AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆ ವಾರ ತಲುಪಿದ ವರ್ತೂರು ಸಂತೋಷ್​; ಟ್ರೋಫಿಗಾಗಿ ಸಂಗೀತಾ, ತುಕಾಲಿ ಜತೆ ಪೈಪೋಟಿ

ಅನೇಕ ಸವಾಲುಗಳನ್ನು ಎದುರಿಸಿ ವರ್ತೂರು ಸಂತೋಷ್​ ಅವರು ಫಿನಾಲೆ ವಾರಕ್ಕೆ ಬಂದಿದ್ದಾರೆ. ಈ ಶೋ ಆರಂಭ ಆದ ಕೆಲವೇ ದಿನಗಳಲ್ಲಿ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿತ್ತು. ಅದನ್ನು ನಿವಾರಿಸಿಕೊಂಡು ಅವರು ಆಟ ಮುಂದುವರಿಸಿದರು. ಸಂಗೀತಾ ಶೃಂಗೇರಿ ಮತ್ತು ತುಕಾಲಿ ಸಂತೋಷ್​ ಬಳಿಕ ಬಿಗ್​ ಬಾಸ್​ ಫಿನಾಲೆ ವಾರವನ್ನು ತಲುಪಿದ ಮೂರನೇ ಸ್ಪರ್ಧಿಯಾಗಿದ್ದಾರೆ ವರ್ತೂರು ಸಂತೋಷ್​.

ಫಿನಾಲೆ ವಾರ ತಲುಪಿದ ವರ್ತೂರು ಸಂತೋಷ್​; ಟ್ರೋಫಿಗಾಗಿ ಸಂಗೀತಾ, ತುಕಾಲಿ ಜತೆ ಪೈಪೋಟಿ
ತುಕಾಲಿ ಸಂತೋಷ್​, ಸಂಗೀತಾ ಶೃಂಗೇರಿ, ವರ್ತೂರು ಸಂತೋಷ್​
ಮದನ್​ ಕುಮಾರ್​
|

Updated on:Jan 21, 2024 | 11:18 AM

Share

ಕಿಚ್ಚ ಸುದೀಪ್​ ಅವರು ಜನವರಿ 20ರ ಸಂಚಿಕೆಯಲ್ಲಿ ಕೊನೆಯ ಪಂಚಾಯ್ತಿ ನಡೆಸಿದ್ದಾರೆ. ಈ ಎಪಿಸೋಡ್​ನಲ್ಲಿ ವರ್ತೂರು ಸಂತೋಷ್​ (Varthur Santhosh) ಬಗ್ಗೆ ಭರ್ಜರಿ ನ್ಯೂಸ್​ ಹೊರಬಿದ್ದಿದೆ. ರೈತನಾಗಿ ಗುರುತಿಸಿಕೊಂಡಿರುವ ಅವರು ಈಗ ಬಿಗ್​ ಬಾಸ್​ ಫಿನಾಲೆ ವಾರ ತಲುಪಿದ್ದಾರೆ. ಆ ಮೂಲಕ ಅವರು ಸಂಗೀತಾ ಶೃಂಗೇರಿ (Sangeetha Sringeri) ಮತ್ತು ತುಕಾಲಿ ಸಂತೋಷ್​ ಜೊತೆ ಪೈಪೋಟಿ ನೀಡುತ್ತಿದ್ದಾರೆ. ವರ್ತೂರು ಸಂತೋಷ್​ ಅವರು ಫಿನಾಲೆ ವಾರಕ್ಕೆ ಎಂಟ್ರಿ ನೀಡಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಫಿನಾಲೆ ವಾರಕ್ಕೆ ಬರುವ ಇನ್ನಿಬ್ಬರು ಸ್ಪರ್ಧಿಗಳು ಯಾರು ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ಜನವರಿ 27 ಮತ್ತು 28ರಂದು ‘ಬಿಗ್ ಬಾಸ್​ ಕನ್ನಡ ಸೀಸನ್​ 10’ ಫಿನಾಲೆ (Bigg Boss Finale) ನಡೆಯಲಿದೆ.

‘ಬಿಗ್​ ಬಾಸ್​ ಫಿನಾಲೆ ವಾರಕ್ಕೆ ತಲುಪುವ ಮೂರನೇ ಸ್ಪರ್ಧಿ ವರ್ತೂರು ಸಂತೋಷ್​’ ಎಂದು ಕಿಚ್ಚ ಸುದೀಪ್ ಅವರು ಘೋಷಿಸಿದಾಗ ಎಲ್ಲರಿಗೂ ಅಚ್ಚರಿ ಆಯಿತು. ಈ ವೇಳೆ ತುಕಾಲಿ ಸಂತೋಷ್​ ಅವರು ಹೆಚ್ಚು ಖುಷಿಪಟ್ಟರು. ಬಿಗ್​ ಬಾಸ್​ ಮನೆಯಲ್ಲಿ ತುಕಾಲಿ ಸಂತೋಷ್​ ಮತ್ತು ವರ್ತೂರು ಸಂತೋಷ್​ ನಡುವೆ ಉತ್ತಮ ಸ್ನೇಹ ಇದೆ. ಫಿನಾಲೆ ವೇದಿಕೆಯಲ್ಲಿ ಸುದೀಪ್​ ಹಿಡಿಯುವ ಆ ಎರಡು ಕೈಗಳು ತಮ್ಮಿಬ್ಬರದ್ದೇ ಆಗಿರಬೇಕು ಎಂದು ತುಕಾಲಿ ಆಸೆಪಟ್ಟಿದ್ದಾರೆ.

ಕಳೆದ ವಾರ ತುಕಾಲಿ ಸಂತೋಷ್​ ಅಥವಾ ವರ್ತೂರು ಸಂತೋಷ್​ ಅವರಲ್ಲಿ ಒಬ್ಬರು ಬಿಗ್​ ಬಾಸ್ ಮನೆಯಿಂದ ಔಟ್​ ಆಗಲಿದ್ದಾರೆ ಎಂದು ಸುದೀಪ್​ ತಿಳಿಸಿದ್ದರು. ಆಗ ಅವರಿಬ್ಬರು ಬಿಕ್ಕಿ ಬಿಕ್ಕಿ ಅತ್ತಿದ್ದರು. ಆದರೆ ಆ ವಾರ ಯಾರೂ ಎಲಿಮಿನೇಟ್​ ಆಗಲ್ಲ ಎಂದು ನಂತರ ತಿಳಿಸಲಾಯಿತು. ಬಳಿಕ ಅವರಿಬ್ಬರು ನಿಟ್ಟುಸಿರು ಬಿಟ್ಟಿದ್ದರು. ಈಗ ಫಿನಾಲೆ ವಾರವನ್ನು ತಲುಪುವ ಅವಕಾಶ ಅವರಿಗೆ ಸಿಕ್ಕಿದೆ.

ಇದನ್ನೂ ಓದಿ: ‘ನನ್ನಿಂದ ತನಿಷಾನ ದೂರ ಮಾಡಿದ ಪಾಪಿ ಇವನು’: ಕಾರ್ತಿಕ್​ ಕಡೆ ಕೈ ತೋರಿಸಿದ ವರ್ತೂರು

ಅನೇಕ ಸವಾಲುಗಳನ್ನು ಎದುರಿಸಿ ವರ್ತೂರು ಸಂತೋಷ್​ ಅವರು ಫಿನಾಲೆ ವಾರಕ್ಕೆ ಬಂದಿದ್ದಾರೆ. ಬಿಗ್ ಬಾಸ್​ ಶೋ ಆರಂಭ ಆದ ಕೆಲವೇ ದಿನಗಳಲ್ಲಿ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿತ್ತು. ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಅವರನ್ನು ಅರೆಸ್ಟ್​ ಮಾಡಿ, ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿತ್ತು. ನಂತರ ಜಾಮೀನು ಪಡೆದು ಅವರು ವಾಪಸ್​ ಬಂದರು. ಮರಳಿ ಬಿಗ್​ ಬಾಸ್​ ಮನೆಗೆ ಬಂದರೂ ಕೂಡ ಅವರಿಗೆ ಅದೇ ಚಿಂತೆ ಕಾಡುತ್ತಿತ್ತು. ತಾವಾಗಿಯೇ ಆಟವನ್ನು ಅಂತ್ಯ ಮಾಡುವುದಾಗಿ ಅವರು ಕಣ್ಣೀರು ಹಾಕಿದ್ದರು. ಆದರೆ ಅದಕ್ಕೆ ಸುದೀಪ್​ ಅವರ ಅವಕಾಶ ನೀಡಿರಲಿಲ್ಲ. ತಾಯಿ ಬಂದು ಸಮಾಧಾನ ಮಾಡಿದ ಬಳಿಕ ವರ್ತೂರು ಸಂತೋಷ್​ ಅವರು ಬಿಗ್​ ಬಾಸ್​ ಮನೆಯಲ್ಲಿ ಮುಂದುವರಿಯಲು ನಿರ್ಧರಿಸಿದರು. ಈಗ ಫಿನಾಲೆ ವಾರಕ್ಕೆ ಎಂಟ್ರಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:52 am, Sun, 21 January 24

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ