AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ರೀತಿಯಲ್ಲಿ ಸೂಪರ್ ಆಗಿ​ ಡಾನ್ಸ್ ಮಾಡಿದ ವಂಶಿಕಾ; ‘ಪುಷ್ಪ ಪಾರ್ಟ್​ 10’ನಲ್ಲಿ ನೀನೇ ಇರ್ತೀಯಾ ಎಂದ ಸೃಜನ್

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ನನ್ನಮ್ಮ ಸೂಪರ್ ಸ್ಟಾರ್​’ ಶೋ ಪ್ರಸಾರ ಆಗುತ್ತಿದೆ. ಧಾರಾವಾಹಿ ಕಲಾವಿದರು ಹಾಗೂ ಅವರ ಮಕ್ಕಳು ಈ ಶೋನಲ್ಲಿ ಸ್ಪರ್ಧಿಯಾಗಿ ಪಾಲ್ಗೊಂಡಿದ್ದಾರೆ. ಮಾಸ್ಟರ್​ ಆನಂದ್ ಪತ್ನಿ ಯಶಸ್ವಿನಿ ಹಾಗೂ ಅವರ ಮಗಳು ವಂಶಿಕಾ ಕೂಡ ‘ನನ್ನಮ್ಮ ಸೂಪರ್​ ಸ್ಟಾರ್​’ ವೇದಿಕೆ ಏರಿದ್ದಾರೆ.

ರಶ್ಮಿಕಾ ರೀತಿಯಲ್ಲಿ ಸೂಪರ್ ಆಗಿ​ ಡಾನ್ಸ್ ಮಾಡಿದ ವಂಶಿಕಾ; ‘ಪುಷ್ಪ ಪಾರ್ಟ್​ 10’ನಲ್ಲಿ ನೀನೇ ಇರ್ತೀಯಾ ಎಂದ ಸೃಜನ್
ವಂಶಿಕಾ-ರಶ್ಮಿಕಾ
TV9 Web
| Edited By: |

Updated on: Mar 12, 2022 | 6:00 AM

Share

ಮಾಸ್ಟರ್ ಆನಂದ್ ಮಗಳು ವಂಶಿಕಾ (Vanshika) ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವಳು ಎಷ್ಟು ಚೂಟಿ ಎಂಬುದು ‘ನನ್ನಮ್ಮ ಸೂಪರ್​ ಸ್ಟಾರ್​’ (Nannamma Super Star) ಕಾರ್ಯಕ್ರಮ ನೋಡುವ ಎಲ್ಲರಿಗೂ ಗೊತ್ತಿರುತ್ತದೆ. ಅವಳು ಆಡುವ ಮಾತುಗಳು ವೀಕ್ಷಕರಿಗೆ ತುಂಬಾನೇ ಇಷ್ಟವಾಗುತ್ತದೆ. ವಂಶಿಕಾ ಮಾಡುವ ತರಲೆಗಳು ಒಂದೆರಡಲ್ಲ. ಹಾಗಂತ ಅವಳು ಫೇಮಸ್ ಆಗಿದ್ದು ತರಲೆ, ಚೂಟಿ ಮಾತುಗಳಿಂದ ಮಾತ್ರವಲ್ಲ. ಅವಳ ಬಳಿ ಸಖತ್​ ಟ್ಯಾಲೆಂಟ್​ ಇದೆ. ಈಗಾಗಲೇ ಅದನ್ನು ಪ್ರೇಕ್ಷಕರ ಮುಂದೆ ತೆರೆದಿಟ್ಟಿದ್ದಾಳೆ. ಈಗ ವಂಶಿಕಾ ಸಖತ್ ಆಗಿ ಡಾನ್ಸ್ ಮಾಡಿದ್ದಾಳೆ. ಈ ವಿಡಿಯೋ ನೋಡಿ ಅವಳ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ನನ್ನಮ್ಮ ಸೂಪರ್ ಸ್ಟಾರ್​’ ಶೋ ಪ್ರಸಾರ ಆಗುತ್ತಿದೆ. ಧಾರಾವಾಹಿ ಕಲಾವಿದರು ಹಾಗೂ ಅವರ ಮಕ್ಕಳು ಈ ಶೋನಲ್ಲಿ ಸ್ಪರ್ಧಿಯಾಗಿ ಪಾಲ್ಗೊಂಡಿದ್ದಾರೆ. ಮಾಸ್ಟರ್​ ಆನಂದ್ ಪತ್ನಿ ಯಶಸ್ವಿನಿ ಹಾಗೂ ಅವರ ಮಗಳು ವಂಶಿಕಾ ಕೂಡ ‘ನನ್ನಮ್ಮ ಸೂಪರ್​ ಸ್ಟಾರ್​’ ವೇದಿಕೆ ಏರಿದ್ದಾರೆ. ವಂಶಿಕಾ ಮಾಡುವ ತರಲೆ ಆಟಗಳನ್ನು ನೋಡಿ ಎಲ್ಲರೂ ಸಖತ್​ ಖುಷಿಪಟ್ಟಿದ್ದಾರೆ.

‘ಪುಷ್ಪ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದೆ. ಈ ಸಿನಿಮಾಗೆ ರಶ್ಮಿಕಾ ನಾಯಕಿ. ಅವರು ಮಾಡಿದ ಡ್ಯಾನ್ಸ್ ನೋಡಿ ಎಲ್ಲರೂ ಖುಷಿಪಟ್ಟಿದ್ದರು. ಇದೇ ರೀತಿಯ ಸ್ಟೆಪ್​ ಹಾಕೋಕೆ ವಂಶಿಕಾ ಕೂಡ ಪ್ರಯತ್ನಿಸಿ, ಗೆದ್ದಿದ್ದಾಳೆ. ಅವಳು ಮಾಡಿರುವ ಡಾನ್ಸ್ ಎಲ್ಲರಿಗೂ ಇಷ್ಟವಾಗಿದೆ. ಸೃಜನ್​ ಲೋಕೇಶ್​ ಕೂಡ ವಂಶಿಕಾಳನ್ನು ಹೊಗಳಿದ್ದಾರೆ. ‘ಪುಷ್ಪ ಪಾರ್ಟ್​ 10ಕ್ಕೆ ನೀನೇ ಹೀರೋಯಿನ್​’ ಎಂದಿದ್ದಾರೆ ಅವರು.

ವೇದಿಕೆ ಮೇಲೆ ಈ ರೀತಿಯ ಡಾನ್ಸ್​ ಮಾಡಬೇಕು ಎಂದರೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಎಷ್ಟೇ ಪ್ರಾಕ್ಟೀಸ್​ ಮಾಡಿದರೂ ವೇದಿಕೆ ಮೇಲೆ ಸರಿಯಾಗಿ ಅದನ್ನು ಪ್ರೆಸೆಂಟ್​ ಮಾಡುತ್ತೇವೆ ಎನ್ನುವ ಗ್ಯಾರಂಟಿ ಇಲ್ಲ. ಆದರೆ, ವಂಶಿಕಾ ಮಾತ್ರ ಒಂದೇ ಒಂದು ಸ್ಟೆಪ್​ ತಪ್ಪದೆ ಡಾನ್ಸ್​ ಮಾಡಿ ತೋರಿಸಿದ್ದಾಳೆ.

‘ನನ್ನಮ್ಮ ಸೂಪರ್​ ಸ್ಟಾರ್’ ಕಾರ್ಯಕ್ರಮ ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಪ್ರಸಾರವಾಗುತ್ತಿದೆ. ಸೃಜನ್​ ಲೋಕೇಶ್​, ತಾರಾ ಅನುರಾಧಾ ಹಾಗೂ ಅನು ಪ್ರಭಾಕರ್​ ಈ ಶೋಗೆ ಜಡ್ಜ್​ ಆಗಿದ್ದಾರೆ.

ಇದನ್ನೂ ಓದಿ: ‘ಮಗಳು ವಂಶಿಕಾಳಿಂದ ಜನರು ನನ್ನನ್ನು ಮತ್ತೆ ಪ್ರೀತಿಸುತ್ತಿದ್ದಾರೆ’; ಮಾಸ್ಟರ್​ ಆನಂದ್ ಭಾವುಕ ನುಡಿ

ಪಟಾಕಿ ಯಾರದ್ದೇ ಆಗಿರ್ಲಿ, ಹಚ್ಚೋದು ಮಾತ್ರ ಪುನೀತ್​ ರಾಜ್​ಕುಮಾರ್​: ವಂಶಿಕಾ ಸೂಪರ್​ ಮಾತು

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ