AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂದಕರ ಮಾತಿಗೆ ಮನನೊಂದ ವರ್ತೂರು ಸಂತೋಷ್ ಕಣ್ಣೀರು

Varthur Santhosh: ಬಿಗ್​ಬಾಸ್ 10ರ ಬಳಿಕ ಸೆಲೆಬ್ರಿಟಿ ಆಗಿರುವ ವರ್ತೂರು ಸಂತೋಷ್ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಪಡೆದಿದ್ದಾರೆ. ಅಂತೆಯೇ ಕೆಲವು ನಿಂದಕರೂ ಸಹ ಇದ್ದಾರೆ. ಹೊಸ ವಿಡಿಯೋ ಒಂದರಲ್ಲಿ ನಿಂದಕ ಮಾತಿನಿಂದ ಮನನೊಂದು ವರ್ತೂರು ಸಂತೋಷ್ ಕಣ್ಣೀರು ಹಾಕಿದ್ದು, ಜನರಲ್ಲಿ ಮನವಿಯೊಂದನ್ನು ಸಹ ಮಾಡಿದ್ದಾರೆ.

ನಿಂದಕರ ಮಾತಿಗೆ ಮನನೊಂದ ವರ್ತೂರು ಸಂತೋಷ್ ಕಣ್ಣೀರು
ಮಂಜುನಾಥ ಸಿ.
|

Updated on: Mar 29, 2024 | 1:17 PM

Share

ವರ್ತೂರು ಸಂತೋಷ್ (Varthur Santhosh)  ಬಿಗ್​ಬಾಸ್ (BiggBoss)​ ನಿಂದ ಹೊರ ಬಂದ ಬಳಿಕ ಸೆಲೆಬ್ರಿಟಿ ಆಗಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಕಾರ್ಯಕ್ರಮಗಳಿಗೆ ಅವರಿಗೆ ಬುಲಾವ್ ಬರುತ್ತದೆ. ಸಂತೋಷ್ ಬರುತ್ತಿದ್ದಾರೆಂದರೆ ಸಾವಿರ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಭಾರಿ ಜನಪ್ರಿಯತೆ ಗಳಿಸಿರುವ ವರ್ತೂರು ಸಂತೋಷ್​ಗೆ ಕೆಲವು ನಿಂದಕರು ಸಹ ಇದ್ದಾರೆ. ವರ್ತೂರು ಸಂತೋಷ್ ಬಿಗ್​ಬಾಸ್​ನಲ್ಲಿದ್ದಾಗಲೂ ಕೆಲವರು ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತರಹೇವಾರಿ ವಿಡಿಯೋಗಳನ್ನು ಹಾಕುತ್ತಾ, ಸತತ ನಿಂದನೆ, ದೂಷಣೆಯಲ್ಲಿ ತೊಡಗಿದ್ದಾರೆ. ಇದೀಗ ಹೊಸ ವಿಡಿಯೋ ಒಂದರಲ್ಲಿ ನಿಂದಕರ ಮಾತಿಗೆ ಮನನೊಂದು ಕಣ್ಣೀರು ಹಾಕಿರುವ ಸಂತೋಷ್, ನಿಂದಕರಿಗೆ ತಕ್ಕ ಶಾಸ್ತಿ ಕಲಿಸಬೇಕೆಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

ಅಕ್ಷಯ್ ಫುಡ್ ಫ್ಯಾಕ್ಟರಿ ಹೆಸರಿನ ಯೂಟ್ಯೂಬ್ ಚಾನೆಲ್​ನಲ್ಲಿ ಗೆಳೆಯರೊಟ್ಟಿಗೆ ವಿಡಿಯೋ ಮಾಡಿರುವ ವರ್ತೂರು ಸಂತೋಷ್, ತಮ್ಮ ಬಗ್ಗೆ ಅವಹೇಳನಕಾರಿಯಾಗಿ, ಮಾನಹಾನಕಾರಿಯಾಗಿ ನಿಂದನೆಯಲ್ಲಿ ತೊಡಗಿರುವ ಯಲಹಂಕ ಮಂಜು ಮತ್ತು ಫಾರ್ಮ್ ಇಂಡಿಯಾ ಯೂಟ್ಯೂಬ್ ಚಾನೆಲ್ ವಿರುದ್ಧ ಖಾರವಾಗಿ ಮಾತನಾಡಿದ ವರ್ತೂರು ಸಂತೋಷ್, ಏಕವಚನದಲ್ಲಿ ಕೆಲ ಅವಾಚ್ಯ ಪದಗಳ ಬಳಸಿ ಪ್ರತಿನಿಂದನೆ ಮಾಡಿದ್ದಾರೆ.

ಇದನ್ನೂ ಓದಿ:ಬಿಗ್ ಬಾಸ್ ಮನೆಯ ಈ ವಿಚಾರವನ್ನು ಸಖತ್ ಮಿಸ್ ಮಾಡಿಕೊಳ್ಳುತ್ತಿದ್ದಾರೆ ವರ್ತೂರು ಸಂತೋಷ್

ನಾನು ಯಾರಿಗೂ ಮೋಸ ಮಾಡಿದವನಲ್ಲ, ಯಾರ ಅನ್ನವನ್ನೂ ಕಿತ್ತುಕೊಂಡವನಲ್ಲ. ನನ್ನ ಮನೆಯ ಅನ್ನ ತಿಂದು, ನಾನು ಮಾಡಿದ ಸಾವಿರ, ಎರಡು ಸಾವಿರ ಹಣಕ್ಕೆ ಬರುತ್ತಿದ್ದ ಯಲಹಂಕ ಮಂಜು ಇಂದು ನನ್ನ ವಿರುದ್ಧ ಬಾಯಿಗೆ ಬಂದಂತೆ ಹೇಸಿಗೆ ಮಾತನಾಡುತ್ತಿದ್ದಾನೆ. ನನ್ನ ತಾಯಿ, ನನ್ನ ಸ್ನೇಹಿತರು, ಬಂಧುಗಳ ಬಗ್ಗೆ, ನನ್ನ ಸಂಸಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾನೆ. ಜನರು, ಧರ್ಮ ದೇವರುಗಳು, ನಾನು ಯಾರಿಗೂ ಮೋಸ ಮಾಡಿದವನಲ್ಲ, ಜನರೇ ನನ್ನ ನಿಂದಕರಿಗೆ ಬುದ್ಧಿ ಕಲಿಸಬೇಕು ಎಂದು ಹೇಳುತ್ತಾ ಕಣ್ಣೀರು ಹಾಕಿ, ಕೈ ಮುಗಿದಿದ್ದಾರೆ.

ಯಲಹಂಕ ಮಂಜು ಎಂಬುವರು ವರ್ತೂರು ಸಂತೋಷ್ ಬಿಗ್​ಬಾಸ್ ಒಳಗೆ ಇದ್ದಾಗಿನಿಂದಲೂ ಅವರ ವಿರುದ್ಧ ಟೀಕೆಗಳನ್ನು ಮಾಡುತ್ತಲೇ ಬರುತ್ತಿದ್ದಾರೆ. ವರ್ತೂರು ಸಂತೋಷ್ ವ್ಯಕ್ತಿತ್ವದ ಬಗ್ಗೆ ಮಾತ್ರವೇ ಅಲ್ಲದೆ ಕೆಲವು ಖಾಸಗಿ ವಿಷಯಗಳ ಬಗ್ಗೆಯೂ ನಿಂದನೆ ಮಾಡುತ್ತಲೇ ಬರುತ್ತಿದ್ದಾರೆ. ಫಾರ್ಮ್ ಇಂಡಿಯಾ ಹೆಸರಿನ ಯೂಟ್ಯೂಬ್ ಚಾನೆಲ್​ ಮೂಲಕ ವರ್ತೂರು ನಿಂದನೆ, ಮಾನಹಾನಿ ಉದ್ದೇಶದಿಂದ ಸರಣಿ ವಿಡಿಯೋಗಳನ್ನು ಸಹ ಪ್ರಕಟಿಸಿದ್ದಾರೆ. ಇತ್ತೀಚೆಗಿನ ವಿಡಿಯೋನಲ್ಲಿ ಮಾತನಾಡಿರುವ ವರ್ತೂರು ಸಂತೋಷ್, ಈ ಯೂಟ್ಯೂಬ್ ಚಾನೆಲ್​ ಅನ್ನು ರಿಪೋರ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು