ಬಿಗ್​ ಬಾಸ್​ ಫಿನಾಲೆ ಆರಂಭದಲ್ಲೇ ವರ್ತೂರು ಸಂತೋಷ್​, ಡ್ರೋನ್​ ಪ್ರತಾಪ್​ ಮನೆಯವರ ಕಣ್ಣೀರು

ಡ್ರೋನ್​ ಪ್ರತಾಪ್​ ಹಾಗೂ ವರ್ತೂರು ಸಂತೋಷ್​ ಅವರ ಮನೆಯವರು ಬಿಗ್​ ಬಾಸ್​ ಫಿನಾಲೆ ಶೋ ನೋಡಲು ಬಂದಿದ್ದಾರೆ. ಈ ವೇಳೆ ಅವರು ಅಳುತ್ತಿರುವುದು ಕಂಡುಬಂದಿದೆ. ಹಾಗಾಗಿ ಮೊದಲು ಯಾರು ಎಲಿಮಿನೇಟ್​ ಆಗಿರಬಹುದು ಎಂಬ ಪ್ರಶ್ನೆ ಮೂಡಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಫಿನಾಲೆಯ ಸಂಚಿಕೆ ಭಾರಿ ಕೌತುಕ ಮೂಡಿಸಿದೆ.

ಬಿಗ್​ ಬಾಸ್​ ಫಿನಾಲೆ ಆರಂಭದಲ್ಲೇ ವರ್ತೂರು ಸಂತೋಷ್​, ಡ್ರೋನ್​ ಪ್ರತಾಪ್​ ಮನೆಯವರ ಕಣ್ಣೀರು
ಬಿಗ್​ ಬಾಸ್​ ಫಿನಾಲೆ

Updated on: Jan 27, 2024 | 5:46 PM

110ಕ್ಕೂ ಹೆಚ್ಚು ದಿನಗಳ ಕಾಲ ವೀಕ್ಷಕರನ್ನು ರಂಜಿಸಿದ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮ ಈಗ ಫಿನಾಲೆ (BBK 10 Finale) ಹಂತಕ್ಕೆ ಬಂದಿದೆ. ಅದ್ದೂರಿ ಸೆಟ್​ನಲ್ಲಿ ಫಿನಾಲೆ ಶೂಟಿಂಗ್​ ನಡೆಯುತ್ತಿದೆ. ವರ್ತೂರು ಸಂತೋಷ್​ (Varthur Santhosh), ತುಕಾಲಿ ಸಂತೋಷ್​, ಸಂಗೀತಾ ಶೃಂಗೇರಿ, ಡ್ರೋನ್ ಪ್ರತಾಪ್​ (Drone Prathap), ವಿನಯ್​ ಗೌಡ, ಕಾರ್ತಿಕ್​ ಮಹೇಶ್​ ಅವರು ಫಿನಾಲೆಯಲ್ಲಿ ಹಣಾಹಣಿ ನಡೆಸುತ್ತಿದ್ದಾರೆ. ಇವರ ಪೈಕಿ ಯಾರಿಗೆ ಬಿಗ್​ ಬಾಸ್​ ಟ್ರೋಫಿ ಸಿಗಲಿದೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ಶನಿವಾರ (ಜ.27) ಬೆಳಗ್ಗೆಯೇ ಫಿನಾಲೆ ಸಂಚಿಕೆಯ ಶೂಟಿಂಗ್​​ ಆರಂಭ ಆಗಿದೆ. ಶೂಟಿಂಗ್​ ಸೆಟ್​ನ ಕೆಲವು ಫೋಟೋಗಳು ಲಭ್ಯವಾಗಿವೆ.

ಡ್ರೋನ್​ ಪ್ರತಾಪ್​ ಅವರು ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಸ್ಪರ್ಧಿ ಆಗಿದ್ದಾರೆ. ಇಷ್ಟು ವರ್ಷಗಳ ಕಾಲ ತಂದೆ-ತಾಯಿಯಿಂದ ದೂರಾಗಿದ್ದ ಅವರು ಮತ್ತೆ ಕುಟುಂಬದವರ ಜೊತೆ ಸಂಪರ್ಕ ಬೆಳೆಸಿಕೊಳ್ಳಲು ಸಾಧ್ಯವಾಗಿದ್ದು ಇದೇ ಶೋ. ಆರಂಭದಲ್ಲಿ ಅಳುತ್ತಿದ್ದ ಅವರು ಈಗ ಫಿನಾಲೆಗೆ ಬಂದಿದ್ದಾರೆ. ಫಿನಾಲೆ ಸಂಚಿಕೆ ನೋಡಲು ಡ್ರೋನ್​ ಪ್ರತಾಪ್​ ಅವರ ತಾಯಿ ಸಹ ಆಗಮಿಸಿದ್ದಾರೆ. ಆದರೆ ಅವರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಗೆ ಬಂತು ಪ್ರತಾಪ್​ನ ಡ್ರೋನ್​; ಅಂದು ಚುಚ್ಚುಮಾತು, ಇಂದು ಮೆಚ್ಚುಗೆ ಮಾತು

ಅದೇ ರೀತಿ ವರ್ತೂರು ಸಂತೋಷ್​ ಕೂಡ ಬಿಗ್​ ಬಾಸ್​ ಆಟದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಗೆ ಅಪಾರ ಜನಬೆಂಬಲ ಸಿಕ್ಕಿದೆ. ಬಿಗ್​ ಬಾಸ್​ ಟ್ರೋಫಿ ಗೆದ್ದರೆ ಅದರಿಂದ ಬರುವ ಹಣವನ್ನು ಹಳ್ಳಿಕಾರ್​ ತಳಿಯ ಸಂರಕ್ಷಣೆಗೆ ಬಳಸುವುದಾಗಿ ಅವರು ಹೇಳಿದ್ದಾರೆ. ಬಿಗ್​ ಬಾಸ್​ ಫಿನಾಲೆ ಶೋ ನೋಡಲು ಬಂದ ಅವರ ತಾಯಿ ಕೂಡ ಅಳುತ್ತಿರುವುದು ಕಂಡುಬಂದಿದೆ. ಹಾಗಾಗಿ ಸಂಚಿಕೆಯ ಆರಂಭದಲ್ಲಿ ಯಾರು ಎಲಿಮಿನೇಟ್​ ಆಗಿರಬಹುದು ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಡ್ರೋನ್​ ಪ್ರತಾಪ್​ ಒಳ್ಳೆಯ ಹುಡುಗ’: ಕೊನೇ ಕ್ಷಣದಲ್ಲಿ ಒಪ್ಪಿಕೊಂಡ ವಿನಯ್​ ಗೌಡ

ಕಿಚ್ಚ ಸುದೀಪ್​ ಅವರು ಝಗಮಗಿಸುವ ವೇದಿಕೆಯಲ್ಲಿ ಫಿನಾಲೆ ಸಂಚಿಕೆ ನಡೆಸಿಕೊಡುತ್ತಿದ್ದಾರೆ. ಇದರ ಚಿತ್ರೀಕರಣ ಗ್ರ್ಯಾಂಡ್​ ಆಗಿ ನಡೆಯುತ್ತಿದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಇಂದು (ಜನವರಿ 27) ಹಾಗೂ ಭಾನುವಾರ (ಜನವರಿ 28) ಸಂಜೆ 7.30ಕ್ಕೆ ಫಿನಾಲೆ ಎಪಿಸೋಡ್​ ಪ್ರಸಾರ ಆಗಲಿದೆ. ಈಗಾಗಲೇ ಎಲಿಮಿನೇಟ್​ ಆದ ಸ್ಪರ್ಧಿಗಳ ಜೊತೆ ಹಲವು ಸೆಲೆಬ್ರಿಟಿಗಳು ವೇದಿಕೆಯಲ್ಲಿ ಮನರಂಜನೆ ನೀಡಲಿದ್ದಾರೆ. ಬಿಗ್​ ಬಾಸ್​ ವಿನ್ನರ್​ಗೆ 50 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us