AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆ ಆರಂಭದಲ್ಲೇ ವರ್ತೂರು ಸಂತೋಷ್​, ಡ್ರೋನ್​ ಪ್ರತಾಪ್​ ಮನೆಯವರ ಕಣ್ಣೀರು

ಡ್ರೋನ್​ ಪ್ರತಾಪ್​ ಹಾಗೂ ವರ್ತೂರು ಸಂತೋಷ್​ ಅವರ ಮನೆಯವರು ಬಿಗ್​ ಬಾಸ್​ ಫಿನಾಲೆ ಶೋ ನೋಡಲು ಬಂದಿದ್ದಾರೆ. ಈ ವೇಳೆ ಅವರು ಅಳುತ್ತಿರುವುದು ಕಂಡುಬಂದಿದೆ. ಹಾಗಾಗಿ ಮೊದಲು ಯಾರು ಎಲಿಮಿನೇಟ್​ ಆಗಿರಬಹುದು ಎಂಬ ಪ್ರಶ್ನೆ ಮೂಡಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಫಿನಾಲೆಯ ಸಂಚಿಕೆ ಭಾರಿ ಕೌತುಕ ಮೂಡಿಸಿದೆ.

ಬಿಗ್​ ಬಾಸ್​ ಫಿನಾಲೆ ಆರಂಭದಲ್ಲೇ ವರ್ತೂರು ಸಂತೋಷ್​, ಡ್ರೋನ್​ ಪ್ರತಾಪ್​ ಮನೆಯವರ ಕಣ್ಣೀರು
ಬಿಗ್​ ಬಾಸ್​ ಫಿನಾಲೆ
ಮದನ್​ ಕುಮಾರ್​
|

Updated on: Jan 27, 2024 | 5:46 PM

Share

110ಕ್ಕೂ ಹೆಚ್ಚು ದಿನಗಳ ಕಾಲ ವೀಕ್ಷಕರನ್ನು ರಂಜಿಸಿದ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮ ಈಗ ಫಿನಾಲೆ (BBK 10 Finale) ಹಂತಕ್ಕೆ ಬಂದಿದೆ. ಅದ್ದೂರಿ ಸೆಟ್​ನಲ್ಲಿ ಫಿನಾಲೆ ಶೂಟಿಂಗ್​ ನಡೆಯುತ್ತಿದೆ. ವರ್ತೂರು ಸಂತೋಷ್​ (Varthur Santhosh), ತುಕಾಲಿ ಸಂತೋಷ್​, ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್​ (Drone Prathap), ವಿನಯ್​ ಗೌಡ, ಕಾರ್ತಿಕ್​ ಮಹೇಶ್​ ಅವರು ಫಿನಾಲೆಯಲ್ಲಿ ಹಣಾಹಣಿ ನಡೆಸುತ್ತಿದ್ದಾರೆ. ಇವರ ಪೈಕಿ ಯಾರಿಗೆ ಬಿಗ್​ ಬಾಸ್​ ಟ್ರೋಫಿ ಸಿಗಲಿದೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ಶನಿವಾರ (ಜ.27) ಬೆಳಗ್ಗೆಯೇ ಫಿನಾಲೆ ಸಂಚಿಕೆಯ ಶೂಟಿಂಗ್​​ ಆರಂಭ ಆಗಿದೆ. ಶೂಟಿಂಗ್​ ಸೆಟ್​ನ ಕೆಲವು ಫೋಟೋಗಳು ಲಭ್ಯವಾಗಿವೆ.

ಡ್ರೋನ್​ ಪ್ರತಾಪ್​ ಅವರು ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಸ್ಪರ್ಧಿ ಆಗಿದ್ದಾರೆ. ಇಷ್ಟು ವರ್ಷಗಳ ಕಾಲ ತಂದೆ-ತಾಯಿಯಿಂದ ದೂರಾಗಿದ್ದ ಅವರು ಮತ್ತೆ ಕುಟುಂಬದವರ ಜೊತೆ ಸಂಪರ್ಕ ಬೆಳೆಸಿಕೊಳ್ಳಲು ಸಾಧ್ಯವಾಗಿದ್ದು ಇದೇ ಶೋ. ಆರಂಭದಲ್ಲಿ ಅಳುತ್ತಿದ್ದ ಅವರು ಈಗ ಫಿನಾಲೆಗೆ ಬಂದಿದ್ದಾರೆ. ಫಿನಾಲೆ ಸಂಚಿಕೆ ನೋಡಲು ಡ್ರೋನ್​ ಪ್ರತಾಪ್​ ಅವರ ತಾಯಿ ಸಹ ಆಗಮಿಸಿದ್ದಾರೆ. ಆದರೆ ಅವರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಗೆ ಬಂತು ಪ್ರತಾಪ್​ನ ಡ್ರೋನ್​; ಅಂದು ಚುಚ್ಚುಮಾತು, ಇಂದು ಮೆಚ್ಚುಗೆ ಮಾತು

ಅದೇ ರೀತಿ ವರ್ತೂರು ಸಂತೋಷ್​ ಕೂಡ ಬಿಗ್​ ಬಾಸ್​ ಆಟದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಗೆ ಅಪಾರ ಜನಬೆಂಬಲ ಸಿಕ್ಕಿದೆ. ಬಿಗ್​ ಬಾಸ್​ ಟ್ರೋಫಿ ಗೆದ್ದರೆ ಅದರಿಂದ ಬರುವ ಹಣವನ್ನು ಹಳ್ಳಿಕಾರ್​ ತಳಿಯ ಸಂರಕ್ಷಣೆಗೆ ಬಳಸುವುದಾಗಿ ಅವರು ಹೇಳಿದ್ದಾರೆ. ಬಿಗ್​ ಬಾಸ್​ ಫಿನಾಲೆ ಶೋ ನೋಡಲು ಬಂದ ಅವರ ತಾಯಿ ಕೂಡ ಅಳುತ್ತಿರುವುದು ಕಂಡುಬಂದಿದೆ. ಹಾಗಾಗಿ ಸಂಚಿಕೆಯ ಆರಂಭದಲ್ಲಿ ಯಾರು ಎಲಿಮಿನೇಟ್​ ಆಗಿರಬಹುದು ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಡ್ರೋನ್​ ಪ್ರತಾಪ್​ ಒಳ್ಳೆಯ ಹುಡುಗ’: ಕೊನೇ ಕ್ಷಣದಲ್ಲಿ ಒಪ್ಪಿಕೊಂಡ ವಿನಯ್​ ಗೌಡ

ಕಿಚ್ಚ ಸುದೀಪ್​ ಅವರು ಝಗಮಗಿಸುವ ವೇದಿಕೆಯಲ್ಲಿ ಫಿನಾಲೆ ಸಂಚಿಕೆ ನಡೆಸಿಕೊಡುತ್ತಿದ್ದಾರೆ. ಇದರ ಚಿತ್ರೀಕರಣ ಗ್ರ್ಯಾಂಡ್​ ಆಗಿ ನಡೆಯುತ್ತಿದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಇಂದು (ಜನವರಿ 27) ಹಾಗೂ ಭಾನುವಾರ (ಜನವರಿ 28) ಸಂಜೆ 7.30ಕ್ಕೆ ಫಿನಾಲೆ ಎಪಿಸೋಡ್​ ಪ್ರಸಾರ ಆಗಲಿದೆ. ಈಗಾಗಲೇ ಎಲಿಮಿನೇಟ್​ ಆದ ಸ್ಪರ್ಧಿಗಳ ಜೊತೆ ಹಲವು ಸೆಲೆಬ್ರಿಟಿಗಳು ವೇದಿಕೆಯಲ್ಲಿ ಮನರಂಜನೆ ನೀಡಲಿದ್ದಾರೆ. ಬಿಗ್​ ಬಾಸ್​ ವಿನ್ನರ್​ಗೆ 50 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ