AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆ ತಲುಪೋ ಮೊದಲ ಸ್ಪರ್ಧಿ ವರ್ತೂರು ಸಂತೋಷ್​; ಅಬ್ಬಾ ಇದೆಂಥಾ ಬದಲಾವಣೆ

ಈ ವಾರ ವರ್ತೂರು ಸಂತೋಷ್ ಅವರು ಸಖತ್ ಕ್ಲಾರಿಟಿಯೊಂದಿಗೆ ಮಾತನಾಡುತ್ತಿದ್ದಾರೆ. ತೆಗೆದುಕೊಂಡ ಸ್ಟ್ಯಾಂಡ್​ನಿಂದ ಹಿಂದೆ ಸರಿಯುತ್ತಿಲ್ಲ. ಇದು ಅನೇಕರಿಗೆ ಇಷ್ಟ ಆಗುತ್ತಿದೆ.

ಫಿನಾಲೆ ತಲುಪೋ ಮೊದಲ ಸ್ಪರ್ಧಿ ವರ್ತೂರು ಸಂತೋಷ್​; ಅಬ್ಬಾ ಇದೆಂಥಾ ಬದಲಾವಣೆ
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Dec 06, 2023 | 7:25 AM

Share

ಬಿಗ್ ಬಾಸ್ (Bigg Boss Kannada) ಕನ್ನಡ ಸೀಸನ್ 10ರಲ್ಲಿ ವರ್ತೂರು ಸಂತೋಷ್ ಅವರು ಆರಂಭದಲ್ಲಿ ಸಖತ್ ಡಲ್ ಆಗಿದ್ದರು. ಈಗ ಅವರು ಏಕಾಏಕಿ ಬದಲಾಗಿದ್ದಾರೆ. ಅವರ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿ ಬರುತ್ತಿದೆ. ಅವರು ಆಡುತ್ತಿರುವ ರೀತಿ ಸಾಕಷ್ಟು ಜನರಿಗೆ ಇಷ್ಟ ಆಗುತ್ತಿದೆ. ವರ್ತೂರು ಸಂತೋಷ್ ಅವರ ಬಗ್ಗೆ ವಿನಯ್ ಗೌಡ ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ಮನೆಯಲ್ಲಿ ಹೆಚ್ಚು ಪಾಸಿಟಿವಿಟಿ ಹರಡುವ ವ್ಯಕ್ತಿಯಾಗಿ ವರ್ತೂರು ಸಂತೋಷ್ ಅವರು ಕಾಣಿಸಿಕೊಂಡಿದ್ದಾರೆ.

ವರ್ತೂರು ಸಂತೋಷ್ ಅವರು ದೊಡ್ಮನೆಯಲ್ಲಿ ಆರಂಭದಲ್ಲಿ ಡಲ್ ಆಗಿದ್ದರು. ಹುಲಿ ಉಗುರು ಪ್ರಕರಣದಲ್ಲಿ ಹೊರಗೆ ಹೋಗಿ ಬಂದ ಬಳಿಕವಂತೂ ಅವರ ಬಳಿ ಗೇಮ್ ಆಡೋಕೆ ಸಾಧ್ಯವಿಲ್ಲ ಎಂಬ ರೀತಿ ಆಯಿತು. ಈ ಕಾರಣದಿಂದ ಅವರು ದೊಡ್ಮನೆಯಿಂದ ಹೊರ ಹೋಗುವುದಾಗಿ ಪಟ್ಟು ಹಿಡಿದರು. ಆದರೆ, ಅವರ ತಾಯಿ ಬಂದು ಸಮಾಧಾನ ಮಾಡಿದ ಬಳಿಕ ಅವರು ಸಂಪೂರ್ಣವಾಗಿ ಬದಲಾಗಿದ್ದಾರೆ. ಈ ವಾರದಿಂದ ಅವರ ಮಾತುಗಳಲ್ಲಿ ಸಖತ್ ಕ್ಲಾರಿಟಿ ಇದೆ. ಇದು ಅನೇಕರಿಗೆ ಇಷ್ಟ ಆಗಿದೆ.

ಈ ವಾರ ವರ್ತೂರು ಸಂತೋಷ್ ಅವರು ಸಖತ್ ಕ್ಲಾರಿಟಿಯೊಂದಿಗೆ ಮಾತನಾಡುತ್ತಿದ್ದಾರೆ. ತೆಗೆದುಕೊಂಡ ಸ್ಟ್ಯಾಂಡ್​ನಿಂದ ಹಿಂದೆ ಸರಿಯುತ್ತಿಲ್ಲ. ‘ಮೊದಲು ಫಿನಾಲೆ ಸೇರೋ ಸ್ಪರ್ಧಿ ಯಾರು’ ಎನ್ನುವ ಪ್ರಶ್ನೆಗೆ ವಿನಯ್ ಅವರು ವರ್ತೂರು ಸಂತೋಷ್ ಅವರ ಹೆಸರನ್ನು ಹೇಳಿದ್ದರು. ಈ ಮೂಲಕ ಸಂತೋಷ್​ ಅವರಲ್ಲಿ ಆದ ಬದಲಾವಣೆ ಒಪ್ಪಿಕೊಂಡಿದ್ದರು.

ಇನ್ನು ಪಾಸಿಟಿವ್ ಹಾಗೂ ನೆಗೆಟಿವ್ ಮೈಂಡ್​ಸೆಟ್ ಯಾರದ್ದು ಎಂಬುದನ್ನು ಹೇಳಬೇಕಿತ್ತು. ಈ ವೇಳೆ ವರ್ತೂರು ಅವರನ್ನು ವಿನಯ್ ಹೊಗಳಿದ್ದಾರೆ. ‘ಅವರು ನಮಗೆ ಕಾಣದೆ ಶಾಡೋ ಆಗಿದ್ದರು. ಈ ಮನೆಯಲ್ಲಿರೋಕೆ ವೇಸ್ಟ್ ಎಂದು ಸಾಕಷ್ಟು ಜನರು ಹೇಳಿದ್ದಾರೆ. ಯಾವಾಗ ಬಾಯ್ಬಿಟ್ಟು ಮಾತನಾಡೋಕೆ ಶುರುಮಾಡಿದರೋ ಆಗ ನನಗೆ ಅವರ ಬಗ್ಗೆ ಗೊತ್ತಾಯಿತು. ಮನೆಯಲ್ಲಿ ಏನು ಮಾತನಾಡಬೇಕು, ಮಾತನಾಡಬಾರು ಎಂದು ಧ್ವನಿ ಇರೋದು ವರ್ತೂರು ಸಂತೋಷ್​​ಗೆ ಮಾತ್ರ’ ಎಂದರು ವಿನಯ್.

ಇದನ್ನೂ ಓದಿ: ನಿಜ ಮುಖ ತೋರಿಸಿದ ವರ್ತೂರು ಸಂತೋಷ್​; ತಮ್ಮ ವಿರುದ್ಧವೇ ಮಾತನಾಡಿದರೂ ಖುಷಿಪಟ್ಟ ತನಿಷಾ

ವರ್ತೂರು ಸಂತೋಷ್ ಅವರಲ್ಲಿ ಆದ ಬದಲಾವಣೆಗೆ ಎಲ್ಲರೂ ಶಾಕ್ ಆಗಿದ್ದಾರೆ. ಅವರು ಫಿನಾಲೆ ತಲುಪೋದು ಗ್ಯಾರಂಟಿ ಎಂದು ಅನೇಕರು ಮಾತನಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!