AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varthur Santhosh: ಮತ್ತೆ ಬಿಗ್​ ಬಾಸ್​ ಮನೆಗೆ ಬಂದ ವರ್ತೂರು ಸಂತೋಷ್​; ಹುಲಿ ಉಗುರು ಕೇಸ್​ ಬಳಿಕ ಹೊಸ ಆಟ ಶುರು

Varthur Santhosh Bigg Boss re-entry: ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ವರ್ತೂರು ಸಂತೋಷ್​ ಅವರಿಗೆ ಎರಡನೇ ಚಾನ್ಸ್​ ಸಿಕ್ಕಿದೆ. ಈಗ ಅವರು ಮತ್ತೆ ದೊಡ್ಮನೆ ಒಳಗೆ ಪ್ರವೇಶ ಪಡೆದಿದ್ದಾರೆ. ಇಷ್ಟು ದಿನ ತಮ್ಮ ಜೀವನದಲ್ಲಿ ಏನೆಲ್ಲ ಆಯ್ತು ಎಂಬುದನ್ನು ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರಲ್ಲಿ ಶೇರ್​ ಮಾಡಿಕೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.

Varthur Santhosh: ಮತ್ತೆ ಬಿಗ್​ ಬಾಸ್​ ಮನೆಗೆ ಬಂದ ವರ್ತೂರು ಸಂತೋಷ್​; ಹುಲಿ ಉಗುರು ಕೇಸ್​ ಬಳಿಕ ಹೊಸ ಆಟ ಶುರು
ವರ್ತೂರು ಸಂತೋಷ್​
ಮದನ್​ ಕುಮಾರ್​
|

Updated on:Oct 30, 2023 | 5:42 PM

Share

ಹುಲಿ ಉಗುರು (Tiger Claw Pendant) ಧರಿಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ ವರ್ತೂರು ಸಂತೋಷ್​ (Varthur Santhosh) ಅವರು ಮತ್ತೆ ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದ್ದಾರೆ. ಎರಡನೇ ವಾರದಲ್ಲಿ ಸ್ಪರ್ಧಿಸುತ್ತಿದ್ದ ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್​ ಮಾಡಿದ್ದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆ ಬಳಿಕ ಅವರ ಬಿಗ್​ ಬಾಸ್​ ಗೆಲ್ಲುವ ಕನಸು ಅಂತ್ಯವಾಯ್ತು ಎಂದೇ ಭಾವಿಸಲಾಗಿತ್ತು. ಆದರೆ ಈಗ ಗೇಮ್​ ಚೇಂಜ್​ ಆಗಿದೆ. ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ವರ್ತೂರು ಸಂತೋಷ್​ ಅವರಿಗೆ ಎರಡನೇ ಚಾನ್ಸ್​ ಸಿಕ್ಕಿದೆ. ಈಗ ಅವರು ಮತ್ತೆ ದೊಡ್ಮನೆ ಒಳಗೆ ಪ್ರವೇಶ ಪಡೆದಿದ್ದಾರೆ. ಇಷ್ಟು ದಿನ ತಮ್ಮ ಜೀವನದಲ್ಲಿ ಏನೆಲ್ಲ ಆಯ್ತು ಎಂಬುದನ್ನು ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರಲ್ಲಿ (Bigg Boss Kannada Season 10) ಶೇರ್​ ಮಾಡಿಕೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.

ವರ್ತೂರು ಸಂತೋಷ್​ ಅವರು ಹೊರ ಜಗತ್ತಿನ ಸಂಪರ್ಕಕ್ಕೆ ಬಂದು ಮತ್ತೆ ಬಿಗ್​ ಬಾಸ್​ ಮನೆಗೆ ಕಾಲಿಟ್ಟಿರುವುದರಿಂದ ಅವರ ಆಟದ ವೈಖರಿ ಬದಲಾಗಲಿದೆ. ವೀಕ್ಷಕರ ಒಲವು ಯಾವ ಕಡೆ ಇದೆ ಎಂಬುದು ಅವರಿಗೆ ಈಗಾಗಲೇ ಅರ್ಥ ಆಗಿರುತ್ತದೆ. ಅದಕ್ಕೆ ತಕ್ಕಂತೆಯೇ ಅವರು ಆಟ ಮುಂದುವರಿಸುತ್ತಾರೆ. ಇದರಿಂದ ಇನ್ನುಳಿದ ಸ್ಪರ್ಧಿಗಳ ಆಟದ ಮೇಲೆ ಪರಿಣಾಮ ಬೀರುತ್ತದೆ. ಇನ್ನೂ ಎಷ್ಟು ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ವರ್ತೂರು ಸಂತೋಷ್​ ಇರಲಿದ್ದಾರೆ ಎಂಬುದನ್ನು ಕಾಡು ನೋಡಬೇಕು.

ಇದನ್ನೂ ಓದಿ: ಜೈಲಿಂದ ಹೊರಬಂದ ವರ್ತೂರು ಸಂತೋಷ್​ಗೆ ಸಿಕ್ಕ ಅದ್ಧೂರಿ ಸ್ವಾಗತ ಹೀಗಿತ್ತು ನೋಡಿ

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮಕ್ಕೆ ವರ್ತೂರು ಸಂತೋಷ್​ ಅವರು ವಾಪಸ್​ ಬಂದ ಎಪಿಸೋಡ್​ ಇಂದು (ಅಕ್ಟೋಬರ್​ 30) ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ಜಿಯೋ ಸಿನಿಮಾ ಒಟಿಟಿ ಮೂಲಕ ದಿನ 24 ಗಂಟೆಯೂ ಲೈವ್ ನೋಡಬಹುದು. ವರ್ತೂರು ಸಂತೋಷ್​ ಅವರ ಎಗ್ಸಿಟ್​ ಮತ್ತು ರೀ-ಎಂಟ್ರಿ ಬಗ್ಗೆ ಬಿಗ್​ ಬಾಸ್​ ಮನೆಯಲ್ಲಿ ಈವರೆಗೂ ಯಾರೂ ಚರ್ಚೆ ಮಾಡಿಲ್ಲ. ಈಗ ಆ ಕುರಿತು ಮಾತುಕಥೆ ಆಗುವ ನಿರೀಕ್ಷೆ ಇದೆ. ಕಾನೂನಿನ ವಿಷಯ ಆದ್ದರಿಂದ ವರ್ತೂರು ಸಂತೋಷ್​ ಅವರು ಮೌನ ವಹಿಸಲೂಬಹುದು.

ದಿನದಿಂದ ದಿನಕ್ಕೆ ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧೆಯ ಕಾವು ಹೆಚ್ಚಾಗುತ್ತಿದೆ. ಈಗಾಗಲೇ ಎರಡು ಎಲಿಮಿನೇಷನ್​ ನಡೆದಿದೆ. ದಸರಾ ಹಬ್ಬದ ಪ್ರಯುಕ್ತ ಮೂರನೇ ವಾರದ ಎಲಿಮಿನೇಷನ್​ ಪ್ರಕ್ರಿಯೆ ಮುಂದಕ್ಕೆ ಹೋಗಿದೆ. ಕಾರ್ತಿಕ್​ ಮಹೇಶ್​, ವಿಜಯ್​ ಗೌಡ, ಪ್ರತಾಪ್​, ರಕ್ಷಕ್​​, ಮೈಕೆಲ್​ ಅಜಯ್​, ಈಶಾನಿ, ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್​ ಮುಂತಾದ ಸ್ಪರ್ಧಿಗಳ ನಡುವೆ ಪೈಪೋಟಿ ಜೋರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:36 pm, Mon, 30 October 23

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು