AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಚೈಲ್ಡ್ ಚಪಾತಿಗೆ ಈ ವಿಡಿಯೋ’; ವರ್ತೂರು ಸಂತೋಷ್ ಖಡಕ್ ಉತ್ತರ ನೀಡಿದ್ಯಾರಿಗೆ?

ವರ್ತೂರು ಸಂತೋಷ್ ಅವರನ್ನು ಇತ್ತೀಚೆಗೆ ಅನೇಕರು ಟೀಕೆ ಮಾಡಿದ್ದರು. ‘ಹಳ್ಳಿಕಾರ್ ಹೆಸರಲ್ಲಿ ಸಂತೋಷ್ ದುಡ್ಡು ಮಾಡಿದ್ದಾರೆ, ಪ್ರಚಾರಕ್ಕಾಗಿ ಎರಡು ವರ್ಷಗಳಿಂದ ಈ ರೀತಿ ಮಾಡುತ್ತಿದ್ದಾರೆ’ ಎನ್ನುವ ಆರೋಪವನ್ನು ಕೆಲವರು ಮಾಡಿದ್ದರು. ಈ ಎಲ್ಲಾ ಆರೋಪಗಳಿಗೆ ವರ್ತೂರು ಸಂತೋಷ್ ಉತ್ತರ ನೀಡಿದ್ದಾರೆ.

‘ಆ ಚೈಲ್ಡ್ ಚಪಾತಿಗೆ ಈ ವಿಡಿಯೋ’; ವರ್ತೂರು ಸಂತೋಷ್ ಖಡಕ್ ಉತ್ತರ ನೀಡಿದ್ಯಾರಿಗೆ?
ಸಂತೋಷ್
Follow us
ರಾಜೇಶ್ ದುಗ್ಗುಮನೆ
|

Updated on: Feb 10, 2024 | 6:58 AM

ವರ್ತೂರು ಸಂತೋಷ್ (Varthur Santosh) ಹವಾ ಹೆಚ್ಚಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆ ತಲುಪಿದ್ದ ಅವರು ಈಗ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಅವರಿಗೆ ಸಿಕ್ಕ ಜನಪ್ರಿಯತೆ ಯಾವ ಮಟ್ಟದ್ದು ಎಂದು ಅವರಿಗೆ ತಿಳಿಯುತ್ತಿದೆ. ಈ ಕಾರಣಕ್ಕೆ ಅವರು ನೇರವಾಗಿ ಮಾತುಗಳನ್ನಾಡುವುದು ಹೆಚ್ಚಿದೆ. ಈಗ ಸಂತೋಷ್ ಅಭಿಮಾನಿ ವಲಯದಲ್ಲಿ ಒಂದು ವಿಡಿಯೋ ಸಖತ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಅಪ್ರಬುದ್ಧ ವ್ಯಕ್ತಿಗಳಿಗೆ ತಿರುಗೇಟು ನೀಡಿದ್ದಾರೆ. ಫ್ಯಾನ್ಸ್ ವಲಯದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ವರ್ತೂರು ಸಂತೋಷ್ ಅವರು ‘ಬಿಗ್ ಬಾಸ್’ ಮನೆ ಸೇರಿದಾಗ ಡಲ್ ಇದ್ದರು. ಹಳ್ಳಿಕಾರ್ ರೈತರ ಹೋರಿಗಳ ಬಗ್ಗೆ ಜನರಿಗೆ ಮಾಹಿತಿ ನೀಡೋದು ಅವರ ಉದ್ದೇಶ ಆಗಿತ್ತು. ಆದರೆ, ಅವರು ತೊಂದರೆಗೆ ಸಿಲುಕಿದ್ದು ಹುಲಿ ಉಗುರು ಪ್ರಕರಣದಿಂದ. ಅವರು ಜೈಲಿಗೆ ಹೋಗಿ ಬರಬೇಕಾಯಿತು. ಬಳಿಕ ಮರಳಿ ಬಿಗ್ ಬಾಸ್​ಗೆ ತೆರಳಿದಾಗ ಅವರ ಆಟ ಸಂಪೂರ್ಣ ಬದಲಾಯಿತು. ಬೇರೆಯದೇ ವರ್ತೂರು ಸಂತೋಷ್ ಆಗಿ ಅವರು ಕಾಣಿಸಿದ್ದಾರೆ.

ವರ್ತೂರು ಸಂತೋಷ್ ವಿಡಿಯೋ

ಇತ್ತೀಚೆಗೆ ವರ್ತೂರು ಸಂತೋಷ್ ಅವರನ್ನು ಅನೇಕರು ಟೀಕೆ ಮಾಡಿದ್ದರು. ‘ಹಳ್ಳಿಕಾರ್ ಹಸುಗಳ ಹೆಸರಲ್ಲಿ ಸಂತೋಷ್ ದುಡ್ಡು ಮಾಡಿದ್ದಾರೆ, ಪ್ರಚಾರಕ್ಕಾಗಿ ಎರಡು ವರ್ಷಗಳಿಂದ ಈ ರೀತಿ ಮಾಡುತ್ತಿದ್ದಾರೆ’ ಎನ್ನುವ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಈ ಎಲ್ಲಾ ಆರೋಪಗಳಿಗೆ ಅವರು ಉತ್ತರ ನೀಡಿದ್ದಾರೆ. ಒಂದು ವಿಡಿಯೋ ಮೂಲಕ ಅವರು ಖಡಕ್ ತಿರುಗೇಟು ನೀಡಿದ್ದಾರೆ. ಚಿಕ್ಕವನಿದ್ದಾಗ ಹೋರಿಗಳ ಜೊತೆ ನಿಂತ ಫೋಟೋನ ತೋರಿಸಿದ್ದಾರೆ ಸಂತೋಷ್. ಜೊತೆಗೆ ಅವರು ಇದಕ್ಕೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

‘ಚೈಲ್ಡ್ ಚಪಾತಿಗೊಂದು ವಿಡಿಯೋ ಮಾಡಿ. ಎರಡು ವರ್ಷದಿಂದ ಇದೆಲ್ಲ ಮಾಡುತ್ತಿದ್ದೇನೆ ಎಂದು ಅವನು ಹೇಳುತ್ತಿದ್ದಾನೆ. ನಾನು ಈ ಹೋರಿ ಕಟ್ಟಿದಾಗ ಅವನು ಇನ್ನೂ ಚಡ್ಡಿ ಹಾಕುತ್ತಿರಲಿಲ್ಲ’ ಎಂದಿದ್ದಾರೆ ವರ್ತೂರು ಸಂತೋಷ್. ಈ ಮೂಲಕ ಟೀಕೆ ಮಾಡುವವರ ಬಾಯಿ ಮುಚ್ಚಿಸಿದ್ದಾರೆ. ವರ್ತೂರು ಸಂತೋಷ್ ಅವರು ಇತ್ತೀಚೆಗೆ ಹೊಸಕೋಟೆ, ಮಾಲೂರು, ಚನ್ನಪಟ್ಟಣಕ್ಕೆ ತೆರಳಿದ್ದಾರೆ. ಅಲ್ಲೆಲ್ಲ ಅವರಿಗೆ ಭವ್ಯ ಸ್ವಾಗತ ಸಿಕ್ಕಿದೆ. ಅವರನ್ನು ಜನರು ಪ್ರೀತಿಯಿಂದ ಸ್ವಾಗತಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ