ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

ಫೋಟೋ ಹಿಂದಿನ ಅಸಲಿ ವಿಚಾರ ಗೊತ್ತಾಗುವುದಕ್ಕೂ ಮುನ್ನವೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವುದು ಈ ಫೋಟೋದಲ್ಲಿ ಹೈಲೈಟ್​ ಆಗಿದೆ.

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​
ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​
Follow us
| Updated By: ಮದನ್​ ಕುಮಾರ್​

Updated on: Jul 23, 2021 | 9:05 AM

ಸೆಲೆಬ್ರಿಟಿಗಳ ಜೀವನದಲ್ಲಿ ಮದುವೆ ಮತ್ತು ವಿಚ್ಛೇದನ ದೊಡ್ಡ ವಿಚಾರವೇ ಅಲ್ಲ ಎಂಬಂತಾಗಿ ಬಿಟ್ಟಿದೆ. ಈ ಕಾರಣದಿಂದಲೇ ನಟಿ, ತಮಿಳು ಬಿಗ್​ ಬಾಸ್ (Bigg Boss) ಸೀಸನ್​ 3ರ ಸ್ಪರ್ಧಿ ವನಿತಾ ವಿಜಯ್​ಕುಮಾರ್​ (Vanitha Vijayakumar) ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗಾಗಲೂ ಮೂರು ಸಲ ಮದುವೆ ಮಾಡಿಕೊಂಡಿರುವ ಅವರು ಮತ್ತೊಂದು ಮದುವೆ (Marriage) ಆಗಿದ್ದಾರಾ ಎಂಬ ಅನುಮಾನ ಮೂಡುವಂತಾಗಿದೆ. ಅಂಥ ಅನುಮಾನಕ್ಕೆ ಕಾರಣ ಆಗಿರುವುದು ಒಂದೇ ಒಂದು ಫೋಟೋ. ಹಾಗಂತ ಈ ಫೋಟೋ ಎಲ್ಲೋ ಲೀಕ್ ಆಗಿರುವುದಲ್ಲ. ಸ್ವತಃ ವನಿತಾ ವಿಜಯ್​ಕುಮಾರ್​ ಅವರೇ ಈ ಫೋಟೋ ಹಂಚಿಕೊಂಡಿದ್ದಾರೆ.

ಈ ಫೋಟೋ ಹಿಂದಿನ ಅಸಲಿ ವಿಚಾರ ಗೊತ್ತಾಗುವುದಕ್ಕೂ ಮುನ್ನವೇ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಾಸ್ಯ ನಟ ಶ್ರೀನಿವಾಸನ್​ ಜೊತೆ ವನಿತಾ ಹಾರ ಬದಲಾಯಿಸಿಕೊಳ್ಳುತ್ತಿರುವುದು ಈ ಫೋಟೋದಲ್ಲಿ ಹೈಲೈಟ್​ ಆಗಿದೆ. ಇದು ಅವರು ನಟಿಸಿರುವ ಹೊಸ ಸಿನಿಮಾದ ಫೋಟೋ ಎಂಬುದು ನಂತರದಲ್ಲಿ ಗೊತ್ತಾಗಿದೆ.

ವನಿತಾ 4ನೇ ಮದುವೆ ಆಗುತ್ತಾರೆ ಎಂಬ ಬಗ್ಗೆ ಇತ್ತೀಚೆಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದರು. ಗಂಡನ ಹೆಸರು ಎಸ್​ ಅಕ್ಷರದಿಂದ ಆರಂಭವಾಗಲಿದೆ ಎಂದು ಹೇಳಿದ್ದರು. ಹಾಗಾಗಿ ನಟ ಶ್ರೀನಿವಾಸನ್​ ಜೊತೆ ವನಿತಾ ಮದುವೆ ವೇಷದಲ್ಲಿ ಕಾಣಿಸಿಕೊಂಡ ತಕ್ಷಣ ಫ್ಯಾನ್ಸ್​ಗೆ ಅಚ್ಚರಿ ಆಗಿದೆ. ಅಲ್ಲದೆ, ಈ ಫೋಟೋ ಜೊತೆ ವನಿತಾ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ಕಾರಣ ಹಲವು ಊಹಾಪೋಹಗಳು ಹುಟ್ಟಿಕೊಂಡಿವೆ.

ಬಹುಕಾಲದ ಗೆಳೆಯ ಪೀಟರ್​ ಪೌಲ್​ ಜೊತೆ 2020ರ ಜೂನ್​ನಲ್ಲಿ ವನಿತಾ ಮದುವೆ ಮಾಡಿಕೊಂಡಿದ್ದರು. ಅದು ಅವರ ಮೂರನೇ ಮದುವೆ ಆಗಿತ್ತು. ಆದರೆ ಪೀಟರ್​ ವಿಪರೀತ ಮದ್ಯವ್ಯಸನಿ ಎಂಬ ಕಾರಣಕ್ಕೆ ವನಿತಾ ಈ ಮದುವೆ ಮುರಿದುಕೊಂಡರು.

ಪ್ರಸ್ತುತ ‘ಬಿಗ್​ ಬಾಸ್​ ಜೋಡಿಗಳ್​’ ರಿಯಾಲಿಟಿ ಶೋನಲ್ಲಿ ವನಿತಾ ವಿಜಯ್​ಕುಮಾರ್​ ಭಾಗವಹಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ಹಿರಿಯ ನಟಿ ರಮ್ಯಾ ಕೃಷ್ಣ ಜಡ್ಜ್​ ಆಗಿದ್ದಾರೆ. ಇತ್ತೀಚೆಗೆ ವನಿತಾ ಮಾಡಿದ ಪರ್ಫಾರ್ಮೆನ್ಸ್​ ರಮ್ಯಾ ಕೃಷ್ಣಗೆ ಇಷ್ಟ ಆಗಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.

ಇದನ್ನೂ ಓದಿ:

Priyamani: ‘ಪ್ರಿಯಾಮಣಿ ಮತ್ತು ಮುಸ್ತಫಾ ರಾಜ್ ಮದುವೆ ಅಸಿಂಧು’; ಮುಸ್ತಫಾ ರಾಜ್ ಮೊದಲ ಪತ್ನಿ ಆರೋಪ

‘ಮುಂದಿನ ವರ್ಷ ಮದುವೆ, ನನ್ನದು ಅರೇಂಜ್​ ಮ್ಯಾರೇಜ್’​; ವಿವಾಹದ ಬಗ್ಗೆ ಮತ್ತೊಮ್ಮೆ ಮೌನ ಮುರಿದ ವೈಷ್ಣವಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ