AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಚೈಲ್ಡ್ ಚಪಾತಿಗೆ ಈ ವಿಡಿಯೋ’; ವರ್ತೂರು ಸಂತೋಷ್ ಖಡಕ್ ಉತ್ತರ ನೀಡಿದ್ಯಾರಿಗೆ?

ವರ್ತೂರು ಸಂತೋಷ್ ಅವರನ್ನು ಇತ್ತೀಚೆಗೆ ಅನೇಕರು ಟೀಕೆ ಮಾಡಿದ್ದರು. ‘ಹಳ್ಳಿಕಾರ್ ಹೆಸರಲ್ಲಿ ಸಂತೋಷ್ ದುಡ್ಡು ಮಾಡಿದ್ದಾರೆ, ಪ್ರಚಾರಕ್ಕಾಗಿ ಎರಡು ವರ್ಷಗಳಿಂದ ಈ ರೀತಿ ಮಾಡುತ್ತಿದ್ದಾರೆ’ ಎನ್ನುವ ಆರೋಪವನ್ನು ಕೆಲವರು ಮಾಡಿದ್ದರು. ಈ ಎಲ್ಲಾ ಆರೋಪಗಳಿಗೆ ವರ್ತೂರು ಸಂತೋಷ್ ಉತ್ತರ ನೀಡಿದ್ದಾರೆ.

‘ಆ ಚೈಲ್ಡ್ ಚಪಾತಿಗೆ ಈ ವಿಡಿಯೋ’; ವರ್ತೂರು ಸಂತೋಷ್ ಖಡಕ್ ಉತ್ತರ ನೀಡಿದ್ಯಾರಿಗೆ?
ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Feb 10, 2024 | 6:58 AM

Share

ವರ್ತೂರು ಸಂತೋಷ್ (Varthur Santosh) ಹವಾ ಹೆಚ್ಚಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆ ತಲುಪಿದ್ದ ಅವರು ಈಗ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಅವರಿಗೆ ಸಿಕ್ಕ ಜನಪ್ರಿಯತೆ ಯಾವ ಮಟ್ಟದ್ದು ಎಂದು ಅವರಿಗೆ ತಿಳಿಯುತ್ತಿದೆ. ಈ ಕಾರಣಕ್ಕೆ ಅವರು ನೇರವಾಗಿ ಮಾತುಗಳನ್ನಾಡುವುದು ಹೆಚ್ಚಿದೆ. ಈಗ ಸಂತೋಷ್ ಅಭಿಮಾನಿ ವಲಯದಲ್ಲಿ ಒಂದು ವಿಡಿಯೋ ಸಖತ್ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಅಪ್ರಬುದ್ಧ ವ್ಯಕ್ತಿಗಳಿಗೆ ತಿರುಗೇಟು ನೀಡಿದ್ದಾರೆ. ಫ್ಯಾನ್ಸ್ ವಲಯದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ವರ್ತೂರು ಸಂತೋಷ್ ಅವರು ‘ಬಿಗ್ ಬಾಸ್’ ಮನೆ ಸೇರಿದಾಗ ಡಲ್ ಇದ್ದರು. ಹಳ್ಳಿಕಾರ್ ರೈತರ ಹೋರಿಗಳ ಬಗ್ಗೆ ಜನರಿಗೆ ಮಾಹಿತಿ ನೀಡೋದು ಅವರ ಉದ್ದೇಶ ಆಗಿತ್ತು. ಆದರೆ, ಅವರು ತೊಂದರೆಗೆ ಸಿಲುಕಿದ್ದು ಹುಲಿ ಉಗುರು ಪ್ರಕರಣದಿಂದ. ಅವರು ಜೈಲಿಗೆ ಹೋಗಿ ಬರಬೇಕಾಯಿತು. ಬಳಿಕ ಮರಳಿ ಬಿಗ್ ಬಾಸ್​ಗೆ ತೆರಳಿದಾಗ ಅವರ ಆಟ ಸಂಪೂರ್ಣ ಬದಲಾಯಿತು. ಬೇರೆಯದೇ ವರ್ತೂರು ಸಂತೋಷ್ ಆಗಿ ಅವರು ಕಾಣಿಸಿದ್ದಾರೆ.

ವರ್ತೂರು ಸಂತೋಷ್ ವಿಡಿಯೋ

ಇತ್ತೀಚೆಗೆ ವರ್ತೂರು ಸಂತೋಷ್ ಅವರನ್ನು ಅನೇಕರು ಟೀಕೆ ಮಾಡಿದ್ದರು. ‘ಹಳ್ಳಿಕಾರ್ ಹಸುಗಳ ಹೆಸರಲ್ಲಿ ಸಂತೋಷ್ ದುಡ್ಡು ಮಾಡಿದ್ದಾರೆ, ಪ್ರಚಾರಕ್ಕಾಗಿ ಎರಡು ವರ್ಷಗಳಿಂದ ಈ ರೀತಿ ಮಾಡುತ್ತಿದ್ದಾರೆ’ ಎನ್ನುವ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಈ ಎಲ್ಲಾ ಆರೋಪಗಳಿಗೆ ಅವರು ಉತ್ತರ ನೀಡಿದ್ದಾರೆ. ಒಂದು ವಿಡಿಯೋ ಮೂಲಕ ಅವರು ಖಡಕ್ ತಿರುಗೇಟು ನೀಡಿದ್ದಾರೆ. ಚಿಕ್ಕವನಿದ್ದಾಗ ಹೋರಿಗಳ ಜೊತೆ ನಿಂತ ಫೋಟೋನ ತೋರಿಸಿದ್ದಾರೆ ಸಂತೋಷ್. ಜೊತೆಗೆ ಅವರು ಇದಕ್ಕೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ‘ಕಾರ್ತಿಕ್​ಗೂ ಇಷ್ಟು ಹೈಪ್ ಇಲ್ಲ’; ವರ್ತೂರು ಸಂತೋಷ್​ಗೆ ಸಿಕ್ಕ ಸ್ವಾಗತ ನೋಡಿ ಅಭಿಪ್ರಾಯ ತಿಳಿಸಿದ ಫ್ಯಾನ್ಸ್

‘ಚೈಲ್ಡ್ ಚಪಾತಿಗೊಂದು ವಿಡಿಯೋ ಮಾಡಿ. ಎರಡು ವರ್ಷದಿಂದ ಇದೆಲ್ಲ ಮಾಡುತ್ತಿದ್ದೇನೆ ಎಂದು ಅವನು ಹೇಳುತ್ತಿದ್ದಾನೆ. ನಾನು ಈ ಹೋರಿ ಕಟ್ಟಿದಾಗ ಅವನು ಇನ್ನೂ ಚಡ್ಡಿ ಹಾಕುತ್ತಿರಲಿಲ್ಲ’ ಎಂದಿದ್ದಾರೆ ವರ್ತೂರು ಸಂತೋಷ್. ಈ ಮೂಲಕ ಟೀಕೆ ಮಾಡುವವರ ಬಾಯಿ ಮುಚ್ಚಿಸಿದ್ದಾರೆ. ವರ್ತೂರು ಸಂತೋಷ್ ಅವರು ಇತ್ತೀಚೆಗೆ ಹೊಸಕೋಟೆ, ಮಾಲೂರು, ಚನ್ನಪಟ್ಟಣಕ್ಕೆ ತೆರಳಿದ್ದಾರೆ. ಅಲ್ಲೆಲ್ಲ ಅವರಿಗೆ ಭವ್ಯ ಸ್ವಾಗತ ಸಿಕ್ಕಿದೆ. ಅವರನ್ನು ಜನರು ಪ್ರೀತಿಯಿಂದ ಸ್ವಾಗತಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!