AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮರ್ಥ್ಯ ಇದ್ರೆ ಮೂರು ಮದುವೆ ಆಗಲಿ’; ವರ್ತೂರು ಸಂತೋಷ್​ ಬಗ್ಗೆ ತಾಯಿ ಮಾತು..

‘ಇಡೀ ಮನೆಯಲ್ಲಿ ಒಂದು ಗುಟ್ಟು ಇದೆ. ಹೊರ ಜಗತ್ತಿಗೆ ಆ ಗುಟ್ಟು ಗೊತ್ತಿದೆ. ಮನೆಯ ಒಂದು ಸ್ಪರ್ಧಿಗೆ ಮಾತ್ರ ಅದು ಗೊತ್ತಿದೆ. ಉಳಿದ ಯಾರಿಗೂ ಆ ಗುಟ್ಟು ತಿಳಿದಿಲ್ಲ, ಏನದು?’ ಎಂದು ಸುದೀಪ್ ಕೇಳಿದರು.

‘ಸಾಮರ್ಥ್ಯ ಇದ್ರೆ ಮೂರು ಮದುವೆ ಆಗಲಿ’; ವರ್ತೂರು ಸಂತೋಷ್​ ಬಗ್ಗೆ ತಾಯಿ ಮಾತು..
ವರ್ತೂರು ಹಾಗೂ ಅವರ ತಾಯಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jan 27, 2024 | 9:40 PM

Share

ವರ್ತೂರು ಸಂತೋಷ್ (Varthur Santosh) ಅವರು ಈಗ ಫಿನಾಲೆ ತಲುಪಿದ್ದಾರೆ.  ಆರು ಸ್ಪರ್ಧಿಗಳ ಪೈಕಿ ಅವರು ಕೂಡ ಇದ್ದಾರೆ. ಆರಂಭದಲ್ಲಿ ವರ್ತೂರು ಸಂತೋಷ್ ಅವರು ಜೈಲಿಗೆ ಹೋಗಿದ್ದರು. ಅವರು ಹೊರಗೆ ಹೋಗಿದ್ದು ಏಕೆ ಎಂಬ ವಿಚಾರ ದೊಡ್ಮನೆಯವರಿಗೆ ಗೊತ್ತಿರಲಿಲ್ಲ. ಈಗ ಫಿನಾಲೆ ದಿನ ಈ ವಿಚಾರವನ್ನು ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಮನೆ ಮಂದಿ ಶಾಕ್ ಆಗಿದ್ದಾರೆ. ಇದರ ಜೊತೆ ಮದುವೆ ವಿಚಾರವೂ ಚರ್ಚೆಗೆ ಬಂದಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಫಿನಾಲೆ ಎಪಿಸೋಡ್ ಪ್ರಸಾರ ಕಾಣುತ್ತಿದೆ.

‘ಇಡೀ ಮನೆಯಲ್ಲಿ ಒಂದು ಗುಟ್ಟು ಇದೆ. ಹೊರ ಜಗತ್ತಿಗೆ ಆ ಗುಟ್ಟು ಗೊತ್ತಿದೆ. ಮನೆಯ ಒಂದು ಸ್ಪರ್ಧಿಗೆ ಮಾತ್ರ ಅದು ಗೊತ್ತಿದೆ. ಉಳಿದ ಯಾರಿಗೂ ಆ ಗುಟ್ಟು ತಿಳಿದಿಲ್ಲ, ಏನದು?’ ಎಂದು ಸುದೀಪ್ ಕೇಳಿದರು. ಮನೆಯವರಿಗೆ ಇದನ್ನು ಕೇಳಿ ಗೊಂದಲ ಆಯಿತು. ಸುದೀಪ್ ಅವರು ‘ವರ್ತೂರು ಅವರೇ’ ಎಂದು ಹೇಳಿದರು. ಆಗ ವರ್ತೂರು ಸಂತೋಷ್ ಅವರಿಗೆ ಇದು ತಮ್ಮದೇ ವಿಚಾರ ಎಂಬುದು ಗೊತ್ತಾಯಿತು.

‘ವರ್ತೂರು ಸಂತೋಷ್ ಅವರು ಒಂದು ವಾರ ಹೊರಗೆ ಹೋಗಿ ಬಂದರು. ಮನೆಯಲ್ಲಿರುವ ಯಾರಿಗೂ ಇದಕ್ಕೆ ಕಾರಣ ಗೊತ್ತಿಲ್ಲ. ಹೊರ ಬಂದು ಎಲ್ಲವನ್ನೂ ತಿಳಿದುಕೊಂಡು ಹೋದರು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅದಲ್ಲ. ಏನಾಗಿತ್ತು ಹೇಳಿ’ ಎಂದು ಸುದೀಪ್ ಹೇಳಿದರು. ಈ ಮಾತು ಕೇಳುತ್ತಿದ್ದಂತೆ ವರ್ತೂರು ಸಂತೋಷ್ ಅವರು ಕಣ್ಣೀರು ಹಾಕಿದರು.

‘ವರ್ತೂರು ಅವರ ಕತ್ತಿನಲ್ಲಿ ಒಂದು ಪೆಂಡೆಂಟ್ ಇತ್ತು. ಅದು ಧರಿಸುವಂತಿರಲಿಲ್ಲ. ಈ ಕಾರಣಕ್ಕೆ ಅವರನ್ನು ಹೊರಗೆ ಕರೆತರಲಾಯಿತು. ಅವರು ಜೈಲು ಸೇರಿದರು. ಬಿಗ್ ಬಾಸ್​ ಮನೆಯಲ್ಲಿ ಇಲ್ಲದ ಸಮಯದಲ್ಲಿ ಅವರು ಒಂದು ವಾರ ಜೈಲಿನಲ್ಲಿ ಇದ್ದರು. ಸಾಕಷ್ಟು ಅನುಭವಿಸಿಕೊಂಡು ಬಂದ್ರು. ಅವರು ನಿಜಕ್ಕೂ ಸ್ಟ್ರಾಂಗ್’ ಎಂದರು ಸುದೀಪ್. ಕಿಚ್ಚ ಹೇಳಿದ ವಿಚಾರ ಕೇಳಿ ಅನೇಕರಿಗೆ ಶಾಕ್ ಆಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆ ಆರಂಭದಲ್ಲೇ ವರ್ತೂರು ಸಂತೋಷ್​, ಡ್ರೋನ್​ ಪ್ರತಾಪ್​ ಮನೆಯವರ ಕಣ್ಣೀರು

ಮೂರು ಮದುವೆ..

ವರ್ತೂರು ಸಂತೋಷ್ ಅವರ ಸಂಸಾರ ಈಗಾಗಲೇ ಮುರಿದು ಬಿದ್ದಿದೆ. ಆ ವಿಚಾರ ಬಿಗ್ ಬಾಸ್​ನಲ್ಲೂ ಚರ್ಚೆ ಆಗಿದೆ. ಸುದೀಪ್ ಅವರು ವರ್ತೂರು ಸಂತೋಷ್ ಮದುವೆ ಬಗ್ಗೆ ಫಿನಾಲೆಯಲ್ಲಿ ಮಾತನಾಡಿದ್ದಾರೆ. ‘ಈಗೀರೋ ಜನಪ್ರಿಯತೆಗೆ ವರ್ತೂರಿಗೆ ಮೂರು ಮದುವೆ ಆಗುತ್ತದೆ’ ಎಂದರು ಸುದೀಪ್. ಇದಕ್ಕೆ ಉತ್ತರಿಸಿದರು ವರ್ತೂರು ಸಂತೋಷ್ ತಾಯಿ, ‘ಆದ್ರೆ ಆಗಲಿ ಸರ್. ಸಾಮರ್ಥ್ಯ ಇದ್ರೆ ಆಗ್ಲಿ’ ಎಂದರು . ಆಗ ಎಲ್ಲರೂ ತನಿಷಾ ಅತ್ತ ನೋಡಿದರು. ತನಿಷಾ ಅವರು ನಾಚಿ ನೀರಾದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ