AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಅನ್ನೋದು ಸಾಬೀತು, ಶೀಘ್ರವೇ ಕೋರ್ಟ್​ಗೆ ಹಾಜರು

ಬೆಂಗಳೂರಿನ ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ಈ  ಕಾರ್ಯಾಚರಣೆ ನಡೆದಿದೆ. ಸುಮೊಟೋ ಕೇಸ್ ದಾಖಲಿಸಿ ಕಾರ್ಯಾಚರಣೆ ಮಾಡಲಾಗಿತ್ತು. ಇನ್ನಷ್ಟು ಮಾಹಿತಿ ಪಡೆಯಲು ಸಂತೋಷ್ ಅವರನ್ನು ಕೋರ್ಟ್​​ಗೆ ಹಾಜರುಪಡಿಸಲಾಗುತ್ತಿದೆ.

ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಅನ್ನೋದು ಸಾಬೀತು, ಶೀಘ್ರವೇ ಕೋರ್ಟ್​ಗೆ ಹಾಜರು
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
| Edited By: |

Updated on:Oct 26, 2023 | 12:38 PM

Share

ಬಿಗ್ ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ (Vartur Santosh) ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾನುವಾರ (ಅಕ್ಟೋಬರ್ 22) ಸಂಜೆ ಅವರನ್ನು ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆಯಲ್ಲೇ ಬಂಧಿಸಿದ್ದಾರೆ. ಅವರು ಕತ್ತಿಗೆ ಹಾಕಿದ್ದ ಚೈನ್​ನಲ್ಲಿ ಹುಲಿಯ ಉಗುರಿನ ಪೆಂಡೆಂಟ್ ಇತ್ತು. ಇದು ಚರ್ಚೆ ಹುಟ್ಟುಹಾಕಿತ್ತು. ಈಗ ಅವರನ್ನು ಬಂಧಿಸಿ, ಪರಿಶೀಲಿಸಿದಾಗ ಇದು ಹುಲಿ ಉಗುರು ಎಂಬುದು ಖಚಿತವಾಗಿದೆ. ಶೀಘ್ರವೇ ಅವರನ್ನು ಕೋರ್ಟ್​ಗೆ ಹಾಜರುಪಡಿಸಲಾಗುತ್ತಿದೆ.

ಈ ಬಗ್ಗೆ ಟಿವಿ9 ಕನ್ನಡಕ್ಕೆ ಉಪ ಅರಣ್ಯಾಧಿಕಾರಿ ರವೀಂದ್ರ ಹೇಳಿಕೆ ನೀಡಿದ್ದಾರೆ. ‘ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಎಂಬುದು ಖಚಿತವಾಗಿದೆ. ಜಿಲ್ಲಾಧಿಕಾರಿ ಕೊಟ್ಟ ಮಾಹಿತಿ ಮೇಲೆ ಅವರನ್ನು ಬಂಧಿಸಿದ್ದೇವೆ. ತಪಾಸಣೆ ಮಾಡಿದ ಮೇಲೆ ಅದು ಹುಲಿ ಉಗುರು ಎಂದು ಸಾಬೀತಾಗಿದೆ. ಬಿಗ್ ಬಾಸ್ ಮನೆಗೆ ಹೋಗಿ ಅವರನ್ನ ಬಂಧಿಸಿ ಕರೆತಂದಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ಈ  ಕಾರ್ಯಾಚರಣೆ ನಡೆದಿದೆ. ಸುಮೊಟೋ ಕೇಸ್ ದಾಖಲಿಸಿ ಕಾರ್ಯಾಚರಣೆ ಮಾಡಲಾಗಿತ್ತು. ಇನ್ನಷ್ಟು ಮಾಹಿತಿ ಪಡೆಯಲು ಸಂತೋಷ್ ಅವರನ್ನು ಕೋರ್ಟ್​​ಗೆ ಹಾಜರುಪಡಿಸಲಾಗುತ್ತಿದೆ. ವೈಲ್ಡ್ ಲೈಫ್ ಪ್ರೊಟೆಕ್ಷನ್ ಆ್ಯಕ್ಟ್ ಅಡಿಯಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್; ಮಾಡಿದ ಕ್ರೈಮ್ ಏನು?

ಈಗಾಗಲೇ ಬಿಗ್ ಬಾಸ್ ಮನೆಯಲ್ಲಿ ಎರಡು ಎಲಿಮಿನೇಷನ್ ನಡೆದಿದೆ. ಈಗ ವರ್ತೂರು ಸಂತೋಷ್ ಅವರು ಕೂಡ ಎಲಿಮಿನೇಟ್ ಆಗಿದ್ದಾರೆ ಎಂದೇ ಪರಿಗಣಿಸಬಹುದು. ಅವರು ಮತ್ತೆ ಬಿಗ್ ಬಾಸ್​ ಮನೆಗೆ ಬರೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Mon, 23 October 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ