AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಔಟ್; ನಗುತ್ತಲೇ ಹೊರಬಂದ ಹಳ್ಳಿಕಾರ್​ ಒಡೆಯ

ವರ್ತೂರು ಸಂತೋಷ್ ಅವರಿಗೆ ಇಷ್ಟು ದೂರ ಬಂದಿದ್ದಕ್ಕೆ ಖುಷಿ ಇದೆ. 112 ದಿನಗಳ ಕಾಲ ಅವರು ದೊಡ್ಮನೆಯಲ್ಲಿ ಕಳೆದಿದ್ದಾರೆ. ಹೀಗಾಗಿ ಅವರು ಖುಷಿಯಿಂದಲೇ ದೊಡ್ಮನೆಯಿಂದ ಹೊರಕ್ಕೆ ಬಂದಿದ್ದಾರೆ.

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಔಟ್; ನಗುತ್ತಲೇ ಹೊರಬಂದ ಹಳ್ಳಿಕಾರ್​ ಒಡೆಯ
ವರ್ತೂರು ಸಂತೋಷ್
ರಾಜೇಶ್ ದುಗ್ಗುಮನೆ
|

Updated on:Jan 28, 2024 | 8:26 PM

Share

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ (Varthur Santhosh) ಅವರು ಎಲಿಮಿನೇಟ್ ಆಗಿದ್ದಾರೆ. ಫಿನಾಲೆಯಿಂದ ಔಟ್ ಆದ ಎರಡನೇ ಸ್ಪರ್ಧಿ ಅವರಾಗಿದ್ದಾರೆ. ಜನವರಿ 27ರಂದು ತುಕಾಲಿ ಸಂತೋಷ್ ಹೊರ ಬಂದಿದ್ದರು. ಇದಾದ ಬೆನ್ನಲ್ಲೇ ಅವರ ಬೀನ್​ ಬ್ಯಾಗ್​ಮೇಟ್ ವರ್ತೂರು ಸಂತೋಷ್ ಕೂಡ ಹೊರ ಬಂದರು. ಈ ಮೂಲಕ ಮನೆಯ ಸದಸ್ಯರ ಸಂಖ್ಯೆ ನಾಲ್ಕಕ್ಕೆ ಇಳಿಕೆ ಆಗಿದೆ. ವರ್ತೂರು ಸಂತೋಷ್ ಅವರಿಗೆ ಸುದೀಪ್ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ವರ್ತೂರು ಸಂತೋಷ್ ಅವರು ಬಿಗ್ ಬಾಸ್​ ಮನೆಯಲ್ಲಿ ಅಷ್ಟಾಗಿ ಗಮನ ಸೆಳೆಯಲಿಲ್ಲ. ಅವರು ಸೈಲೆಂಟ್ ಆಗಿ ಇರುತ್ತಿದ್ದುದೇ ಹೆಚ್ಚು. ಅವರು ಕತ್ತಿಗೆ ಧರಿಸಿದ್ದ ಹುಲಿ ಉಗುರಿನಿಂದ ಜೈಲಿಗೆ ಹೋದರು. ಈ ಕಾರಣಕ್ಕೆ ಅವರು ಒಂದು ವಾರ ದೊಡ್ಮನೆಯಿಂದ ಹೊರ ಇರಬೇಕಾಗಿ ಬಂದಿತ್ತು. ಒಂದು ವಾರಕ್ಕೆ ಅವರು ಮರಳಿ ಬಿಗ್ ಬಾಸ್ ಮನೆಗೆ ಬಂದರು. ನಂತರ ಬಿಗ್ ಬಾಸ್ ಮನೆಯಲ್ಲಿ ಅವರು ಎಲ್ಲರ ಗಮನ ಸೆಳೆಯೋಕೆ ಶುರು ಮಾಡಿದರು.

ತುಕಾಲಿ ಸಂತೋಷ್ ಹಾಗೂ ವರ್ತೂರು ಸಂತೋಷ್ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆಯಿತು. ಇಬ್ಬರೂ ಒಟ್ಟಾಗಿ ಹಲವು ಪ್ಲ್ಯಾನ್ ಮಾಡಿದರು. ಈ ಕಾರಣಕ್ಕೆ ಇಬ್ಬರೂ ಫಿನಾಲೆವರೆಗೆ ತಲುಪಿದ್ದರು. ಇವರ ಫ್ರೆಂಡ್​ಶಿಪ್​ನ ಕಿಚ್ಚ ಸುದೀಪ್ ಅವರು ಹೊಗಳಿದ್ದರು. ಈಗ ಹೊರ ಹೋಗುವಾಗಲೂ ಇಬ್ಬರೂ ಒಬ್ಬರಾದ ಮೇಲೆ ಒಬ್ಬರು ಔಟ್ ಆಗಿದ್ದಾರೆ.

ವರ್ತೂರು ಸಂತೋಷ್ ಅವರಿಗೆ ಇಷ್ಟು ದೂರ ಬಂದಿದ್ದಕ್ಕೆ ಖುಷಿ ಇದೆ. 112 ದಿನಗಳ ಕಾಲ ಅವರು ದೊಡ್ಮನೆಯಲ್ಲಿ ಕಳೆದಿದ್ದಾರೆ. ಹೀಗಾಗಿ ಅವರು ಖುಷಿಯಿಂದಲೇ ದೊಡ್ಮನೆಯಿಂದ ಹೊರಕ್ಕೆ ಬಂದಿದ್ದಾರೆ. ವೇದಿಕೆ ಮೇಲೆ ಕಿಚ್ಚ ಸುದೀಪ್ ಅವರು ಸಂತೋಷ್​​ಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

ಇದನ್ನೂ ಓದಿ: ಈ 5 ಕಾರಣದಿಂದಲೇ ತುಕಾಲಿ ಸಂತೋಷ್​ಗೆ ಮಿಸ್​ ಆಯ್ತು ಬಿಗ್ ಬಾಸ್​ ಟ್ರೋಫಿ

ಸದ್ಯ ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೌಡ, ಕಾರ್ತಿಕ್ ಗೌಡ, ಸಂಗೀತಾ ಶೃಂಗೇರಿ, ವಿನಯ್ ಗೌಡ ಇದ್ದಾರೆ. ಈ ಪೈಕಿ ಒಬ್ಬರಿಗೆ ಅದೃಷ್ಟ ಲಕ್ಷ್ಮಿ ಒಲಿಯಲಿದ್ದಾಳೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಫಿನಾಲೆ ಎಪಿಸೋಡ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:26 pm, Sun, 28 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!