವೆ ಆಗುತ್ತಾರೆ ಎಂಬ ಬಗ್ಗೆ ಇತ್ತೀಚೆಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದರು. ಗಂಡನ ಹೆಸರು ಎಸ್​ ಅಕ್ಷರದಿಂದ ಆರಂಭವಾಗಲಿದೆ ಎಂದು ಹೇಳಿದ್ದರು. ಹಾಗಾಗಿ ನಟ ಶ್ರೀನಿವಾಸನ್​ ಜೊತೆ ವನಿತಾ ಮದುವೆ ವೇಷದಲ್ಲಿ ಕಾಣಿಸಿಕೊಂಡ ತಕ್ಷಣ ಫ್ಯಾನ್ಸ್​ಗೆ ಅಚ್ಚರಿ ಆಗಿದೆ. ಅಲ್ಲದೆ, ಈ ಫೋಟೋ ಜೊತೆ ವನಿತಾ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ಕಾರಣ ಹಲವು ಊಹಾಪೋಹಗಳು ಹುಟ್ಟಿಕೊಂಡಿವೆ.

ಬಹುಕಾಲದ ಗೆಳೆಯ ಪೀಟರ್​ ಪೌಲ್​ ಜೊತೆ 2020ರ ಜೂನ್​ನಲ್ಲಿ ವನಿತಾ ಮದುವೆ ಮಾಡಿಕೊಂಡಿದ್ದರು. ಅದು ಅವರ ಮೂರನೇ ಮದುವೆ ಆಗಿತ್ತು. ಆದರೆ ಪೀಟರ್​ ವಿಪರೀತ ಮದ್ಯವ್ಯಸನಿ ಎಂಬ ಕಾರಣಕ್ಕೆ ವನಿತಾ ಈ ಮದುವೆ ಮುರಿದುಕೊಂಡರು.

ಪ್ರಸ್ತುತ ‘ಬಿಗ್​ ಬಾಸ್​ ಜೋಡಿಗಳ್​’ ರಿಯಾಲಿಟಿ ಶೋನಲ್ಲಿ ವನಿತಾ ವಿಜಯ್​ಕುಮಾರ್​ ಭಾಗವಹಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ಹಿರಿಯ ನಟಿ ರಮ್ಯಾ ಕೃಷ್ಣ ಜಡ್ಜ್​ ಆಗಿದ್ದಾರೆ. ಇತ್ತೀಚೆಗೆ ವನಿತಾ ಮಾಡಿದ ಪರ್ಫಾರ್ಮೆನ್ಸ್​ ರಮ್ಯಾ ಕೃಷ್ಣಗೆ ಇಷ್ಟ ಆಗಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.

ಇದನ್ನೂ ಓದಿ:

Priyamani: ‘ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ ಮದುವೆ ಅಸಿಂಧು’; ಮುಸ್ತಫಾ ರಾಜ್ ಮೊದಲ ಪತ್ನಿ ಆರೋಪ

‘ಮುಂದಿನ ವರ್ಷ ಮದುವೆ, ನನ್ನದು ಅರೇಂಜ್​ ಮ್ಯಾರೇಜ್’​; ವಿವಾಹದ ಬಗ್ಗೆ ಮತ್ತೊಮ್ಮೆ ಮೌನ ಮುರಿದ ವೈಷ್ಣವಿ

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!