AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vanshika: ವಂಶಿಕಾ ಈಗ ನಿರೂಪಕಿ; ‘ನನ್ನಮ್ಮ ಸೂಪರ್​ ಸ್ಟಾರ್​ 2’ ಶೋ ನಡೆಸಿಕೊಡಲಿರುವ ಮಿನಿ ಪಟಾಕಿ

Nannamma Superstar 2: ವಂಶಿಕಾ ನಿರೂಪಕಿಯಾಗಿ ಆಯ್ಕೆ ಆಗಿರುವುದಕ್ಕೆ ಆಕೆಯ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಆದರೆ ಬೇರೆ ಮಕ್ಕಳಿಗೂ ಅವಕಾಶ ಕೊಡಿ ಎಂದು ಕೆಲವರು ಸಲಹೆ ನೀಡಿದ್ದಾರೆ.

Vanshika: ವಂಶಿಕಾ ಈಗ ನಿರೂಪಕಿ; ‘ನನ್ನಮ್ಮ ಸೂಪರ್​ ಸ್ಟಾರ್​ 2’ ಶೋ ನಡೆಸಿಕೊಡಲಿರುವ ಮಿನಿ ಪಟಾಕಿ
ವಂಶಿಕಾ
TV9 Web
| Edited By: |

Updated on: Sep 26, 2022 | 9:56 AM

Share

ಕನ್ನಡದ ಕಿರುತೆರೆಯಲ್ಲಿ ವಂಶಿಕಾ ಅಂಜನಿ ಕಶ್ಯಪ್​ (Vanshika Anjani Kashyapa) ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದಿದ್ದಾಳೆ. ಮಾಸ್ಟರ್​ ಆನಂದ್​ ಪುತ್ರಿ ಎಂಬ ಟ್ಯಾಗ್​ ಆಕೆಗೆ ಇತ್ತು. ಆದರೆ ಅದು​ ಬದಲಾಗುವ ರೀತಿಯಲ್ಲಿ ಅವಳು ಸ್ವಂತವಾಗಿ ಗುರುತಿಸಿಕೊಂಡಿದ್ದಾಳೆ. ಈಗ ವಂಶಿಕಾ ಎಂದರೆ ಹೊಸದಾಗಿ ಪರಿಚಯ ಮಾಡಿಕೊಡುವ ಅಗತ್ಯವಿಲ್ಲ. ‘ಕಲರ್ಸ್​ ಕನ್ನಡ’ ವಾಹಿನಿಯ ‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ ಆಕೆಗೆ ಭರಪೂರ ಜನಪ್ರಿಯತೆ ಸಿಕ್ಕಿತು. ಆ ಬಳಿಕ ‘ಗಿಚ್ಚಿ ಗಿಲಿಗಿಲಿ’ ಶೋನಲ್ಲೂ ವಂಶಿಕಾ ಧೂಳೆಬ್ಬಿಸಿದಳು. ಈ ಎರಡೂ ಶೋಗಳನ್ನು ವಿನ್​ ಆಗಿರುವ ಆಕೆಗೆ ಈಗ ನಿರೂಪಕಿಯಾಗಿ ಬಡ್ತಿ ಸಿಗುತ್ತಿದೆ! ಹೌದು, ‘ನನ್ನಮ್ಮ ಸೂಪರ್​ ಸ್ಟಾರ್​ 2’ (Nannamma Superstar 2) ನಿರೂಪಣೆ ಮಾಡಲು ವಂಶಿಕಾ ಸಜ್ಜಾಗುತ್ತಿದ್ದಾಳೆ. ಶೀಘ್ರದಲ್ಲೇ ಈ ಶೋ ಆರಂಭ ಆಗಲಿದೆ. ವಂಶಿಕಾಗೆ ನಿರಂಜನ್​ ದೇಶಪಾಂಡೆ (Niranjan Deshpande) ಸಾಥ್​ ನೀಡಲಿದ್ದಾರೆ.

‘ನನ್ನಮ್ಮ ಸೂಪರ್​ ಸ್ಟಾರ್​’ ಮೊದಲ ಸೀಸನ್​ ಅನ್ನು ನಟಿ ಅನುಪಮಾ ಗೌಡ ನಿರೂಪಣೆ ಮಾಡಿದ್ದರು. ಆದರೆ ಈಗ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ಸ್ಪರ್ಧಿಯಾಗಿದ್ದಾರೆ. ಅವರು ದೊಡ್ಮನೆಗೆ ಎಂಟ್ರಿ ನೀಡಿರುವುದರಿಂದ ‘ನನ್ನಮ್ಮ ಸೂಪರ್​ ಸ್ಟಾರ್ 2​’ ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ. ಅವರ ಸ್ಥಾನಕ್ಕೆ ವಂಶಿಕಾ ಮತ್ತು ನಿರಂಜನ್​ ದೇಶಪಾಂಡೆ ಬಂದಿದ್ದಾರೆ.

ಇದನ್ನೂ ಓದಿ
Image
ಕಿರುತೆರೆಯಿಂದ ಹಿರಿತೆರೆಗೆ ಮಾಸ್ಟರ್ ಆನಂದ್ ಮಗಳು ವಂಶಿಕಾ; ಮಾತಿನ ಮಲ್ಲಿಗೆ ಸಿನಿಮಾ ಆಫರ್
Image
‘ನನ್ನಮ್ಮ ಸೂಪರ್​ ಸ್ಟಾರ್​’ ವಿನ್ನರ್​ ವಂಶಿಕಾ-ಯಶಸ್ವಿನಿ; ಟ್ರೋಫಿ ಜೊತೆ ಸಿಕ್ಕಿರುವ ಬಹುಮಾನದ ಹಣ ಎಷ್ಟು?
Image
ರಶ್ಮಿಕಾ ರೀತಿಯಲ್ಲಿ ಸೂಪರ್ ಆಗಿ​ ಡಾನ್ಸ್ ಮಾಡಿದ ವಂಶಿಕಾ; ‘ಪುಷ್ಪ ಪಾರ್ಟ್​ 10’ನಲ್ಲಿ ನೀನೇ ಇರ್ತೀಯಾ ಎಂದ ಸೃಜನ್
Image
‘ಮಗಳು ವಂಶಿಕಾಳಿಂದ ಜನರು ನನ್ನನ್ನು ಮತ್ತೆ ಪ್ರೀತಿಸುತ್ತಿದ್ದಾರೆ’; ಮಾಸ್ಟರ್​ ಆನಂದ್ ಭಾವುಕ ನುಡಿ

ಎಲ್ಲರಿಗೂ ಗೊತ್ತಿರುವಂತೆ ವಂಶಿಕಾ ಮಾತಿನ ಮಲ್ಲಿ. ವೇದಿಕೆ ಮೇಲೆ ನಿಲ್ಲಿಸಿ ಮೈಕ್​ ಕೊಟ್ಟರೆ ಪಟಪಟ ಪಟಾಕಿ ರೀತಿ ಸಿಡಿಯುತ್ತವೆ ಅವಳ ಮಾತುಗಳು. ಇನ್ನು, ನಟನೆಯಲ್ಲೂ ಅವಳು ಪ್ರತಿಭಾವಂತೆ. ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ಆಕೆ ಮಾಡಿದ ಸ್ಕಿಟ್​ಗಳು ಎಲ್ಲರ ಗಮನ ಸೆಳೆದಿವೆ. ಈಗ ವಂಶಿಕಾಳ ನಿರೂಪಣೆಯನ್ನು ನೋಡುವ ಸಮಯ ಹತ್ತಿರ ಬಂದಿದೆ.

ವಂಶಿಕಾ ‘ನನ್ನಮ್ಮ ಸೂಪರ್​ ಸ್ಟಾರ್​ 2’ ನಿರೂಪಣೆ ಮಾಡುತ್ತಾಳೆ ಎಂಬುದನ್ನು ತಿಳಿಸಲು ಕಲರ್ಸ್ ಕನ್ನಡ ವಾಹಿನಿ ಒಂದು ಪ್ರೋಮೋ ರಿಲೀಸ್​ ಮಾಡಿದೆ. ಇದು ತುಂಬ ತಮಾಷೆಯಾಗಿ ಮೂಡಿಬಂದಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ವಂಶಿಕಾ ಆಯ್ಕೆ ಬಗ್ಗೆ ಅನೇಕರು ಕಮೆಂಟ್​ಗಳ ಮೂಲಕ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ವಂಶಿಕಾ ನಿರೂಪಣೆ ಮಾಡಲಿರುವುದರಿಂದ ಆಕೆಗೆ ಕಲರ್ಸ್​ ಕನ್ನಡ ವಾಹಿನಿಯ ಬ್ಯಾಕ್​ ಟು ಬ್ಯಾಕ್​ ಮೂರು ಶೋನಲ್ಲಿ ಚಾನ್ಸ್​ ಸಿಕ್ಕಂತೆ ಆಗುತ್ತದೆ. ಕರ್ನಾಟಕದಲ್ಲಿ ಬೇರೆ ಮಕ್ಕಳೂ ಕೂಡ ಇದ್ದಾರೆ. ಅವರಿಗೂ ಅವಕಾಶ ಕೊಡಿ ಎಂದು ಕೆಲವರು ಸಲಹೆ ನೀಡಿದ್ದಾರೆ. ವಂಶಿಕಾ ನಿರೂಪಕಿಯಾಗಿ ಆಯ್ಕೆ ಆಗಿರುವುದಕ್ಕೆ ಆಕೆಯ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ