AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ, ಪತ್ನಿ ಬಗ್ಗೆ ಮನಬಿಚ್ಚಿ ಮಾತನಾಡಿದ ವರ್ತೂರು ಸಂತೋಷ್

Bigg Boss: ವರ್ತೂರು ಸಂತೋಷ್​ರ ಮದುವೆ ವಿಷಯ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿದೆ. ಇದೀಗ ಬಿಗ್​ಬಾಸ್​ ಮನೆಯಲ್ಲಿ ಕೊನೆಗೂ ತಮ್ಮ ಮದುವೆ ಬಗ್ಗೆ ವರ್ತೂರು ಸಂತೋಷ್ ಮಾತನಾಡಿದ್ದಾರೆ.

ಮದುವೆ, ಪತ್ನಿ ಬಗ್ಗೆ ಮನಬಿಚ್ಚಿ ಮಾತನಾಡಿದ ವರ್ತೂರು ಸಂತೋಷ್
ಮಂಜುನಾಥ ಸಿ.
|

Updated on:Nov 30, 2023 | 11:25 PM

Share

ಬಿಗ್​ಬಾಸ್ (Bigg Boss) ಮನೆಯಲ್ಲಿ ಸ್ಪರ್ಧಿಗಳ ದೈಹಿಕ, ಮಾನಸಿಕ ಕ್ಷಮತೆಯ ಪರೀಕ್ಷೆ ನಡೆಯುತ್ತದೆ. ಟಾಸ್ಕ್​ಗಳಲ್ಲಿ ಗೆಲ್ಲಲು ಸ್ಪರ್ಧಿಗಳು ಒಬ್ಬರ ಮೇಲೊಬ್ಬರು ಯುದ್ಧಕ್ಕೆ ಇಳಿದಂತೆ ವರ್ತಿಸುತ್ತಾರೆ, ಕೆಲವೊಮ್ಮೆ ನೈತಿಕತೆಯ ಎಲ್ಲಯನ್ನೂ ಮೀರುತ್ತಾರೆ. ಆದರೆ ಇದೆಲ್ಲದರ ಜೊತೆಗೆ ಬಿಗ್​ಬಾಸ್ ಮನೆ ಸ್ಪರ್ಧಿಗಳ ನೋವು-ನಲಿವುಗಳಿಗೂ ಕನ್ನಡಿ ಹಿಡಿಯುತ್ತದೆ. ಅವರ ಜೀವನದ ನೋವು-ನಲಿವುಗಳನ್ನು ಹೇಳಿಕೊಳ್ಳಲು, ಹೇಳಿ ಹಗುರಾಗಲು ಅವಕಾಶ ಒದಗಿಸುತ್ತದೆ. ಅಂಥಹದ್ದೇ ಅವಕಾಶವನ್ನು ಗುರುವಾರದ ಎಪಿಸೋಡ್​ನಲ್ಲಿ ಬಿಗ್​ಬಾಸ್, ಸ್ಪರ್ಧಿಗಳಿಗೆ ನೀಡಿದ್ದರು.

ಸ್ಪರ್ಧಿಗಳೆಲ್ಲರೂ ತಮ್ಮ ಜೀವನದಲ್ಲಿ ನಡೆದ ನೋವಿನ ಸಂಗತಿಯನ್ನು ಹಂಚಿಕೊಳ್ಳಬೇಕಿತ್ತು, ಸಂಗೀತಾ, ಸ್ನೇಹಿತ್, ವಿನಯ್, ಕಾರ್ತಿಕ್, ಡ್ರೋನ್ ಪ್ರತಾಪ್, ವರ್ತೂರು ಸಂತೋಶ್ ಅವರುಗಳು ತಮ್ಮ-ತಮ್ಮ ನೋವಿನ ಕತೆಗಳನ್ನು ಹಂಚಿಕೊಂಡರು. ವರ್ತೂರು ಸಂತೋಷ್ ಮೊದಲ ಬಾರಿಗೆ ಬಿಗ್​ಬಾಸ್ ಮನೆಯಲ್ಲಿ ತಮ್ಮ ಖಾಸಗಿ ಜೀವನದ ಬಗ್ಗೆ ವಿಶೇಷವಾಗಿ ತಮ್ಮ ಮದುವೆಯ ಬಗ್ಗೆ ಮಾತನಾಡಿದರು.

‘‘ನಮ್ಮದು ಕೂಡು ಕುಟುಂಬ ನಾಲ್ಕು ವರ್ಷ ವಯಸ್ಸಿನಲ್ಲಿಯೇ ನಾನು ತಂದೆ ಕಳೆದುಕೊಂಡೆ, ಆದರೆ ನನ್ನ ದೊಡ್ಡಪ್ಪಂದಿರು ಯಾವುದಕ್ಕೂ ಕೊರತೆ ಮಾಡದೆ ನನ್ನನ್ನು ಬೆಳೆಸಿದರು. ಡಿಗ್ರಿ ಓದುತ್ತಿರುವಾಗಲೇ ನನಗೆ ಮನೆ ಜವಾಬ್ದಾರಿ ಬಂತು. ನನಗೆ ಮದುವೆ ಮಾಡುವ ವಯಸ್ಸು ಬಂದಾಗ ನನ್ನ ದೊಡ್ಡಪ್ಪನಿಗೆ ಮಾತು ಕೊಟ್ಟೆ, ನೀವು ತೋರಿಸಿದ ಹುಡುಗಿಗೆ ತಾಳಿ ಕಟ್ಟುತ್ತೇನೆಂದು’’ ಎಂದರು ವರ್ತೂರು ಸಂತೋಷ್.

ಇದನ್ನೂ ಓದಿ:ಬಿಗ್​ಬಾಸ್ ಮುಂದೆ ಕಣ್ಣೀರು ಹಾಕಿದ ವಿನಯ್

‘‘ಒಂದು ಕಡೆ ಹೆಣ್ಣು ನೋಡಲು ಹೋದರು ಅವರು ಬಣ್ಣದ ಮಾತುಗಳಿಂದ ಮರಳು ಮಾಡಿದರು. ಒಳಗೆ ಝೀರೋ ಆದರೆ ಮರಳು ಮಾಡಿದರು. ಯಾರೂ ಸಹ ಹೆಣ್ಣು ನೋಡುವಾಗ ಅಕ್ಕ-ಪಕ್ಕದ ಮನೆಯವರನ್ನು ವಿಚಾರಿಸಿ. ದೊಡ್ಡಪ್ಪನಿಗೆ ಕೊಟ್ಟ ಮಾತಿನಂತೆ ಆ ಹುಡುಗಿಯನ್ನು ಮದುವೆಯಾದೆ. ಆದರೆ ಆಕೆ ನನ್ನ ತಾಯಿಯನ್ನು ಮೂಲೆಗುಂಪು ಮಾಡಲು ಪ್ರಯತ್ನಿಸಿದರು, ನಾನು ಕಷ್ಟ ಪಟ್ಟು ಸಂಪಾದಿಸಿದ ಜನರನ್ನು ಬಿಟ್ಟು ಬರಬೇಕು ಎಂದಳು ಆದರೆ ಅದು ನನ್ನಿಂದ ಸಾಧ್ಯವಿಲ್ಲ’’ ಎಂದರು ವರ್ತೂರು ಸಂತೋಷ್.

‘‘ಒಮ್ಮೆ ಅವರ ಮನೆಗೆ ಹೋದೆ ಅವರ ಅಪ್ಪ ಇರಲಿಲ್ಲ, ನಾನು ಹೇಳಿದ ಷರತ್ತುಗಳಿಗೆ ಒಪ್ಪಿ ಬರುವುದಾದರೆ ನಿನ್ನನ್ನು ರಾಣಿಯಂತೆ ನೋಡಿಕೊಳ್ಳುತ್ತೇನೆ ಎಂದೆ ಆದರೆ ಆಕೆ ಅವರಪ್ಪ ಬರಲಿ ಎಂದರು. ಅವರಪ್ಪ ಬಂದು ಮನೆಯಿಂದ ಹೊರಗೆ ಹೋಗು ಎಂದರು, ನನಗೆ ಅಂದು ಅವಮಾನ ಮಾಡಿದರು’’ ಎಂದ ವರ್ತೂರು ಸಂತೋಷ್, ತಾವು ಈಗ ಮತ್ತೊಬ್ಬರೊಟ್ಟಿಗೆ ಸಂಪರ್ಕದಲ್ಲಿರುವುದಾಗಿಯೂ ಸಣ್ಣದಾಗಿ ಸೂಚನೆ ನೀಡಿದರು. ನಾನು ಈಗ ಮಾತನಾಡುತ್ತಿರುವುದನ್ನು ಆ ‘ಝೀರೋ’ ಕುಟುಂಬವೂ ನೋಡುತ್ತಿರುತ್ತದೆ, ನೋಡಲಿ ನಾನು ಅವರಿಗೆ ಉತ್ತರ ಕೊಡುತ್ತೇನೆ ಎಂದರು.

Published On - 11:23 pm, Thu, 30 November 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​