ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಅನ್ನೋದು ಸಾಬೀತು, ಶೀಘ್ರವೇ ಕೋರ್ಟ್​ಗೆ ಹಾಜರು

ಬೆಂಗಳೂರಿನ ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ಈ  ಕಾರ್ಯಾಚರಣೆ ನಡೆದಿದೆ. ಸುಮೊಟೋ ಕೇಸ್ ದಾಖಲಿಸಿ ಕಾರ್ಯಾಚರಣೆ ಮಾಡಲಾಗಿತ್ತು. ಇನ್ನಷ್ಟು ಮಾಹಿತಿ ಪಡೆಯಲು ಸಂತೋಷ್ ಅವರನ್ನು ಕೋರ್ಟ್​​ಗೆ ಹಾಜರುಪಡಿಸಲಾಗುತ್ತಿದೆ.

ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಅನ್ನೋದು ಸಾಬೀತು, ಶೀಘ್ರವೇ ಕೋರ್ಟ್​ಗೆ ಹಾಜರು
ವರ್ತೂರು ಸಂತೋಷ್
Follow us
| Updated By: Digi Tech Desk

Updated on:Oct 26, 2023 | 12:38 PM

ಬಿಗ್ ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ (Vartur Santosh) ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾನುವಾರ (ಅಕ್ಟೋಬರ್ 22) ಸಂಜೆ ಅವರನ್ನು ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆಯಲ್ಲೇ ಬಂಧಿಸಿದ್ದಾರೆ. ಅವರು ಕತ್ತಿಗೆ ಹಾಕಿದ್ದ ಚೈನ್​ನಲ್ಲಿ ಹುಲಿಯ ಉಗುರಿನ ಪೆಂಡೆಂಟ್ ಇತ್ತು. ಇದು ಚರ್ಚೆ ಹುಟ್ಟುಹಾಕಿತ್ತು. ಈಗ ಅವರನ್ನು ಬಂಧಿಸಿ, ಪರಿಶೀಲಿಸಿದಾಗ ಇದು ಹುಲಿ ಉಗುರು ಎಂಬುದು ಖಚಿತವಾಗಿದೆ. ಶೀಘ್ರವೇ ಅವರನ್ನು ಕೋರ್ಟ್​ಗೆ ಹಾಜರುಪಡಿಸಲಾಗುತ್ತಿದೆ.

ಈ ಬಗ್ಗೆ ಟಿವಿ9 ಕನ್ನಡಕ್ಕೆ ಉಪ ಅರಣ್ಯಾಧಿಕಾರಿ ರವೀಂದ್ರ ಹೇಳಿಕೆ ನೀಡಿದ್ದಾರೆ. ‘ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಎಂಬುದು ಖಚಿತವಾಗಿದೆ. ಜಿಲ್ಲಾಧಿಕಾರಿ ಕೊಟ್ಟ ಮಾಹಿತಿ ಮೇಲೆ ಅವರನ್ನು ಬಂಧಿಸಿದ್ದೇವೆ. ತಪಾಸಣೆ ಮಾಡಿದ ಮೇಲೆ ಅದು ಹುಲಿ ಉಗುರು ಎಂದು ಸಾಬೀತಾಗಿದೆ. ಬಿಗ್ ಬಾಸ್ ಮನೆಗೆ ಹೋಗಿ ಅವರನ್ನ ಬಂಧಿಸಿ ಕರೆತಂದಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ಈ  ಕಾರ್ಯಾಚರಣೆ ನಡೆದಿದೆ. ಸುಮೊಟೋ ಕೇಸ್ ದಾಖಲಿಸಿ ಕಾರ್ಯಾಚರಣೆ ಮಾಡಲಾಗಿತ್ತು. ಇನ್ನಷ್ಟು ಮಾಹಿತಿ ಪಡೆಯಲು ಸಂತೋಷ್ ಅವರನ್ನು ಕೋರ್ಟ್​​ಗೆ ಹಾಜರುಪಡಿಸಲಾಗುತ್ತಿದೆ. ವೈಲ್ಡ್ ಲೈಫ್ ಪ್ರೊಟೆಕ್ಷನ್ ಆ್ಯಕ್ಟ್ ಅಡಿಯಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್; ಮಾಡಿದ ಕ್ರೈಮ್ ಏನು?

ಈಗಾಗಲೇ ಬಿಗ್ ಬಾಸ್ ಮನೆಯಲ್ಲಿ ಎರಡು ಎಲಿಮಿನೇಷನ್ ನಡೆದಿದೆ. ಈಗ ವರ್ತೂರು ಸಂತೋಷ್ ಅವರು ಕೂಡ ಎಲಿಮಿನೇಟ್ ಆಗಿದ್ದಾರೆ ಎಂದೇ ಪರಿಗಣಿಸಬಹುದು. ಅವರು ಮತ್ತೆ ಬಿಗ್ ಬಾಸ್​ ಮನೆಗೆ ಬರೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Mon, 23 October 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ