AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಅನ್ನೋದು ಸಾಬೀತು, ಶೀಘ್ರವೇ ಕೋರ್ಟ್​ಗೆ ಹಾಜರು

ಬೆಂಗಳೂರಿನ ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ಈ  ಕಾರ್ಯಾಚರಣೆ ನಡೆದಿದೆ. ಸುಮೊಟೋ ಕೇಸ್ ದಾಖಲಿಸಿ ಕಾರ್ಯಾಚರಣೆ ಮಾಡಲಾಗಿತ್ತು. ಇನ್ನಷ್ಟು ಮಾಹಿತಿ ಪಡೆಯಲು ಸಂತೋಷ್ ಅವರನ್ನು ಕೋರ್ಟ್​​ಗೆ ಹಾಜರುಪಡಿಸಲಾಗುತ್ತಿದೆ.

ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಅನ್ನೋದು ಸಾಬೀತು, ಶೀಘ್ರವೇ ಕೋರ್ಟ್​ಗೆ ಹಾಜರು
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
| Edited By: |

Updated on:Oct 26, 2023 | 12:38 PM

Share

ಬಿಗ್ ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ (Vartur Santosh) ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾನುವಾರ (ಅಕ್ಟೋಬರ್ 22) ಸಂಜೆ ಅವರನ್ನು ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆಯಲ್ಲೇ ಬಂಧಿಸಿದ್ದಾರೆ. ಅವರು ಕತ್ತಿಗೆ ಹಾಕಿದ್ದ ಚೈನ್​ನಲ್ಲಿ ಹುಲಿಯ ಉಗುರಿನ ಪೆಂಡೆಂಟ್ ಇತ್ತು. ಇದು ಚರ್ಚೆ ಹುಟ್ಟುಹಾಕಿತ್ತು. ಈಗ ಅವರನ್ನು ಬಂಧಿಸಿ, ಪರಿಶೀಲಿಸಿದಾಗ ಇದು ಹುಲಿ ಉಗುರು ಎಂಬುದು ಖಚಿತವಾಗಿದೆ. ಶೀಘ್ರವೇ ಅವರನ್ನು ಕೋರ್ಟ್​ಗೆ ಹಾಜರುಪಡಿಸಲಾಗುತ್ತಿದೆ.

ಈ ಬಗ್ಗೆ ಟಿವಿ9 ಕನ್ನಡಕ್ಕೆ ಉಪ ಅರಣ್ಯಾಧಿಕಾರಿ ರವೀಂದ್ರ ಹೇಳಿಕೆ ನೀಡಿದ್ದಾರೆ. ‘ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಎಂಬುದು ಖಚಿತವಾಗಿದೆ. ಜಿಲ್ಲಾಧಿಕಾರಿ ಕೊಟ್ಟ ಮಾಹಿತಿ ಮೇಲೆ ಅವರನ್ನು ಬಂಧಿಸಿದ್ದೇವೆ. ತಪಾಸಣೆ ಮಾಡಿದ ಮೇಲೆ ಅದು ಹುಲಿ ಉಗುರು ಎಂದು ಸಾಬೀತಾಗಿದೆ. ಬಿಗ್ ಬಾಸ್ ಮನೆಗೆ ಹೋಗಿ ಅವರನ್ನ ಬಂಧಿಸಿ ಕರೆತಂದಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ಈ  ಕಾರ್ಯಾಚರಣೆ ನಡೆದಿದೆ. ಸುಮೊಟೋ ಕೇಸ್ ದಾಖಲಿಸಿ ಕಾರ್ಯಾಚರಣೆ ಮಾಡಲಾಗಿತ್ತು. ಇನ್ನಷ್ಟು ಮಾಹಿತಿ ಪಡೆಯಲು ಸಂತೋಷ್ ಅವರನ್ನು ಕೋರ್ಟ್​​ಗೆ ಹಾಜರುಪಡಿಸಲಾಗುತ್ತಿದೆ. ವೈಲ್ಡ್ ಲೈಫ್ ಪ್ರೊಟೆಕ್ಷನ್ ಆ್ಯಕ್ಟ್ ಅಡಿಯಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್; ಮಾಡಿದ ಕ್ರೈಮ್ ಏನು?

ಈಗಾಗಲೇ ಬಿಗ್ ಬಾಸ್ ಮನೆಯಲ್ಲಿ ಎರಡು ಎಲಿಮಿನೇಷನ್ ನಡೆದಿದೆ. ಈಗ ವರ್ತೂರು ಸಂತೋಷ್ ಅವರು ಕೂಡ ಎಲಿಮಿನೇಟ್ ಆಗಿದ್ದಾರೆ ಎಂದೇ ಪರಿಗಣಿಸಬಹುದು. ಅವರು ಮತ್ತೆ ಬಿಗ್ ಬಾಸ್​ ಮನೆಗೆ ಬರೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Mon, 23 October 23

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ